ಆರ್.ಸಿ.ಬಿ ವಿಜಯೋತ್ಸವ ನೂಕುನುಗ್ಗಲು ಪ್ರಕರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಐಪಿಎಲ್ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಕ್ಷೇಮ ವಿಚಾರಿಸಲಾಯಿತು. ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ನಿರೀಕ್ಷೆ ಮೀರಿ ಜನಪ್ರವಾಹ ಹರಿದು ಬಂದ ಹಿನ್ನೆಲೆಯಲ್ಲಿ ಉಂಟಾಗಿರುವ ದುರಂತದಲ್ಲಿ 11 ಮಂದಿಗೂ ಹೆಚ್ಚು ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವುದು ಹಾಗೂ ಹಲವರು ಸಾವು ಬದುಕಿನ ನಡುವೆ ಹೋರಾಡುತ್ತಿರುವುದು ಅತ್ಯಂತ ನೋವಿನ ಸಂಗತಿ. ನೂರಾರು ಸಂಖ್ಯೆಯ ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಹೃದಯವಿದ್ರಾವಕ ಘಟನೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸುವಂತಾಗಿದೆ ಎಂದು ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ರಾಜ್ಯ ಸರ್ಕಾರ ಈ ಕೂಡಲೇ ನೊಂದ ಕುಟುಂಬಗಳಿಗೆ ಆತ್ಮವಿಶ್ವಾಸ ತುಂಬಬೇಕು, ಸಾಂತ್ವನ ಹೇಳಬೇಕು ಹಾಗೂ ಸೂಕ್ತ ಪರಿಹಾರ ಘೋಷಿಸಬೇಕು, ಅಸ್ವಸ್ಥತೆಯಿಂದ ಚಿಕಿತ್ಸೆ ಅವಶ್ಯಕತೆ ಇರುವವರಿಗೆ ತಕ್ಷಣ ಸೂಕ್ತ ಚಿಕಿತ್ಸೆ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಆರ್‌ಸಿಬಿ ವಿಜಯದ ನಂತರ ಇಡೀ ರಾಜ್ಯದಲ್ಲಿ ಬೆಂಗಳೂರೂ ಸೇರಿದಂತೆ ಕೆಲ ಪ್ರಮುಖ ನಗರಗಳಲ್ಲಿ ಜನರು ವಿಜಯೋತ್ಸವದಲ್ಲಿ ಮುಳುಗಿದ್ದು ಅಭಿಮಾನಿಗಳ ಸಂಭ್ರಮಾಚರಣೆಯ ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸಲಾಗದ ಸ್ಥಿತಿ ನಿನ್ನೆಯೇ ಉದ್ಬವಿಸಿತ್ತು ಎಂದರು.

ಈ ಹಿನ್ನೆಲೆಯಲ್ಲಿ ಇಂದೇ ಸಂಭ್ರಮಾಚರಣೆ ಆಚರಿಸುವ ಕುರಿತು ಸೇರಬಹುದಾದ ಜನರ ಲೆಕ್ಕಾಚಾರವನ್ನು ಅಂದಾಜಿಸಿ ಸರ್ಕಾರ ವಿವೇಚಿಸಿ ನಿರ್ಧಾರ ತೆಗೆದುಕೊಳ್ಳಬಹುದಾಗಿತ್ತು, ಆದರೆ ಆ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ಪರಿಸ್ಥಿತಿ ಕೈಮೀರುವ ಹಂತವನ್ನು ಅಂದಾಜಿಸಿ ಮತ್ತೊಂದು ದಿನಾಂಕವನ್ನು ನಿಗದಿಪಡಿಸಬಹುದಾಗಿತ್ತು, ಆದರೆ ಆತುರದ ನಿರ್ಧಾರದಿಂದ ಈ ರೀತಿಯ ದುರ್ಘಟನೆ ಸಂಭವಿಸಿದೆ. ಇದರ ಹೊಣೆ ಯಾರು ಹೊರಬೇಕು? ಎಂಬುದನ್ನು ಸರ್ಕಾರ ವಿವೇಚಿಸಲಿ. ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿಭಾಯಿಸಲಾಗದ ವೈಫಲ್ಯದ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸುವೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

3 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

4 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

7 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

16 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago