ಆರ್.ಸಿ.ಬಿ ವಿಜಯೋತ್ಸವ ನೂಕುನುಗ್ಗಲು ಪ್ರಕರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಐಪಿಎಲ್ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಕ್ಷೇಮ ವಿಚಾರಿಸಲಾಯಿತು. ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ನಿರೀಕ್ಷೆ ಮೀರಿ ಜನಪ್ರವಾಹ ಹರಿದು ಬಂದ ಹಿನ್ನೆಲೆಯಲ್ಲಿ ಉಂಟಾಗಿರುವ ದುರಂತದಲ್ಲಿ 11 ಮಂದಿಗೂ ಹೆಚ್ಚು ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವುದು ಹಾಗೂ ಹಲವರು ಸಾವು ಬದುಕಿನ ನಡುವೆ ಹೋರಾಡುತ್ತಿರುವುದು ಅತ್ಯಂತ ನೋವಿನ ಸಂಗತಿ. ನೂರಾರು ಸಂಖ್ಯೆಯ ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಹೃದಯವಿದ್ರಾವಕ ಘಟನೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸುವಂತಾಗಿದೆ ಎಂದು ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ರಾಜ್ಯ ಸರ್ಕಾರ ಈ ಕೂಡಲೇ ನೊಂದ ಕುಟುಂಬಗಳಿಗೆ ಆತ್ಮವಿಶ್ವಾಸ ತುಂಬಬೇಕು, ಸಾಂತ್ವನ ಹೇಳಬೇಕು ಹಾಗೂ ಸೂಕ್ತ ಪರಿಹಾರ ಘೋಷಿಸಬೇಕು, ಅಸ್ವಸ್ಥತೆಯಿಂದ ಚಿಕಿತ್ಸೆ ಅವಶ್ಯಕತೆ ಇರುವವರಿಗೆ ತಕ್ಷಣ ಸೂಕ್ತ ಚಿಕಿತ್ಸೆ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಆರ್‌ಸಿಬಿ ವಿಜಯದ ನಂತರ ಇಡೀ ರಾಜ್ಯದಲ್ಲಿ ಬೆಂಗಳೂರೂ ಸೇರಿದಂತೆ ಕೆಲ ಪ್ರಮುಖ ನಗರಗಳಲ್ಲಿ ಜನರು ವಿಜಯೋತ್ಸವದಲ್ಲಿ ಮುಳುಗಿದ್ದು ಅಭಿಮಾನಿಗಳ ಸಂಭ್ರಮಾಚರಣೆಯ ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸಲಾಗದ ಸ್ಥಿತಿ ನಿನ್ನೆಯೇ ಉದ್ಬವಿಸಿತ್ತು ಎಂದರು.

ಈ ಹಿನ್ನೆಲೆಯಲ್ಲಿ ಇಂದೇ ಸಂಭ್ರಮಾಚರಣೆ ಆಚರಿಸುವ ಕುರಿತು ಸೇರಬಹುದಾದ ಜನರ ಲೆಕ್ಕಾಚಾರವನ್ನು ಅಂದಾಜಿಸಿ ಸರ್ಕಾರ ವಿವೇಚಿಸಿ ನಿರ್ಧಾರ ತೆಗೆದುಕೊಳ್ಳಬಹುದಾಗಿತ್ತು, ಆದರೆ ಆ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ಪರಿಸ್ಥಿತಿ ಕೈಮೀರುವ ಹಂತವನ್ನು ಅಂದಾಜಿಸಿ ಮತ್ತೊಂದು ದಿನಾಂಕವನ್ನು ನಿಗದಿಪಡಿಸಬಹುದಾಗಿತ್ತು, ಆದರೆ ಆತುರದ ನಿರ್ಧಾರದಿಂದ ಈ ರೀತಿಯ ದುರ್ಘಟನೆ ಸಂಭವಿಸಿದೆ. ಇದರ ಹೊಣೆ ಯಾರು ಹೊರಬೇಕು? ಎಂಬುದನ್ನು ಸರ್ಕಾರ ವಿವೇಚಿಸಲಿ. ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿಭಾಯಿಸಲಾಗದ ವೈಫಲ್ಯದ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸುವೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

2 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

4 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

5 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

19 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

22 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago