ಆರ್.ಸಿ.ಬಿ ವಿಜಯೋತ್ಸವ ನೂಕುನುಗ್ಗಲು ಪ್ರಕರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಐಪಿಎಲ್ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಕ್ಷೇಮ ವಿಚಾರಿಸಲಾಯಿತು. ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ನಿರೀಕ್ಷೆ ಮೀರಿ ಜನಪ್ರವಾಹ ಹರಿದು ಬಂದ ಹಿನ್ನೆಲೆಯಲ್ಲಿ ಉಂಟಾಗಿರುವ ದುರಂತದಲ್ಲಿ 11 ಮಂದಿಗೂ ಹೆಚ್ಚು ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವುದು ಹಾಗೂ ಹಲವರು ಸಾವು ಬದುಕಿನ ನಡುವೆ ಹೋರಾಡುತ್ತಿರುವುದು ಅತ್ಯಂತ ನೋವಿನ ಸಂಗತಿ. ನೂರಾರು ಸಂಖ್ಯೆಯ ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಹೃದಯವಿದ್ರಾವಕ ಘಟನೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸುವಂತಾಗಿದೆ ಎಂದು ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ರಾಜ್ಯ ಸರ್ಕಾರ ಈ ಕೂಡಲೇ ನೊಂದ ಕುಟುಂಬಗಳಿಗೆ ಆತ್ಮವಿಶ್ವಾಸ ತುಂಬಬೇಕು, ಸಾಂತ್ವನ ಹೇಳಬೇಕು ಹಾಗೂ ಸೂಕ್ತ ಪರಿಹಾರ ಘೋಷಿಸಬೇಕು, ಅಸ್ವಸ್ಥತೆಯಿಂದ ಚಿಕಿತ್ಸೆ ಅವಶ್ಯಕತೆ ಇರುವವರಿಗೆ ತಕ್ಷಣ ಸೂಕ್ತ ಚಿಕಿತ್ಸೆ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಆರ್‌ಸಿಬಿ ವಿಜಯದ ನಂತರ ಇಡೀ ರಾಜ್ಯದಲ್ಲಿ ಬೆಂಗಳೂರೂ ಸೇರಿದಂತೆ ಕೆಲ ಪ್ರಮುಖ ನಗರಗಳಲ್ಲಿ ಜನರು ವಿಜಯೋತ್ಸವದಲ್ಲಿ ಮುಳುಗಿದ್ದು ಅಭಿಮಾನಿಗಳ ಸಂಭ್ರಮಾಚರಣೆಯ ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸಲಾಗದ ಸ್ಥಿತಿ ನಿನ್ನೆಯೇ ಉದ್ಬವಿಸಿತ್ತು ಎಂದರು.

ಈ ಹಿನ್ನೆಲೆಯಲ್ಲಿ ಇಂದೇ ಸಂಭ್ರಮಾಚರಣೆ ಆಚರಿಸುವ ಕುರಿತು ಸೇರಬಹುದಾದ ಜನರ ಲೆಕ್ಕಾಚಾರವನ್ನು ಅಂದಾಜಿಸಿ ಸರ್ಕಾರ ವಿವೇಚಿಸಿ ನಿರ್ಧಾರ ತೆಗೆದುಕೊಳ್ಳಬಹುದಾಗಿತ್ತು, ಆದರೆ ಆ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ಪರಿಸ್ಥಿತಿ ಕೈಮೀರುವ ಹಂತವನ್ನು ಅಂದಾಜಿಸಿ ಮತ್ತೊಂದು ದಿನಾಂಕವನ್ನು ನಿಗದಿಪಡಿಸಬಹುದಾಗಿತ್ತು, ಆದರೆ ಆತುರದ ನಿರ್ಧಾರದಿಂದ ಈ ರೀತಿಯ ದುರ್ಘಟನೆ ಸಂಭವಿಸಿದೆ. ಇದರ ಹೊಣೆ ಯಾರು ಹೊರಬೇಕು? ಎಂಬುದನ್ನು ಸರ್ಕಾರ ವಿವೇಚಿಸಲಿ. ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿಭಾಯಿಸಲಾಗದ ವೈಫಲ್ಯದ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸುವೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

4 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

5 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

6 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

7 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

14 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago