ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಐಪಿಎಲ್ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಕ್ಷೇಮ ವಿಚಾರಿಸಲಾಯಿತು. ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ನಿರೀಕ್ಷೆ ಮೀರಿ ಜನಪ್ರವಾಹ ಹರಿದು ಬಂದ ಹಿನ್ನೆಲೆಯಲ್ಲಿ ಉಂಟಾಗಿರುವ ದುರಂತದಲ್ಲಿ 11 ಮಂದಿಗೂ ಹೆಚ್ಚು ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವುದು ಹಾಗೂ ಹಲವರು ಸಾವು ಬದುಕಿನ ನಡುವೆ ಹೋರಾಡುತ್ತಿರುವುದು ಅತ್ಯಂತ ನೋವಿನ ಸಂಗತಿ. ನೂರಾರು ಸಂಖ್ಯೆಯ ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಹೃದಯವಿದ್ರಾವಕ ಘಟನೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ರಾಜ್ಯ ಸರ್ಕಾರ ಈ ಕೂಡಲೇ ನೊಂದ ಕುಟುಂಬಗಳಿಗೆ ಆತ್ಮವಿಶ್ವಾಸ ತುಂಬಬೇಕು, ಸಾಂತ್ವನ ಹೇಳಬೇಕು ಹಾಗೂ ಸೂಕ್ತ ಪರಿಹಾರ ಘೋಷಿಸಬೇಕು, ಅಸ್ವಸ್ಥತೆಯಿಂದ ಚಿಕಿತ್ಸೆ ಅವಶ್ಯಕತೆ ಇರುವವರಿಗೆ ತಕ್ಷಣ ಸೂಕ್ತ ಚಿಕಿತ್ಸೆ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಆರ್ಸಿಬಿ ವಿಜಯದ ನಂತರ ಇಡೀ ರಾಜ್ಯದಲ್ಲಿ ಬೆಂಗಳೂರೂ ಸೇರಿದಂತೆ ಕೆಲ ಪ್ರಮುಖ ನಗರಗಳಲ್ಲಿ ಜನರು ವಿಜಯೋತ್ಸವದಲ್ಲಿ ಮುಳುಗಿದ್ದು ಅಭಿಮಾನಿಗಳ ಸಂಭ್ರಮಾಚರಣೆಯ ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸಲಾಗದ ಸ್ಥಿತಿ ನಿನ್ನೆಯೇ ಉದ್ಬವಿಸಿತ್ತು ಎಂದರು.
ಈ ಹಿನ್ನೆಲೆಯಲ್ಲಿ ಇಂದೇ ಸಂಭ್ರಮಾಚರಣೆ ಆಚರಿಸುವ ಕುರಿತು ಸೇರಬಹುದಾದ ಜನರ ಲೆಕ್ಕಾಚಾರವನ್ನು ಅಂದಾಜಿಸಿ ಸರ್ಕಾರ ವಿವೇಚಿಸಿ ನಿರ್ಧಾರ ತೆಗೆದುಕೊಳ್ಳಬಹುದಾಗಿತ್ತು, ಆದರೆ ಆ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ಪರಿಸ್ಥಿತಿ ಕೈಮೀರುವ ಹಂತವನ್ನು ಅಂದಾಜಿಸಿ ಮತ್ತೊಂದು ದಿನಾಂಕವನ್ನು ನಿಗದಿಪಡಿಸಬಹುದಾಗಿತ್ತು, ಆದರೆ ಆತುರದ ನಿರ್ಧಾರದಿಂದ ಈ ರೀತಿಯ ದುರ್ಘಟನೆ ಸಂಭವಿಸಿದೆ. ಇದರ ಹೊಣೆ ಯಾರು ಹೊರಬೇಕು? ಎಂಬುದನ್ನು ಸರ್ಕಾರ ವಿವೇಚಿಸಲಿ. ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿಭಾಯಿಸಲಾಗದ ವೈಫಲ್ಯದ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸುವೆ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…