ಎಟಿಎಂ ಹಣ ತುಂಬುವ ವ್ಯಾನ್ನಲ್ಲಿದ್ದ 66 ಲಕ್ಷ ಹಣವನ್ನು ಕಳ್ಳರು ಕದ್ದು ಆಲದ ಮರದ ಬುಡದಲ್ಲಿ ಬಚ್ಚಿಟ್ಟಿದ್ದಾರೆ.
ಆಂಧ್ರಪ್ರದೇಶದ ಒಂಗೋಲ್ ಪಟ್ಟಣದಲ್ಲಿ ಗುರುವಾರ ಎಟಿಎಂನಲ್ಲಿ ಹಣ ತುಂಬುವ ವ್ಯಾನ್ನಿಂದ ₹66 ಲಕ್ಷ ದೋಚಿದ್ದ ದುಷ್ಕರ್ಮಿಗಳನ್ನು ಪ್ರಕಾಶಂ ಪೊಲೀಸರು ಬಂಧಿಸಿದ್ದಾರೆ. ಕಳವು ಮಾಡಿದ ಸಂಪೂರ್ಣ ಹಣವನ್ನು ಆಲದ ಮರದ ಬುಡದಲ್ಲಿ ಬಚ್ಚಿಟ್ಟಿರುವುದು ಪತ್ತೆಯಾಗಿದೆ.
ಒಂಗೋಲ್ನ ಪಂಜಾಬ್ ನ್ಯಾಷನಲ್ ಬ್ಯಾಂಕ್ ಎಟಿಎಂ ಬಳಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಸಿಎಂಎಸ್ ಮಾಜಿ ಉದ್ಯೋಗಿ ಸಣ್ಣಮೂರು ಮಹೇಶ್ ಬಾಬು (22), ರಾಚರ್ಲ ರಾಜಶೇಖರ್ (19), ಸಿಎಂಎಸ್ ಒಂಗೋಲ್ ಶಾಖಾ ವ್ಯವಸ್ಥಾಪಕ ಗುಜ್ಜುಲ ವೆಂಕಟ ಕೊಂಡರೆಡ್ಡಿ (40) ಎಂದು ಗುರುತಿಸಲಾಗಿದೆ.
ಪ್ರಕಾಶಂ ಎಸ್ಪಿ ಗರುಡ್ ಸುಮಿತ್ ಔನಿಲ್ ಮಾತನಾಡಿ, ಸಿಎಂಎಸ್ ಸೆಕ್ಯುರಿಟಿ ಕಂಪನಿ ಸಿಬ್ಬಂದಿ ವಿವಿಧ ಎಟಿಎಂಗಳಲ್ಲಿ ನಗದು ತುಂಬಲು ತಮ್ಮ ಶಾಖೆಯಿಂದ ₹ 68 ಲಕ್ಷ ತೆಗೆದುಕೊಂಡಿದ್ದಾರೆ. ಕರ್ನೂಲ್ ರಸ್ತೆಯ ವರ್ಮಾ ಹೋಟೆಲ್ ಬಳಿ ವಾಹನ ನಿಲ್ಲಿಸಿ ಊಟಕ್ಕೆ ತೆರಳಿದ್ದರು. ಹಿಂತಿರುಗಿ ನೋಡಿದಾಗ ₹66 ಲಕ್ಷ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…