ಆಲದ ಮರದ ಬುಡದಲ್ಲಿ 66 ಲಕ್ಷ ಹಣ ಪತ್ತೆ

ಎಟಿಎಂ ಹಣ ತುಂಬುವ ವ್ಯಾನ್‌ನಲ್ಲಿದ್ದ 66 ಲಕ್ಷ ಹಣವನ್ನು ಕಳ್ಳರು ಕದ್ದು ಆಲದ ಮರದ ಬುಡದಲ್ಲಿ ಬಚ್ಚಿಟ್ಟಿದ್ದಾರೆ.

ಆಂಧ್ರಪ್ರದೇಶದ ಒಂಗೋಲ್ ಪಟ್ಟಣದಲ್ಲಿ ಗುರುವಾರ ಎಟಿಎಂನಲ್ಲಿ ಹಣ ತುಂಬುವ ವ್ಯಾನ್‌ನಿಂದ ₹66 ಲಕ್ಷ ದೋಚಿದ್ದ ದುಷ್ಕರ್ಮಿಗಳನ್ನು ಪ್ರಕಾಶಂ ಪೊಲೀಸರು ಬಂಧಿಸಿದ್ದಾರೆ.  ಕಳವು ಮಾಡಿದ ಸಂಪೂರ್ಣ ಹಣವನ್ನು ಆಲದ ಮರದ ಬುಡದಲ್ಲಿ ಬಚ್ಚಿಟ್ಟಿರುವುದು ಪತ್ತೆಯಾಗಿದೆ.

 ಒಂಗೋಲ್‌ನ ಪಂಜಾಬ್ ನ್ಯಾಷನಲ್ ಬ್ಯಾಂಕ್ ಎಟಿಎಂ ಬಳಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಸಿಎಂಎಸ್ ಮಾಜಿ ಉದ್ಯೋಗಿ ಸಣ್ಣಮೂರು ಮಹೇಶ್ ಬಾಬು (22), ರಾಚರ್ಲ ರಾಜಶೇಖರ್ (19), ಸಿಎಂಎಸ್ ಒಂಗೋಲ್ ಶಾಖಾ ವ್ಯವಸ್ಥಾಪಕ ಗುಜ್ಜುಲ ವೆಂಕಟ ಕೊಂಡರೆಡ್ಡಿ (40) ಎಂದು ಗುರುತಿಸಲಾಗಿದೆ.

 ಪ್ರಕಾಶಂ ಎಸ್ಪಿ ಗರುಡ್ ಸುಮಿತ್ ಔನಿಲ್ ಮಾತನಾಡಿ, ಸಿಎಂಎಸ್ ಸೆಕ್ಯುರಿಟಿ ಕಂಪನಿ ಸಿಬ್ಬಂದಿ ವಿವಿಧ ಎಟಿಎಂಗಳಲ್ಲಿ ನಗದು ತುಂಬಲು ತಮ್ಮ ಶಾಖೆಯಿಂದ ₹ 68 ಲಕ್ಷ ತೆಗೆದುಕೊಂಡಿದ್ದಾರೆ. ಕರ್ನೂಲ್ ರಸ್ತೆಯ ವರ್ಮಾ ಹೋಟೆಲ್ ಬಳಿ ವಾಹನ ನಿಲ್ಲಿಸಿ ಊಟಕ್ಕೆ ತೆರಳಿದ್ದರು.  ಹಿಂತಿರುಗಿ ನೋಡಿದಾಗ ₹66 ಲಕ್ಷ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

9 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

13 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

14 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

21 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago