ಆಲದ ಮರದ ಬುಡದಲ್ಲಿ 66 ಲಕ್ಷ ಹಣ ಪತ್ತೆ

ಎಟಿಎಂ ಹಣ ತುಂಬುವ ವ್ಯಾನ್‌ನಲ್ಲಿದ್ದ 66 ಲಕ್ಷ ಹಣವನ್ನು ಕಳ್ಳರು ಕದ್ದು ಆಲದ ಮರದ ಬುಡದಲ್ಲಿ ಬಚ್ಚಿಟ್ಟಿದ್ದಾರೆ.

ಆಂಧ್ರಪ್ರದೇಶದ ಒಂಗೋಲ್ ಪಟ್ಟಣದಲ್ಲಿ ಗುರುವಾರ ಎಟಿಎಂನಲ್ಲಿ ಹಣ ತುಂಬುವ ವ್ಯಾನ್‌ನಿಂದ ₹66 ಲಕ್ಷ ದೋಚಿದ್ದ ದುಷ್ಕರ್ಮಿಗಳನ್ನು ಪ್ರಕಾಶಂ ಪೊಲೀಸರು ಬಂಧಿಸಿದ್ದಾರೆ.  ಕಳವು ಮಾಡಿದ ಸಂಪೂರ್ಣ ಹಣವನ್ನು ಆಲದ ಮರದ ಬುಡದಲ್ಲಿ ಬಚ್ಚಿಟ್ಟಿರುವುದು ಪತ್ತೆಯಾಗಿದೆ.

 ಒಂಗೋಲ್‌ನ ಪಂಜಾಬ್ ನ್ಯಾಷನಲ್ ಬ್ಯಾಂಕ್ ಎಟಿಎಂ ಬಳಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಸಿಎಂಎಸ್ ಮಾಜಿ ಉದ್ಯೋಗಿ ಸಣ್ಣಮೂರು ಮಹೇಶ್ ಬಾಬು (22), ರಾಚರ್ಲ ರಾಜಶೇಖರ್ (19), ಸಿಎಂಎಸ್ ಒಂಗೋಲ್ ಶಾಖಾ ವ್ಯವಸ್ಥಾಪಕ ಗುಜ್ಜುಲ ವೆಂಕಟ ಕೊಂಡರೆಡ್ಡಿ (40) ಎಂದು ಗುರುತಿಸಲಾಗಿದೆ.

 ಪ್ರಕಾಶಂ ಎಸ್ಪಿ ಗರುಡ್ ಸುಮಿತ್ ಔನಿಲ್ ಮಾತನಾಡಿ, ಸಿಎಂಎಸ್ ಸೆಕ್ಯುರಿಟಿ ಕಂಪನಿ ಸಿಬ್ಬಂದಿ ವಿವಿಧ ಎಟಿಎಂಗಳಲ್ಲಿ ನಗದು ತುಂಬಲು ತಮ್ಮ ಶಾಖೆಯಿಂದ ₹ 68 ಲಕ್ಷ ತೆಗೆದುಕೊಂಡಿದ್ದಾರೆ. ಕರ್ನೂಲ್ ರಸ್ತೆಯ ವರ್ಮಾ ಹೋಟೆಲ್ ಬಳಿ ವಾಹನ ನಿಲ್ಲಿಸಿ ಊಟಕ್ಕೆ ತೆರಳಿದ್ದರು.  ಹಿಂತಿರುಗಿ ನೋಡಿದಾಗ ₹66 ಲಕ್ಷ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

Ramesh Babu

Journalist

Recent Posts

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

3 hours ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

5 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

6 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

20 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

22 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

1 day ago