ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್ ಡಿ ಎಂ ಸಿ ಹಾಗೂ ಶಿಕ್ಷಕ ವೃಂದ, ಸಾರ್ವಜನಿಕರ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು.

ಈ ವೇಳೆ ಮಾತನಾಡಿದ ಸಹ ಶಿಕ್ಷಕ ಅರುಣ್, ನಾನು ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಸುಮಾರು 13 ವರ್ಷ 6 ತಿಂಗಳು ಮಕ್ಕಳಿಗೆ ಕನ್ನಡ ಹಾಗೂ ಇಂಗ್ಲೀಷ್ ಪಾಠ ಮಾಡುತ್ತಿದ್ದೆ. ಇದೀಗ ಬಾಶೆಟ್ಟಿಹಳ್ಳಿ ಅಜಾಕ್ಸ್ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ವರ್ಗಾವಣೆಗೊಂಡಿದ್ದೇನೆ. ಮಕ್ಕಳಿಗೆ ಉತ್ತಮ ಭವಿಷ್ಯವನ್ನು ರೂಪಿಸುವ ಜವಾಬ್ದಾರಿಯೇ ತಮಗೆ ಸಿಗುವ ನಿಜವಾದ ಪ್ರಶಸ್ತಿ. ಬಹಳ‌ ನೋವಿನಿಂದ ಈ‌ ಶಾಲೆಯನ್ನು ಬಿಟ್ಟು‌ಹೋಗುತ್ತಿದ್ದೇನೆ. ಮುಂದಿನ‌‌ ದಿನಗಳಲ್ಲಿ ಈ ಶಾಲೆಯಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕರೆ ಖಂಡಿತಾ ಯಾವುದೇ ಮಿಸ್ ಮಾಡಿಕೊಳ್ಳುವುದಿಲ್ಲ ಎಂದು ನುಡಿಗಳನ್ನಾಡಿದರು.

ನಂತರ ಎಸ್ ಡಿಎಂಸಿ ಅಧ್ಯಕ್ಷ ಅಜಯ್ ಮಾತನಾಡಿ, ಅರುಣ್ ಅವರು ಮಕ್ಕಳ ಪ್ರೀತಿಯ ಶಿಕ್ಷಕರಾಗಿದ್ದು, ಇತ್ತೀಚಿಗಷ್ಟೇ ಅವರಿಗೆ ವರ್ಗಾವಣೆಯಾಗಿದೆ. ಈ ವಿಷಯ ಮಕ್ಕಳಿಗೆ ಹಾಗೂ ನಮಗೆ ತೀವ್ರ ಆಘಾತವನ್ನುಂಟು ಮಾಡಿದೆ. ನಮ್ಮ ಕುಟುಂಬದಿಂದ ಒಬ್ಬ ಸದಸ್ಯನನ್ನು ಬೇರೆಡೆ ಕಳುಹಿಸುಕೊಡುತ್ತಿದ್ದೇವೆ ಎಂಬ ಭಾಸವಾಗುತ್ತಿದೆ. ಮುಂದೆ ನಮ್ಮ ಶಾಲೆಗೆ ಶಿಕ್ಷಕನಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಮಕ್ಕಳು ಶಾಲೆಯ ಗೇಟ್​ ಬಳಿ ಅಳುತ್ತಾ ನಿಂತು ಅರುಣ್ ಸರ್ ಪ್ಲೀಸ್​​ ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ಅತ್ತಿದ್ದಾರೆ. ಮಕ್ಕಳ ಪ್ರೀತಿಯನ್ನು ಕಂಡು ಶಿಕ್ಷಕ ಅರುಣ್ ಕೂಡ ಭಾವುಕರಾಗಿದ್ದಾರೆ.

ಈ ವೇಳೆ ಶಾಲಾ ಶಿಕ್ಷಕರು, ಎಸ್ ಡಿಎಂಸಿ ಸದಸ್ಯರು, ಸಾರ್ವಜನಿಕರು, ಪೋಷಕರು, ಮಕ್ಕಳು ಉಪಸ್ಥಿತರುದ್ದರು…

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 hour ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

6 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

19 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

23 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

23 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago