ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್ ಡಿ ಎಂ ಸಿ ಹಾಗೂ ಶಿಕ್ಷಕ ವೃಂದ, ಸಾರ್ವಜನಿಕರ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು.

ಈ ವೇಳೆ ಮಾತನಾಡಿದ ಸಹ ಶಿಕ್ಷಕ ಅರುಣ್, ನಾನು ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಸುಮಾರು 13 ವರ್ಷ 6 ತಿಂಗಳು ಮಕ್ಕಳಿಗೆ ಕನ್ನಡ ಹಾಗೂ ಇಂಗ್ಲೀಷ್ ಪಾಠ ಮಾಡುತ್ತಿದ್ದೆ. ಇದೀಗ ಬಾಶೆಟ್ಟಿಹಳ್ಳಿ ಅಜಾಕ್ಸ್ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ವರ್ಗಾವಣೆಗೊಂಡಿದ್ದೇನೆ. ಮಕ್ಕಳಿಗೆ ಉತ್ತಮ ಭವಿಷ್ಯವನ್ನು ರೂಪಿಸುವ ಜವಾಬ್ದಾರಿಯೇ ತಮಗೆ ಸಿಗುವ ನಿಜವಾದ ಪ್ರಶಸ್ತಿ. ಬಹಳ‌ ನೋವಿನಿಂದ ಈ‌ ಶಾಲೆಯನ್ನು ಬಿಟ್ಟು‌ಹೋಗುತ್ತಿದ್ದೇನೆ. ಮುಂದಿನ‌‌ ದಿನಗಳಲ್ಲಿ ಈ ಶಾಲೆಯಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕರೆ ಖಂಡಿತಾ ಯಾವುದೇ ಮಿಸ್ ಮಾಡಿಕೊಳ್ಳುವುದಿಲ್ಲ ಎಂದು ನುಡಿಗಳನ್ನಾಡಿದರು.

ನಂತರ ಎಸ್ ಡಿಎಂಸಿ ಅಧ್ಯಕ್ಷ ಅಜಯ್ ಮಾತನಾಡಿ, ಅರುಣ್ ಅವರು ಮಕ್ಕಳ ಪ್ರೀತಿಯ ಶಿಕ್ಷಕರಾಗಿದ್ದು, ಇತ್ತೀಚಿಗಷ್ಟೇ ಅವರಿಗೆ ವರ್ಗಾವಣೆಯಾಗಿದೆ. ಈ ವಿಷಯ ಮಕ್ಕಳಿಗೆ ಹಾಗೂ ನಮಗೆ ತೀವ್ರ ಆಘಾತವನ್ನುಂಟು ಮಾಡಿದೆ. ನಮ್ಮ ಕುಟುಂಬದಿಂದ ಒಬ್ಬ ಸದಸ್ಯನನ್ನು ಬೇರೆಡೆ ಕಳುಹಿಸುಕೊಡುತ್ತಿದ್ದೇವೆ ಎಂಬ ಭಾಸವಾಗುತ್ತಿದೆ. ಮುಂದೆ ನಮ್ಮ ಶಾಲೆಗೆ ಶಿಕ್ಷಕನಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಮಕ್ಕಳು ಶಾಲೆಯ ಗೇಟ್​ ಬಳಿ ಅಳುತ್ತಾ ನಿಂತು ಅರುಣ್ ಸರ್ ಪ್ಲೀಸ್​​ ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ಅತ್ತಿದ್ದಾರೆ. ಮಕ್ಕಳ ಪ್ರೀತಿಯನ್ನು ಕಂಡು ಶಿಕ್ಷಕ ಅರುಣ್ ಕೂಡ ಭಾವುಕರಾಗಿದ್ದಾರೆ.

ಈ ವೇಳೆ ಶಾಲಾ ಶಿಕ್ಷಕರು, ಎಸ್ ಡಿಎಂಸಿ ಸದಸ್ಯರು, ಸಾರ್ವಜನಿಕರು, ಪೋಷಕರು, ಮಕ್ಕಳು ಉಪಸ್ಥಿತರುದ್ದರು…

Ramesh Babu

Journalist

Recent Posts

ಭಾರೀ ಸಿಡಿಲಿಗೆ ಎರಡು ಸೀಮೆ ಹಸುಗಳ ಸಾವು

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಾವಲಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪ ಮಂಗಳವಾರ ಸಂಜೆ ಸಿಡಿಲು ಬಡಿದ ಪರಿಣಾಮ ಎರಡು…

3 hours ago

56,432 ಹುದ್ದೆಗಳ ನೇರ ನೇಮಕಾತಿಗಾಗಿ ತುರ್ತು ಕ್ರಮ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲು ನೀಡುವ ವಿಚಾರದಲ್ಲಿ ನಮ್ಮ ಸರ್ಕಾರವು ಕೈಗೊಂಡಿರುವ ಮಹತ್ವದ ನಿರ್ಧಾರದ ಅನ್ವಯ ಮಾನ್ಯ ಉಚ್ಚ ನ್ಯಾಯಾಲಯದ ಆದೇಶಕ್ಕೆ…

4 hours ago

ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ

ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವಾರಗಳ ಫ್ಯಾಷನ್ ಡಿಸೈನ್/ಬ್ಯೂಟಿಷಿಯನ್ ಕೌಶಲ್ಯ ಆಧಾರಿತ ಉದ್ಯಮಶೀಲತಾ ಕಾರ್ಯಕ್ರಮವನ್ನು ಮೇ ತಿಂಗಳ ಮೊದಲನೇ…

4 hours ago

ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ದುರ್ಮರಣ ಪ್ರಕರಣ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…

14 hours ago

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

1 day ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

1 day ago