ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಆಲಿಕಲ್ಲು ಸಹಿತ ಭಾರೀ ಮಳೆಗೆ ತಾಲೂಕಿನ ಹಲವೆಡೆ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ನಗರದ ತಾಲ್ಲೂಕು ಕಚೇರಿ ರಸ್ತೆ, ಕಾಳಮ್ಮ ರಸ್ತೆ, ತೇರಿನ ಬೀದಿ – ಭುವನೇಶ್ವರಿ ರಸ್ತೆಗಳು ಸಂಪೂರ್ಣ ಜಲಾವೃತವಾಗಿದೆ. ರಸ್ತೆಗೆ ಚರಂಡಿ ನೀರು ಬಂದಿರುವುದರಿಂದ ಗಬ್ಬು ವಾಸನೆಯಿಂದಾಗಿ ಸಾರ್ವಜನಿಕರು ಓಡಾಡಲು ಕಷ್ಟಕರವಾಗಿದೆ.
ಹಲವೆಡೆ ಸುರಿದ ಬಿರುಗಾಳಿ, ಆಲಿಕಲ್ಲು ಸಮೇತ ಭಾರಿ ಮಳೆಯಿಂದಾಗಿ ತಾಲೂಕಿನ ಕಸವನಹಳ್ಳಿ ಗ್ರಾಮದಲ್ಲಿ ರೈತ ರವಿಚಂದ್ರ ಎಂಬಾತ ತನ್ನ ಐದು ಎಕರೆಯಲ್ಲಿ ಬೆಳೆದಿದ್ದ ಹೀರೆಕಾಯಿ, ಹೂಕೋಸು, ಶಾಮಂತಿಗೆ ಹೂ ತೋಟ ಸಂಪೂರ್ಣ ನಾಶವಾಗಿದೆ. ತೋಟದಲ್ಲಿನ ಹೀರೇಕಾಯಿ ಗಿಡಗಳು ಹೂ ಬಿಟ್ಟು ಇನ್ನೇನು ಕೆಲವೇ ದಿನಗಳಲ್ಲಿ ಫಸಲು ನಿರೀಕ್ಷೆಯಲ್ಲಿದ್ದ ರೈತ ರವಿಚಂದ್ರ ಜೀವನಕ್ಕೆ ರಾತ್ರಿ ಸುರಿದ ಮಳೆ ಶಾಪವಾಗಿ ಪರಿಣಮಿಸಿದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…