Categories: ಕೋಲಾರ

ಆಲೂಗಡ್ಡೆ ಬಿತ್ತನೆಗೆ ಸಬ್ಸಿಡಿಗೆ ಒತ್ತಾಯ: ಅ.22 ರಂದು ರೈತ ಸಂಘದಿಂದ ತೋಟಗಾರಿಕೆ ಕಚೇರಿಗೆ ಮುತ್ತಿಗೆ

ಕೋಲಾರ: ತೋಟಗಾರಿಕೆ ಇಲಾಖೆಯಿಂದ ಬಿತ್ತನೆ ಆಲೂಗಡ್ಡೆಯನ್ನು ಸಬ್ಸಿಡಿ ದರದಲ್ಲಿ ರೈತರಿಗೆ ನೀಡಬೇಕು ಹಾಗೂ ಖಾಸಗಿ ಆಲೂಗಡ್ಡೆ ವ್ಯಾಪಾರಸ್ಥರು ಮತ್ತು ನರ್ಸರಿಗಳು ಕಡ್ಡಾಯವಾಗಿ ತೋಟಗಾರಿಕೆ ಇಲಾಖೆಯಿಂದ ಪರವಾನಗಿ ಪಡೆದು ರೈತರು ಕೊಳ್ಳುವ ಸಸಿಗಳಿಗೆ ಮತ್ತು ಬಿತ್ತನೆ ಆಲೂಗಡ್ಡೆಗೆ ಕಡ್ಡಾಯವಾಗಿ ರಸೀದಿ ನೀಡಬೇಕೆಂದು ಅಗ್ರಹಿಸಿ ರೈತ ಸಂಘದಿಂದ ಅ.22 ರಂದು ತೋಟಗಾರಿಕೆ ಇಲಾಖೆ ಮುತ್ತಿಗೆ ಹಾಕಲು ಬಂಗಾರಪೇಟೆ ನಗರದ ಅರಣ್ಯ ಉದ್ಯಾನವನದಲ್ಲಿ ಕರೆದಿದ್ದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

ಪ್ರತಿ ವರ್ಷ ಆಲೂಗಡ್ಡೆ ಬೆಳೆಗಾರರು ಅನುಭಿಸುತ್ತಿರುವ ನಷ್ಟಕ್ಕೆ ಕಾರಣ ತಿಳಿಯಲು ವಿಜ್ಞಾನಿಗಳ ತಂಡ ರಚನೆ ಮಾಡುವ ಜೊತೆಗೆ ಬೆಳೆ ನಷ್ಟವಾದರೆ ನಿರ್ಲಕ್ಷವಹಿಸುವ ಅಧಿಕಾರಿಗಳ ಆಸ್ತಿ ಹರಾಜು ಹಾಕಿ ರೈತರಿಗೆ ಪರಿಹಾರ ನೀಡುವ ಕಾನೂನು ಜಾರಿ ಮಾಡಬೇಕೆಂದು ತೋಟಗಾರಿಕಾ ಸಚಿವರನ್ನು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.

ಜಿಲ್ಲಾದ್ಯಾಂತ ನಾಯಿಕೊಡೆಗಳಂತೆ ನರ್ಸರಿಗಳು ತಲೆಯೆತ್ತಿವೆ ಜೊತೆಗೆ ನಕಲಿ ಬಿತ್ತನೆ ಬೀಜಗಳ ಕಂಪನಿಗಳು ರೈತರ ಜೊತೆ ಚೆಲ್ಲಾಟವಾಡುವುದು ಒಂದು ಕಡೆಯಾದರೆ ಮತ್ತೊಂದೆಡೆ ಜಿಲ್ಲೆಯಲ್ಲಿ ಆಲೂಗಡ್ಡೆ ಬೆಳೆ ಪ್ರಮುಖ ಬೆಳೆಯಾಗಿದ್ದು, ಪ್ರತಿ ವರ್ಷವೂ ಬಿತ್ತನೆ ಗಡ್ಡೆಯಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಜಿಲ್ಲೆಯ ವ್ಯಾಪಾರಸ್ಥರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ರೈತರಿಗೆ ಬಿತ್ತನೆ ಗಡ್ಡೆ ಹೆಸರಿನಲ್ಲಿ ತಿನ್ನುವ ಆಲೂಗಡ್ಡೆ ಮಾರಾಟವೂ ನಡೆಯುತ್ತಿದ್ದು, ಸಂಬಂದ ಪಟ್ಟ ಇಲಾಖೆಗಳು ಮೌನಕ್ಕೆ ಶರಣಾಗಿದ್ದು, ಬಿತ್ತನೆ ಆಲೂಗಡ್ಡೆ ಮಾರಾಟ ಮಾಡುವ ವ್ಯಾಪಾರಸ್ಥರಿಗೆ ಸರ್ಕಾರದ ಕ್ರಮ ವಹಿಸಬೇಕು ವ್ಯಾಪಾರಸ್ಥರು ರಾಜಕೀಯ ಒತ್ತಡಕ್ಕೆ ಮಣಿದು ಅಧಿಕಾರಿಗಳು ನಿಯಮಗಳನ್ನು ಮಾರಾಟ ಮಾಡಿಕೊಂಡಿದ್ದಾರೆ ವ್ಯಾಪಾರಸ್ಥನು ತೋಟಗಾರಿಕೆ, ಕೃಷಿ, ಎ.ಪಿ.ಎಂ.ಸಿ ಯಿಂದ ಪರವಾನಗಿ ಕಡ್ಡಾಯವಾಗಿ ಪಡೆದಿರಬೇಕು. ಮತ್ತು ಜಲಂದರ್‌ನಲ್ಲಿ ಪರೀಕ್ಷೆಗೊಳಪಟ್ಟ ಪ್ರಮಾಣೀಕೃತ ಬಿತ್ತನೆ ಗಡ್ಡೆಯನ್ನು ಮಾರಾಟ ಮಾಡಬೇಕು. ಬಿತ್ತನೆ ಆಲೂಗಡ್ಡೆ ಕೊಂಡ ಪ್ರತಿ ರೈತನಿಗೂ ಕಡ್ಡಾಯವಾಗಿ ರಸೀದಿ ನೀಡಬೇಕು. ಬೆಳೆ ನಷ್ಟವಾದರೆ ರೈತನಿಗೆ ಸರ್ಕಾರದ ವಿಮೆ ಮತ್ತು ಪರಿಹಾರ ಸಿಗುವಂತೆ ವ್ಯವಸ್ಥೆಗೆ ರಸೀದಿ ಕಡ್ಡಾಯಗೊಳಿಸಿ, ರೈತನ ಬೆಳೆ ನಷ್ಟದಿಂದ ಪಾರು ಮಾಡಬೇಕೆಂದು ಅಗ್ರಹಿಸಿದರು.

ಅತಿವೃಷ್ಠಿ ಅನಾವೃಷ್ಠಿ ಜೊತೆಗೆ ಟೊಮೆಟೊ ಬೆಳೆಗೆ ಬಾಧಿಸುತ್ತಿರುವ ಬಿಂಗಿರೋಗದಿಂದ ತತ್ತರಿಸಿ ಲಕ್ಷಾಂತರ ರೂಪಾಯಿ ನಷ್ಟದಲ್ಲಿರುವ ರೈತರ ನೋವಿಗೆ ಸ್ಪಂದಿಸುವ ಇಚ್ಚಾಶಕ್ತಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿದಿಗಳಿಗೆ ಇದ್ದರೆ ಬಿತ್ತನೆ ಆಲೂಗಡ್ಡೆಯನ್ನು ಶೇ.೭೫ ರಷ್ಟು ಸಬ್ಸಿಡಿ ದರದಲ್ಲಿ ನೀಡುವ ಮುಖಾಂತರ ಮಾನವೀಯತೆ ತೋರಬೇಕೆಂದು ಅಧಿಕಾರಿಗಳಿಗೆ ಮನವಿ ಮಾಡಿದರು.

ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ, ಜಿಲ್ಲೆಯಲ್ಲಿ ಈ ಕಾನೂನನ್ನು ಅಧಿಕಾರಿಗಳ ಪುಸ್ತಕದಲ್ಲಿ ನೋಡಬಹುದಾಗಿದ್ದು ಹಾಸನ, ಶಿವಮೊಗ್ಗ, ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಸರ್ಕಾರ ಮತ್ತು ಎ.ಪಿ.ಎಂ.ಸಿ ಕಾನೂನನ್ನು ಸಮರ್ಪಕವಾಗಿ ಜಾರಿ ಮಾಡಿದೆ. ಆದರೆ ಜಿಲ್ಲೆಯಲ್ಲಿ ಲಾಭದ ದೃಷ್ಠಿಯಿಂದ ತಿನ್ನುವ ಆಲೂಗಡ್ಡೆ ಮೂಟೆಗೆ ಸೀಲ್ ಹಾಕಿ ಬಿತ್ತನೆಗೆ ಮಾರುತ್ತಿರುವ ಪ್ರಕರಣಗಳು ೧೦ವರ್ಷಗಳಿಂದ ಮರುಕಳಿಸಿ ಬೆಳೆ ನಷ್ಟ ಮತ್ತು ಇಳುವರಿ ಕುಂಟಿತವಾಗಿ ರೈತರಿಗೆ ತೊಂದರೆಯಾದಾಗ ವ್ಯಾಪಾರಸ್ಥರು ನುಣಿಚಿಕೊಂಡು ರೈತರ ಮೇಲೆ ಗೂಬೆ ಕೂರಿಸುವ ಪ್ರಕರಣಗಳು ಸುಮಾರು ನಡೆದಿದ್ದು, ಸರ್ಕಾರದಿಂದ ಸಿಗುವ ವಿಮೆ ಮತ್ತು ಬೆಳೆ ನಷ್ಟವೂ ರೈತರಿಗೆ ಕಳಪೆ ಬಿತ್ತನೆಯಿಂದ ಸಿಗದಂತೆ ಮಾಡಿ ಅಧಿಕಾರಿಗಳು ವ್ಯಾಪಾರಸ್ಥರ ಗುಲಾಮರಂತೆ ವರ್ತಿಸುತ್ತಿದ್ದು, ಸರ್ಕಾರದ ನಿಯವನ್ನು ಪಾಲಿಸದ ವ್ಯಾಪಾರಸ್ಥರ ಹಾಗೂ ನಕಲಿ ಬೀಜ ಕಂಪನಿಗಳು ಮತ್ತು ರಸೀದಿ ನೀಡದ ನರ್ಸರಿಗಳ ವಿರುದ್ದ ಮುಲಾಜಿಲ್ಲದೆ ಕ್ರಮ ಕೈಗೊಂಡು ರೈತರ ಉಳಿವಿಗಾಗಿ ಬಿತ್ತನೆಯಲ್ಲಿ ತಿನ್ನುವ ಆಲೂಗಡ್ಡೆ ಮಾರಾಟ ಮಾಡುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತೋಟಗಾರಿಕೆ, ಕೃಷಿ, ಎ.ಪಿ.ಎಂ.ಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಪರವಾನಗಿ ಪಡೆಯದೆ ವ್ಯಾಪಾರಸ್ಥರ ವಿರುದ್ದ ಕ್ರಮ ಕೈಗೊಂಡು ರೈತರಿಗೆ ಬಿತ್ತನೆ ಗಡ್ಡೆಯಲ್ಲಿ ಮೋಸವಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿ ಮುಂದೆ ಆಗುವ ಆನಾಹುತಗಳನ್ನು ತಪ್ಪಿಸಬೇಕೆಂದು ಒತ್ತಾಯಿಸಿದರು.

ಸಭೆಯಲ್ಲಿ ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ತಾ.ಅ ಕದರಿನತ್ತ ಅಪ್ಪೋಜಿರಾವ್, ಲಕ್ಷಣ್, ಮುನಿಕೃಷ್ಣ, ವಿಶ್ವ, ಮುನಿರಾಜು, ಚಾಂದ್‌ಪಾಷ, ಅಹಮದ್, ಕೃಷ್ಣಪ್ಪ, ಮುನಿಯಪ್ಪ ಮಂಗಸಂದ್ರ ತಿಮ್ಮಣ್ಣ, ಗೀರೀಶ್, ಪುತ್ತೇರಿ ರಾಜು, ಮುಂತಾದವರಿದ್ದರು,

Ramesh Babu

Journalist

Recent Posts

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

3 minutes ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

3 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

5 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

8 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

20 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

22 hours ago