Categories: ಕೋಲಾರ

ಆಲೂಗಡ್ಡೆ ಬಿತ್ತನೆಗೆ ಸಬ್ಸಿಡಿಗೆ ಒತ್ತಾಯ: ಅ.22 ರಂದು ರೈತ ಸಂಘದಿಂದ ತೋಟಗಾರಿಕೆ ಕಚೇರಿಗೆ ಮುತ್ತಿಗೆ

ಕೋಲಾರ: ತೋಟಗಾರಿಕೆ ಇಲಾಖೆಯಿಂದ ಬಿತ್ತನೆ ಆಲೂಗಡ್ಡೆಯನ್ನು ಸಬ್ಸಿಡಿ ದರದಲ್ಲಿ ರೈತರಿಗೆ ನೀಡಬೇಕು ಹಾಗೂ ಖಾಸಗಿ ಆಲೂಗಡ್ಡೆ ವ್ಯಾಪಾರಸ್ಥರು ಮತ್ತು ನರ್ಸರಿಗಳು ಕಡ್ಡಾಯವಾಗಿ ತೋಟಗಾರಿಕೆ ಇಲಾಖೆಯಿಂದ ಪರವಾನಗಿ ಪಡೆದು ರೈತರು ಕೊಳ್ಳುವ ಸಸಿಗಳಿಗೆ ಮತ್ತು ಬಿತ್ತನೆ ಆಲೂಗಡ್ಡೆಗೆ ಕಡ್ಡಾಯವಾಗಿ ರಸೀದಿ ನೀಡಬೇಕೆಂದು ಅಗ್ರಹಿಸಿ ರೈತ ಸಂಘದಿಂದ ಅ.22 ರಂದು ತೋಟಗಾರಿಕೆ ಇಲಾಖೆ ಮುತ್ತಿಗೆ ಹಾಕಲು ಬಂಗಾರಪೇಟೆ ನಗರದ ಅರಣ್ಯ ಉದ್ಯಾನವನದಲ್ಲಿ ಕರೆದಿದ್ದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

ಪ್ರತಿ ವರ್ಷ ಆಲೂಗಡ್ಡೆ ಬೆಳೆಗಾರರು ಅನುಭಿಸುತ್ತಿರುವ ನಷ್ಟಕ್ಕೆ ಕಾರಣ ತಿಳಿಯಲು ವಿಜ್ಞಾನಿಗಳ ತಂಡ ರಚನೆ ಮಾಡುವ ಜೊತೆಗೆ ಬೆಳೆ ನಷ್ಟವಾದರೆ ನಿರ್ಲಕ್ಷವಹಿಸುವ ಅಧಿಕಾರಿಗಳ ಆಸ್ತಿ ಹರಾಜು ಹಾಕಿ ರೈತರಿಗೆ ಪರಿಹಾರ ನೀಡುವ ಕಾನೂನು ಜಾರಿ ಮಾಡಬೇಕೆಂದು ತೋಟಗಾರಿಕಾ ಸಚಿವರನ್ನು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.

ಜಿಲ್ಲಾದ್ಯಾಂತ ನಾಯಿಕೊಡೆಗಳಂತೆ ನರ್ಸರಿಗಳು ತಲೆಯೆತ್ತಿವೆ ಜೊತೆಗೆ ನಕಲಿ ಬಿತ್ತನೆ ಬೀಜಗಳ ಕಂಪನಿಗಳು ರೈತರ ಜೊತೆ ಚೆಲ್ಲಾಟವಾಡುವುದು ಒಂದು ಕಡೆಯಾದರೆ ಮತ್ತೊಂದೆಡೆ ಜಿಲ್ಲೆಯಲ್ಲಿ ಆಲೂಗಡ್ಡೆ ಬೆಳೆ ಪ್ರಮುಖ ಬೆಳೆಯಾಗಿದ್ದು, ಪ್ರತಿ ವರ್ಷವೂ ಬಿತ್ತನೆ ಗಡ್ಡೆಯಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಜಿಲ್ಲೆಯ ವ್ಯಾಪಾರಸ್ಥರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ರೈತರಿಗೆ ಬಿತ್ತನೆ ಗಡ್ಡೆ ಹೆಸರಿನಲ್ಲಿ ತಿನ್ನುವ ಆಲೂಗಡ್ಡೆ ಮಾರಾಟವೂ ನಡೆಯುತ್ತಿದ್ದು, ಸಂಬಂದ ಪಟ್ಟ ಇಲಾಖೆಗಳು ಮೌನಕ್ಕೆ ಶರಣಾಗಿದ್ದು, ಬಿತ್ತನೆ ಆಲೂಗಡ್ಡೆ ಮಾರಾಟ ಮಾಡುವ ವ್ಯಾಪಾರಸ್ಥರಿಗೆ ಸರ್ಕಾರದ ಕ್ರಮ ವಹಿಸಬೇಕು ವ್ಯಾಪಾರಸ್ಥರು ರಾಜಕೀಯ ಒತ್ತಡಕ್ಕೆ ಮಣಿದು ಅಧಿಕಾರಿಗಳು ನಿಯಮಗಳನ್ನು ಮಾರಾಟ ಮಾಡಿಕೊಂಡಿದ್ದಾರೆ ವ್ಯಾಪಾರಸ್ಥನು ತೋಟಗಾರಿಕೆ, ಕೃಷಿ, ಎ.ಪಿ.ಎಂ.ಸಿ ಯಿಂದ ಪರವಾನಗಿ ಕಡ್ಡಾಯವಾಗಿ ಪಡೆದಿರಬೇಕು. ಮತ್ತು ಜಲಂದರ್‌ನಲ್ಲಿ ಪರೀಕ್ಷೆಗೊಳಪಟ್ಟ ಪ್ರಮಾಣೀಕೃತ ಬಿತ್ತನೆ ಗಡ್ಡೆಯನ್ನು ಮಾರಾಟ ಮಾಡಬೇಕು. ಬಿತ್ತನೆ ಆಲೂಗಡ್ಡೆ ಕೊಂಡ ಪ್ರತಿ ರೈತನಿಗೂ ಕಡ್ಡಾಯವಾಗಿ ರಸೀದಿ ನೀಡಬೇಕು. ಬೆಳೆ ನಷ್ಟವಾದರೆ ರೈತನಿಗೆ ಸರ್ಕಾರದ ವಿಮೆ ಮತ್ತು ಪರಿಹಾರ ಸಿಗುವಂತೆ ವ್ಯವಸ್ಥೆಗೆ ರಸೀದಿ ಕಡ್ಡಾಯಗೊಳಿಸಿ, ರೈತನ ಬೆಳೆ ನಷ್ಟದಿಂದ ಪಾರು ಮಾಡಬೇಕೆಂದು ಅಗ್ರಹಿಸಿದರು.

ಅತಿವೃಷ್ಠಿ ಅನಾವೃಷ್ಠಿ ಜೊತೆಗೆ ಟೊಮೆಟೊ ಬೆಳೆಗೆ ಬಾಧಿಸುತ್ತಿರುವ ಬಿಂಗಿರೋಗದಿಂದ ತತ್ತರಿಸಿ ಲಕ್ಷಾಂತರ ರೂಪಾಯಿ ನಷ್ಟದಲ್ಲಿರುವ ರೈತರ ನೋವಿಗೆ ಸ್ಪಂದಿಸುವ ಇಚ್ಚಾಶಕ್ತಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿದಿಗಳಿಗೆ ಇದ್ದರೆ ಬಿತ್ತನೆ ಆಲೂಗಡ್ಡೆಯನ್ನು ಶೇ.೭೫ ರಷ್ಟು ಸಬ್ಸಿಡಿ ದರದಲ್ಲಿ ನೀಡುವ ಮುಖಾಂತರ ಮಾನವೀಯತೆ ತೋರಬೇಕೆಂದು ಅಧಿಕಾರಿಗಳಿಗೆ ಮನವಿ ಮಾಡಿದರು.

ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ, ಜಿಲ್ಲೆಯಲ್ಲಿ ಈ ಕಾನೂನನ್ನು ಅಧಿಕಾರಿಗಳ ಪುಸ್ತಕದಲ್ಲಿ ನೋಡಬಹುದಾಗಿದ್ದು ಹಾಸನ, ಶಿವಮೊಗ್ಗ, ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಸರ್ಕಾರ ಮತ್ತು ಎ.ಪಿ.ಎಂ.ಸಿ ಕಾನೂನನ್ನು ಸಮರ್ಪಕವಾಗಿ ಜಾರಿ ಮಾಡಿದೆ. ಆದರೆ ಜಿಲ್ಲೆಯಲ್ಲಿ ಲಾಭದ ದೃಷ್ಠಿಯಿಂದ ತಿನ್ನುವ ಆಲೂಗಡ್ಡೆ ಮೂಟೆಗೆ ಸೀಲ್ ಹಾಕಿ ಬಿತ್ತನೆಗೆ ಮಾರುತ್ತಿರುವ ಪ್ರಕರಣಗಳು ೧೦ವರ್ಷಗಳಿಂದ ಮರುಕಳಿಸಿ ಬೆಳೆ ನಷ್ಟ ಮತ್ತು ಇಳುವರಿ ಕುಂಟಿತವಾಗಿ ರೈತರಿಗೆ ತೊಂದರೆಯಾದಾಗ ವ್ಯಾಪಾರಸ್ಥರು ನುಣಿಚಿಕೊಂಡು ರೈತರ ಮೇಲೆ ಗೂಬೆ ಕೂರಿಸುವ ಪ್ರಕರಣಗಳು ಸುಮಾರು ನಡೆದಿದ್ದು, ಸರ್ಕಾರದಿಂದ ಸಿಗುವ ವಿಮೆ ಮತ್ತು ಬೆಳೆ ನಷ್ಟವೂ ರೈತರಿಗೆ ಕಳಪೆ ಬಿತ್ತನೆಯಿಂದ ಸಿಗದಂತೆ ಮಾಡಿ ಅಧಿಕಾರಿಗಳು ವ್ಯಾಪಾರಸ್ಥರ ಗುಲಾಮರಂತೆ ವರ್ತಿಸುತ್ತಿದ್ದು, ಸರ್ಕಾರದ ನಿಯವನ್ನು ಪಾಲಿಸದ ವ್ಯಾಪಾರಸ್ಥರ ಹಾಗೂ ನಕಲಿ ಬೀಜ ಕಂಪನಿಗಳು ಮತ್ತು ರಸೀದಿ ನೀಡದ ನರ್ಸರಿಗಳ ವಿರುದ್ದ ಮುಲಾಜಿಲ್ಲದೆ ಕ್ರಮ ಕೈಗೊಂಡು ರೈತರ ಉಳಿವಿಗಾಗಿ ಬಿತ್ತನೆಯಲ್ಲಿ ತಿನ್ನುವ ಆಲೂಗಡ್ಡೆ ಮಾರಾಟ ಮಾಡುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತೋಟಗಾರಿಕೆ, ಕೃಷಿ, ಎ.ಪಿ.ಎಂ.ಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಪರವಾನಗಿ ಪಡೆಯದೆ ವ್ಯಾಪಾರಸ್ಥರ ವಿರುದ್ದ ಕ್ರಮ ಕೈಗೊಂಡು ರೈತರಿಗೆ ಬಿತ್ತನೆ ಗಡ್ಡೆಯಲ್ಲಿ ಮೋಸವಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿ ಮುಂದೆ ಆಗುವ ಆನಾಹುತಗಳನ್ನು ತಪ್ಪಿಸಬೇಕೆಂದು ಒತ್ತಾಯಿಸಿದರು.

ಸಭೆಯಲ್ಲಿ ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ತಾ.ಅ ಕದರಿನತ್ತ ಅಪ್ಪೋಜಿರಾವ್, ಲಕ್ಷಣ್, ಮುನಿಕೃಷ್ಣ, ವಿಶ್ವ, ಮುನಿರಾಜು, ಚಾಂದ್‌ಪಾಷ, ಅಹಮದ್, ಕೃಷ್ಣಪ್ಪ, ಮುನಿಯಪ್ಪ ಮಂಗಸಂದ್ರ ತಿಮ್ಮಣ್ಣ, ಗೀರೀಶ್, ಪುತ್ತೇರಿ ರಾಜು, ಮುಂತಾದವರಿದ್ದರು,

Ramesh Babu

Journalist

Recent Posts

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

2 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

12 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

17 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

18 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

20 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

2 days ago