Categories: ರಾಜ್ಯ

ಆಲ್ಕೊಹಾಲ್ ಬೆಲೆ ಏರಿಕೆ ನಂತರ ಹಾಲಿನ ಬೆಲೆ ಏರಿಕೆ‌ ಮಾಡಿ ಶ್ರಮಜೀವಿಗಳ ಕಿಸೆಗೆ ಕನ್ನ- ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್ ಸರ್ಕಾರ ನಂದಿನಿ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು.ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತ ನೀತಿಗೆ ದಿಕ್ಕಾರ ಎಂದಿದ್ದಾರೆ.

ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರ್ಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ ಎಂದು ತಿಳಿಸಿದ್ದಾರೆ.

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

7 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

8 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

10 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

11 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

11 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

12 hours ago