Categories: ರಾಜ್ಯ

ಆಲ್ಕೊಹಾಲ್ ಬೆಲೆ ಏರಿಕೆ ನಂತರ ಹಾಲಿನ ಬೆಲೆ ಏರಿಕೆ‌ ಮಾಡಿ ಶ್ರಮಜೀವಿಗಳ ಕಿಸೆಗೆ ಕನ್ನ- ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್ ಸರ್ಕಾರ ನಂದಿನಿ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು.ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತ ನೀತಿಗೆ ದಿಕ್ಕಾರ ಎಂದಿದ್ದಾರೆ.

ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರ್ಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ ಎಂದು ತಿಳಿಸಿದ್ದಾರೆ.

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

7 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

7 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

15 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago