ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್ ಸರ್ಕಾರ ನಂದಿನಿ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು.ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತ ನೀತಿಗೆ ದಿಕ್ಕಾರ ಎಂದಿದ್ದಾರೆ.
ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರ್ಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ ಎಂದು ತಿಳಿಸಿದ್ದಾರೆ.
ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…