ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್ ಸರ್ಕಾರ ನಂದಿನಿ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು.ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತ ನೀತಿಗೆ ದಿಕ್ಕಾರ ಎಂದಿದ್ದಾರೆ.
ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರ್ಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ ಎಂದು ತಿಳಿಸಿದ್ದಾರೆ.
ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…