ಭಾರತೀಯ ಬೌಲಿಂಗ್ ವಿಭಾಗದ ಕಳಪೆ ಪ್ರದರ್ಶನದ ಲಾಭ ಪಡೆದು ಕೊನೆಯ ನಾಲ್ಕು ಓವರ್ ಗಳಲ್ಲಿ 68 ರನ್ ಗಳಿಸುವ ಮೂಲಕ ಭಾರತ ವಿರುದ್ಧದ ಎರಡನೇ ಟಿ-ಟ್ವೆಂಟಿ ಪಂದ್ಯದಲ್ಲಿ 206 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿದ ಶ್ರೀಲಂಕಾ 16 ರನ್ ಗಳ ಅಧಿಕಾರಯುತ ಗೆಲುವು ಸಾಧಿಸಿತು.
ಟಾಸ್ ಗೆದ್ದು ಬೌಲಿಂಗ್ ಪ್ರಾರಂಭಿಸಿದ ಟೀಂ ಇಂಡಿಯಾದ ಯೋಜನೆ ಫಲ ನೀಡಲಿಲ್ಲ, ಶ್ರೀಲಂಕಾದ ಆರಂಭಿಕ ಜೋಡಿ ಕುಶಾಲ್ ಮೆಂಡಿಸ್ (52) ಹಾಗೂ ನಿಸಾಂಕ (33) ರನ್ ನಿಂದಾಗಿ ಮೊದಲ ವಿಕೆಟ್ ಗೆ 80 ರನ್ ಪೇರಿಸುವ ಮೂಲಕ ಬೌಲಿಂಗ್ ಪಡೆಯನ್ನು ಇನ್ನಿಲ್ಲದಂತೆ ಕಾಡಿದರು.
ಮೊದಲ ವಿಕೆಟ್ ಕಳೆದುಕೊಂಡ ನಂತರ ಲಂಕಾದ ಬ್ಯಾಟ್ಸ್ಮನ್ ಗಳು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು ನಂತರ ತಂಡಕ್ಕೆ 58 ರನ್ ಸೇರಿಸುವ ಭರದಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು.
ಈ ಸಂದರ್ಭದಲ್ಲಿ ಜೊತೆಯಾದ ನಾಯಕ ದಸುನ್ ಶನಕಾ ಅಜೇಯ(56) ಹಾಗೂ ಕರುಣಾರತ್ನೆ (11) ಜೊತೆಯಾಟದ ಬಲದಿಂದ ಕೊನೆಯ ನಾಲ್ಕು ಓವರ್ ಗಳಲ್ಲಿ 68 ರನ್ ಗಳಿಸುವ ಮೂಲಕ ಬೃಹತ್ ಮೊತ್ತ ಕಲೆ ಹಾಕಿದರು.
ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಭಾರತೀಯ ಬೌಲಿಂಗ್ ವಿಭಾಗ ಎರಡನೇ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿತು, ಐದು ನೋಬಾಲ್ ಎಸೆಯುವ ಮೂಲಕ ಎಡಗೈ ವೇಗಿ ಅಶ೯ದೀಪ್ ಸಿಂಗ್ ದುಬಾರಿಯಾದರು.
ರನ್ ಬೆನ್ನತ್ತಿದ ಭಾರತ ತಂಡ ಆರಂಭಿಕ ಆಟಗಾರರು ಬೇಗನೆ ಪೆವಿಲಿಯನ್ ಸೇರಿದರು, ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಆಲ್ ರೌಂಡರ್ ದೀಪಕ್ ಹೂಡ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾದರು, ತಂಡದ ಮೊತ್ತ 57 ರನ್ ಗಳಿಸಿದ್ದ ಸಂದರ್ಭದಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಸಂಕಷ್ಟ ಹಂತದಲ್ಲಿ ಜೊತೆಯಾದ ಸೂರ್ಯಕುಮಾರ್ ಯಾದವ್ (51) ಹಾಗೂ ಆಲ್ ರೌಂಡರ್ ಅಕ್ಷರ್ ಪಟೇಲ್(65) ರನ್ ಪೇರಿಸುವ ಮೂಲಕ ಒಂದು ಹಂತದಲ್ಲಿ ಅಭಿಮಾನಿಗಳಲ್ಲಿ ಗೆಲುವಿನ ಆಸೆ ಮೂಡಿಸಿದ್ದರು, ಆದರೆ ಮಧುಶಂಕ ಎಸೆದ ಚೆಂಡನ್ನು ಅರಿಯುವಲ್ಲಿ ವಿಫಲವಾದ ಸೂರ್ಯಕುಮಾರ್ ಯಾದವ್ ಹಸರಂಗಗೆ ಕ್ಯಾಚ್ ನೀಡಿದರು.
ಭರ್ಜರಿ ಬ್ಯಾಟಿಂಗ್ ಮಾಡಿದ ಅಕ್ಷರ್ ಪಟೇಲ್ ಮೂರು ಬೌಂಡರಿ ಹಾಗೂ ಆರು ಸಿಕ್ಸರ್ ಸಿಡಿಸುವ ಮೂಲಕ (65) ರನ್ ಗಳಿಸಿ ಪ್ರೇಕ್ಷಕರನ್ನು ಮೋಡಿ ಮಾಡಿದರು, ಬ್ಯಾಟಿಂಗ್ ನಲ್ಲಿ ಮಿಂಚಿದ ಬೌಲರ್ ಶಿವಂ ಮಾವಿ 2 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿಸಿ (26) ರನ್ ಗಳಿಸಿ ಗಮನ ಸೆಳೆದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…