ಆಲ್ ರೌಂಡರ್ ಆಟವಾಡಿದ ನಾಯಕ ಶನಕಾ : ಸರಣಿ ಸಮಬಲ ಸಾಧಿಸಿದ ಲಂಕಾ

ಭಾರತೀಯ ಬೌಲಿಂಗ್ ವಿಭಾಗದ ಕಳಪೆ ಪ್ರದರ್ಶನದ ಲಾಭ ಪಡೆದು ಕೊನೆಯ ನಾಲ್ಕು ಓವರ್ ಗಳಲ್ಲಿ 68 ರನ್ ಗಳಿಸುವ ಮೂಲಕ ಭಾರತ ವಿರುದ್ಧದ ಎರಡನೇ ಟಿ-ಟ್ವೆಂಟಿ ಪಂದ್ಯದಲ್ಲಿ 206 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿದ ಶ್ರೀಲಂಕಾ 16 ರನ್ ಗಳ ಅಧಿಕಾರಯುತ ಗೆಲುವು ಸಾಧಿಸಿತು.

ಟಾಸ್ ಗೆದ್ದು ಬೌಲಿಂಗ್ ಪ್ರಾರಂಭಿಸಿದ ಟೀಂ ಇಂಡಿಯಾದ ಯೋಜನೆ ಫಲ ನೀಡಲಿಲ್ಲ, ಶ್ರೀಲಂಕಾದ ಆರಂಭಿಕ ಜೋಡಿ ಕುಶಾಲ್ ಮೆಂಡಿಸ್ (52) ಹಾಗೂ ನಿಸಾಂಕ (33) ರನ್ ನಿಂದಾಗಿ ಮೊದಲ ವಿಕೆಟ್ ಗೆ 80 ರನ್ ಪೇರಿಸುವ ಮೂಲಕ ಬೌಲಿಂಗ್ ಪಡೆಯನ್ನು ಇನ್ನಿಲ್ಲದಂತೆ ಕಾಡಿದರು.

ಮೊದಲ ವಿಕೆಟ್ ಕಳೆದುಕೊಂಡ ನಂತರ ಲಂಕಾದ ಬ್ಯಾಟ್ಸ್‌ಮನ್ ಗಳು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು ನಂತರ ತಂಡಕ್ಕೆ 58 ರನ್ ಸೇರಿಸುವ ಭರದಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು.

ಈ ಸಂದರ್ಭದಲ್ಲಿ ಜೊತೆಯಾದ ನಾಯಕ ದಸುನ್ ಶನಕಾ ಅಜೇಯ(56) ಹಾಗೂ ಕರುಣಾರತ್ನೆ (11) ಜೊತೆಯಾಟದ ಬಲದಿಂದ ಕೊನೆಯ ನಾಲ್ಕು ಓವರ್ ಗಳಲ್ಲಿ 68 ರನ್ ಗಳಿಸುವ ಮೂಲಕ ಬೃಹತ್ ಮೊತ್ತ ಕಲೆ ಹಾಕಿದರು.

ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಭಾರತೀಯ ಬೌಲಿಂಗ್ ವಿಭಾಗ ಎರಡನೇ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿತು, ಐದು ನೋಬಾಲ್ ಎಸೆಯುವ ಮೂಲಕ ಎಡಗೈ ವೇಗಿ ಅಶ೯ದೀಪ್ ಸಿಂಗ್ ದುಬಾರಿಯಾದರು.

ರನ್ ಬೆನ್ನತ್ತಿದ ಭಾರತ ತಂಡ ಆರಂಭಿಕ ಆಟಗಾರರು ಬೇಗನೆ ಪೆವಿಲಿಯನ್ ಸೇರಿದರು, ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಆಲ್ ರೌಂಡರ್ ದೀಪಕ್ ಹೂಡ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾದರು, ತಂಡದ ಮೊತ್ತ 57 ರನ್ ಗಳಿಸಿದ್ದ ಸಂದರ್ಭದಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಸಂಕಷ್ಟ ಹಂತದಲ್ಲಿ ಜೊತೆಯಾದ ಸೂರ್ಯಕುಮಾರ್ ಯಾದವ್ (51) ಹಾಗೂ ಆಲ್ ರೌಂಡರ್ ಅಕ್ಷರ್ ಪಟೇಲ್(65) ರನ್ ಪೇರಿಸುವ ಮೂಲಕ ಒಂದು ಹಂತದಲ್ಲಿ ಅಭಿಮಾನಿಗಳಲ್ಲಿ ಗೆಲುವಿನ ಆಸೆ ಮೂಡಿಸಿದ್ದರು, ಆದರೆ ಮಧುಶಂಕ ಎಸೆದ ಚೆಂಡನ್ನು ಅರಿಯುವಲ್ಲಿ ವಿಫಲವಾದ ಸೂರ್ಯಕುಮಾರ್ ಯಾದವ್ ಹಸರಂಗಗೆ ಕ್ಯಾಚ್ ನೀಡಿದರು.

ಭರ್ಜರಿ ಬ್ಯಾಟಿಂಗ್ ಮಾಡಿದ ಅಕ್ಷರ್ ಪಟೇಲ್ ಮೂರು ಬೌಂಡರಿ ಹಾಗೂ ಆರು ಸಿಕ್ಸರ್ ಸಿಡಿಸುವ ಮೂಲಕ (65) ರನ್ ಗಳಿಸಿ ಪ್ರೇಕ್ಷಕರನ್ನು ಮೋಡಿ ಮಾಡಿದರು, ಬ್ಯಾಟಿಂಗ್ ನಲ್ಲಿ ಮಿಂಚಿದ ಬೌಲರ್ ಶಿವಂ ಮಾವಿ 2 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿಸಿ (26) ರನ್ ಗಳಿಸಿ ಗಮನ ಸೆಳೆದರು.

Ramesh Babu

Journalist

Recent Posts

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

2 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

2 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

8 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

9 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

12 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

14 hours ago