ಆಲ್ ರೌಂಡರ್ ಆಟವಾಡಿದ ನಾಯಕ ಶನಕಾ : ಸರಣಿ ಸಮಬಲ ಸಾಧಿಸಿದ ಲಂಕಾ

ಭಾರತೀಯ ಬೌಲಿಂಗ್ ವಿಭಾಗದ ಕಳಪೆ ಪ್ರದರ್ಶನದ ಲಾಭ ಪಡೆದು ಕೊನೆಯ ನಾಲ್ಕು ಓವರ್ ಗಳಲ್ಲಿ 68 ರನ್ ಗಳಿಸುವ ಮೂಲಕ ಭಾರತ ವಿರುದ್ಧದ ಎರಡನೇ ಟಿ-ಟ್ವೆಂಟಿ ಪಂದ್ಯದಲ್ಲಿ 206 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿದ ಶ್ರೀಲಂಕಾ 16 ರನ್ ಗಳ ಅಧಿಕಾರಯುತ ಗೆಲುವು ಸಾಧಿಸಿತು.

ಟಾಸ್ ಗೆದ್ದು ಬೌಲಿಂಗ್ ಪ್ರಾರಂಭಿಸಿದ ಟೀಂ ಇಂಡಿಯಾದ ಯೋಜನೆ ಫಲ ನೀಡಲಿಲ್ಲ, ಶ್ರೀಲಂಕಾದ ಆರಂಭಿಕ ಜೋಡಿ ಕುಶಾಲ್ ಮೆಂಡಿಸ್ (52) ಹಾಗೂ ನಿಸಾಂಕ (33) ರನ್ ನಿಂದಾಗಿ ಮೊದಲ ವಿಕೆಟ್ ಗೆ 80 ರನ್ ಪೇರಿಸುವ ಮೂಲಕ ಬೌಲಿಂಗ್ ಪಡೆಯನ್ನು ಇನ್ನಿಲ್ಲದಂತೆ ಕಾಡಿದರು.

ಮೊದಲ ವಿಕೆಟ್ ಕಳೆದುಕೊಂಡ ನಂತರ ಲಂಕಾದ ಬ್ಯಾಟ್ಸ್‌ಮನ್ ಗಳು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು ನಂತರ ತಂಡಕ್ಕೆ 58 ರನ್ ಸೇರಿಸುವ ಭರದಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು.

ಈ ಸಂದರ್ಭದಲ್ಲಿ ಜೊತೆಯಾದ ನಾಯಕ ದಸುನ್ ಶನಕಾ ಅಜೇಯ(56) ಹಾಗೂ ಕರುಣಾರತ್ನೆ (11) ಜೊತೆಯಾಟದ ಬಲದಿಂದ ಕೊನೆಯ ನಾಲ್ಕು ಓವರ್ ಗಳಲ್ಲಿ 68 ರನ್ ಗಳಿಸುವ ಮೂಲಕ ಬೃಹತ್ ಮೊತ್ತ ಕಲೆ ಹಾಕಿದರು.

ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಭಾರತೀಯ ಬೌಲಿಂಗ್ ವಿಭಾಗ ಎರಡನೇ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿತು, ಐದು ನೋಬಾಲ್ ಎಸೆಯುವ ಮೂಲಕ ಎಡಗೈ ವೇಗಿ ಅಶ೯ದೀಪ್ ಸಿಂಗ್ ದುಬಾರಿಯಾದರು.

ರನ್ ಬೆನ್ನತ್ತಿದ ಭಾರತ ತಂಡ ಆರಂಭಿಕ ಆಟಗಾರರು ಬೇಗನೆ ಪೆವಿಲಿಯನ್ ಸೇರಿದರು, ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಆಲ್ ರೌಂಡರ್ ದೀಪಕ್ ಹೂಡ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾದರು, ತಂಡದ ಮೊತ್ತ 57 ರನ್ ಗಳಿಸಿದ್ದ ಸಂದರ್ಭದಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಸಂಕಷ್ಟ ಹಂತದಲ್ಲಿ ಜೊತೆಯಾದ ಸೂರ್ಯಕುಮಾರ್ ಯಾದವ್ (51) ಹಾಗೂ ಆಲ್ ರೌಂಡರ್ ಅಕ್ಷರ್ ಪಟೇಲ್(65) ರನ್ ಪೇರಿಸುವ ಮೂಲಕ ಒಂದು ಹಂತದಲ್ಲಿ ಅಭಿಮಾನಿಗಳಲ್ಲಿ ಗೆಲುವಿನ ಆಸೆ ಮೂಡಿಸಿದ್ದರು, ಆದರೆ ಮಧುಶಂಕ ಎಸೆದ ಚೆಂಡನ್ನು ಅರಿಯುವಲ್ಲಿ ವಿಫಲವಾದ ಸೂರ್ಯಕುಮಾರ್ ಯಾದವ್ ಹಸರಂಗಗೆ ಕ್ಯಾಚ್ ನೀಡಿದರು.

ಭರ್ಜರಿ ಬ್ಯಾಟಿಂಗ್ ಮಾಡಿದ ಅಕ್ಷರ್ ಪಟೇಲ್ ಮೂರು ಬೌಂಡರಿ ಹಾಗೂ ಆರು ಸಿಕ್ಸರ್ ಸಿಡಿಸುವ ಮೂಲಕ (65) ರನ್ ಗಳಿಸಿ ಪ್ರೇಕ್ಷಕರನ್ನು ಮೋಡಿ ಮಾಡಿದರು, ಬ್ಯಾಟಿಂಗ್ ನಲ್ಲಿ ಮಿಂಚಿದ ಬೌಲರ್ ಶಿವಂ ಮಾವಿ 2 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿಸಿ (26) ರನ್ ಗಳಿಸಿ ಗಮನ ಸೆಳೆದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

39 minutes ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

2 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

3 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

7 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

9 hours ago