Categories: ಲೇಖನ

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ…..

ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ……

ಶಬ್ದ ಅಥವಾ ಧ್ವನಿ ಕ್ರಮಬದ್ಧತೆಯ – ಶಿಸ್ತುಬದ್ಧತೆಯ ತರಂಗಗಳನ್ನು ಸಂಗೀತ ಎಂದು ಗ್ರಹಿಸಬಹುದೇ ?
ಅಥವಾ,
ಆ ಶಬ್ದಗಳ ಸುಶ್ರಾವ್ಯತೆ ಮಾತ್ರ ಸಂಗೀತವೇ ?
ಅಥವಾ,
ಧ್ವನಿ ಮತ್ತು ವಾದ್ಯಗಳ ಸಮ್ಮಿಲನದ ಭಾಷೆಗೆ ಸಂಗೀತ ಎನ್ನಬಹುದೇ……
ಅಥವಾ,
ಸಾಹಿತ್ಯ ಧ್ವನಿ ವಾದ್ಯಗಳ ಮಿಲನದ ಪ್ರಕ್ರಿಯೆಯೇ ಸಂಗೀತವೇ……
ಅಥವಾ,
ಧ್ವನಿಯ ಸ್ವರ, ಲಯ ತಾಳಗಳ ರೂಪವೇ ಸಂಗೀತ ಸೃಷ್ಟಿಸುತ್ತದೆಯೇ…..

ಭಾವನೆಗಳು ಅಕ್ಷರ ರೂಪದ ಸಾಹಿತ್ಯವಾಗಿ ಮೂಡಿದ ಮೇಲೆ ಆ ಅಕ್ಷರಗಳು ಮತ್ತೆ ಭಾವನೆಗಳಾಗಿ ಹಾಡಿನ ಮೂಲಕ ಪರಿವರ್ತನೆ ಹೊಂದಿ ಕೆಲವೊಮ್ಮೆ ಮತ್ತೆ ಅಕ್ಷರಗಳಾಗಿ ಮತ್ತೆ ಭಾವನೆಗಳಾಗುವ ಸರಪಳಿಯ ಕೊಂಡಿಯೊಂದು ಕಳಚಿದೆ……

ಸುಮಾರು ಮುಕ್ಕಾಲು ಶತಮಾನದ ಮನರಂಜನಾ ಮಾಧ್ಯಮದ ಲೋಕದಲ್ಲಿ ಮಿನುಗಿ ಜನಪ್ರಿಯರಾಗಿದ್ದ , ಎಷ್ಟೋ ಜನರ ಪಾಲಿನ ನೋವು ನಲಿವುಗಳ, ನೀರವ ರಾತ್ರಿಗಳ, ಬೆಳದಿಂಗಳ ಕಲರವದ, ಪ್ರೀತಿ ಪ್ರೇಮ ಪ್ರಣಯ ವಿರಹಗಳಲ್ಲಿ , ಕೆಲವೊಮ್ಮೆ ಭಕ್ತಿ ವೈರಾಗ್ಯಗಳೊಂದಿಗೆ ಸದಾ ಜೊತೆಯಾಗಿದ್ದ ಧ್ವನಿಯೊಂದು ಹಾಡುವುದನ್ನು ನಿಲ್ಲಿಸಿದೆ….

ಕೆಲವು ಅಪರೂಪದ ಸ್ವಾಭಾವಿಕ ಪ್ರತಿಭೆಗಳು ಎಲ್ಲಾ ಕ್ಷೇತ್ರಗಳಲ್ಲೂ ಉದಯಿಸಿವೆ. ಹೆಚ್ಚು ಶ್ರಮವಿಲ್ಲದೆ, ( ಅವರ ಪ್ರತಿಭೆಯ ಕಾರಣದಿಂದಾಗಿ ) ಆದರೆ ಶ್ರದ್ಧೆ ಮತ್ತು ಸಮರ್ಪಣಾ ಮನೋಭಾವದಿಂದ ತುಂಬಾ ಸರಳವಾಗಿ ಆ ಪ್ರತಿಭೆಯನ್ನು ದುಡಿಸಿಕೊಂಡಿದ್ದಾರೆ.

ಹಾಡುಗಳ ನಿಜವಾದ ಅರ್ಥ ಏನೇ ಇರಲಿ ಮನುಷ್ಯ ಜೀವಿಯ ಬದುಕಿನಲ್ಲಿ ಅತಿಹೆಚ್ಚು ಆಕರ್ಷಕ ಧ್ವನಿ ಎಂದರೆ ಅದು ಸಾಮಾನ್ಯವಾಗಿ ಹಾಡುಗಳು ಎಂದು ಕರೆಯಲ್ಪಡುವ ಧ್ವನಿ ತರಂಗಗಳು…….

ಬಹುಶಃ ಹುಟ್ಟಿದ ಮಗುವಿನಿಂದ ವೃದ್ದರವರೆಗೆ ಒಂದಲ್ಲ ಒಂದು ರೀತಿಯ ಹಾಡುಗಳ ಮೋಹ ಅವರ ಮನಸ್ಸುಗಳ ಮೇಲೆ ಪ್ರಭಾವ ಬೀರುವುದನ್ನು ಕಾಣಬಹುದು……

ಕೇವಲ ಭಾರತ ದೇಶ ಮಾತ್ರವಲ್ಲ, ಇಡೀ ಸೃಷ್ಟಿಯ ಮನುಷ್ಯ ಪ್ರಾಣಿಯ ಎಲ್ಲರಿಗೂ ಇದು ಅನ್ವಯಿಸುತ್ತದೆ. ಭಾಷೆಗಳನ್ನು ಮೀರಿ ಅನೇಕ ವೈವಿಧ್ಯಮಯ ಪ್ರಕಾರಗಳಲ್ಲಿ ಇದು ಅಸ್ತಿತ್ವದಲ್ಲಿದೆ…..

ಜಾನಪದವೇ ಇರಲಿ, ಶಾಸ್ತ್ರೀಯವೇ ಆಗಿರಲಿ, ಪಾಶ್ಚಿಮಾತ್ಯವೇ ಇರಲಿ, ಮಧ್ಯಪ್ರಾಚ್ಯದ ಅಥವಾ ಆಫ್ರಿಕಾದ ಸಂಗೀತವೇ ಇರಲಿ ಒಟ್ಟಿನಲ್ಲಿ ಹಾಡುಗಳು ಮನುಷ್ಯ ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ಎಲ್ಲಾ ಕಾಲಮಾನಗಳನ್ನು ಮೀರಿ ಬೆಳೆದಿದೆ……

ಆಧುನಿಕತೆ ಮತ್ತು ತಂತ್ರಜ್ಞಾನ ಬೆಳೆದಂತೆ ಮುಖ್ಯವಾಗಿ ಸಿನಿಮಾ ರಂಗದ ಅಭಿವೃದ್ಧಿಯೊಂದಿಗೆ ಈ ಕ್ಷಣದಲ್ಲಿ ಹಾಡುಗಳು ಉತ್ತುಂಗಕ್ಕೇರಿದೆ……

ಸಂಕೀರ್ಣ ಬದುಕಿನ ಜಂಜಡಗಳಿಂದ ನರಳುತ್ತಿರುವ ಮನುಷ್ಯ ಮನರಂಜನೆ ಅಥವಾ ಮನಸ್ಸುಗಳ ಪುನಶ್ಚೇತನಕ್ಕಾಗಿ ಸಂಗೀತದ ಮೊರೆ ಹೋಗುವುದು ಸಾಮಾನ್ಯವಾಗಿ ನಾವು‌ ಗಮನಿಸಿದ್ದೇವೆ ಮತ್ತು ಅನುಭವಿಸಿದ್ದೇವೆ…….

ಸಪ್ತ ಸ್ವರಗಳ ಸಹಾಯದಿಂದ ನವರಸಗಳನ್ನು ಹೊಮ್ಮಿಸುವ ಸಂಗೀತ ನಮ್ಮ ಭಾವನೆಗಳೊಂದಿಗೆ ಅಲೆಅಲೆಯಾಗಿ ತೇಲುತ್ತಾ ಸಾಗುವ ಪರಿ ಅನನ್ಯ….

ಅಂತಹ ಸಂಗೀತ – ಹಾಡುಗಳ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಆಶಾ ಬೋಸ್ಲೆ ಸುಮಾರು 12000 ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು. ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಎಷ್ಟೋ ಪ್ರೇಮಿಗಳಿಗೆ, ಎಷೋ ವಿರಹಿಗಳಿಗೆ, ಎಷ್ಟೋ ನೋವುಂಡವರಿಗೆ, ಎಷ್ಟೋ ಕನಸುಗಾರರಿಗೆ, ಎಷ್ಟೋ ನಿರಾಶಾವಾದಿಗಳಿಗೆ, ಎಷ್ಟೋ ಹೃದಯಹೀನರಿಗೆ ತಮ್ಮ ಒಂದು ಹಾಡಿನ ಮೂಲಕ ಆ ಕ್ಷಣ ಒಂದು ಪ್ರತಿಕ್ರಿಯೆಯಾದ ಆಶಾ ಅವರ ಧ್ವನಿ ಹಾಡುವುದನ್ನು ನಿಲ್ಲಿಸಿದೆ.

ಬದುಕಿನ ಪಯಣದಲ್ಲಿ ಅನೇಕರಿಗೆ ಲಲಿತ ಕಲೆಗಳು ಸ್ಪೂರ್ತಿ ಪ್ರೇರಣೆ ಪ್ರಭಾವವನ್ನು ಹೊಂದುವ ಬಗೆಯನ್ನು ನೆನೆಯುತ್ತಾ…….

ಸಾವಿನ ನೆರಳಲ್ಲಿ ಬದುಕು….

ಒಬ್ಬ ಹೇಳಿದ ಜ್ಞಾನ ಮುಖ್ಯ,
ಇನ್ನೊಬ್ಬ ಹೇಳಿದ ಧ್ಯಾನ ಮುಖ್ಯ,
ಮತ್ತೊಬ್ಬ ಹೇಳಿದ ಭಕ್ತಿ ಮುಖ್ಯ,
ಮಗದೊಬ್ಬ ಹೇಳಿದ ಯೋಗ ಮುಖ್ಯ,

ಅಲ್ಲೊಬ್ಬ ಹೇಳಿದ ನಂಬಿಕೆ ಮುಖ್ಯ,
ಇಲ್ಲೊಬ್ಬ ಹೇಳಿದ ಕರ್ಮ ಮುಖ್ಯ,
ಹಿಂದೊಬ್ಬ ಹೇಳಿದ ತತ್ವ ಮುಖ್ಯ,
ಯಾವಾಗಲೋ ಒಬ್ಬ ಹೇಳಿದ ಸಿದ್ಧಾಂತ ಮುಖ್ಯ,

ಆಗೊಬ್ಬ ಅಂದ ಜೀವನ ಪವಿತ್ರವಾದುದು,
ಈಗೊಬ್ಬ ಅಂದ ಜೀವನ ನಶ್ವರ,
ಮತ್ತೊಬ್ಬ ಅಂದ ಜೀವನ ಅದ್ಭುತವಾದುದು,

ಮಗದೊಬ್ಬ ಅಂದ ಬದುಕು ಮಾಯೆ,
ಅಲ್ಲೊಬ್ಬ ಹೇಳಿದ ಬದುಕು ಭ್ರಮೆ,
ಇಲ್ಲೊಬ್ಬ ಅಂದ ಬದುಕು ಸುಂದರ,
ಹಿಂದೊಬ್ಬ ಹೇಳಿದ ದೇಹ ಮೂಳೆ ಮಾಂಸದ ತಡಿಕೆ,

ಆಗೊಬ್ಬ ಅಂದ ದೇಹವೇ ದೇಗುಲ,
ಯಾವಾಗಲೋ ಒಬ್ಬ ಹೇಳಿದ ಮೋಕ್ಷವೇ ಜೀವನದ ಅಂತಿಮ,

ಆದರೆ,
ಸಾಮಾನ್ಯನೊಬ್ಬ ಏನೂ ಹೇಳಲಿಲ್ಲ, ಜೀವಿಸಿದ,
ಬದುಕು ಬದುಕಷ್ಟೇ,ಉಳಿದದ್ದೂ ಬದುಕಷ್ಟೇ,
ಸಹಜವಾಗಿ ಬದುಕಿ,
ಬೇರೇನೂ ಇಲ್ಲ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

3 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

4 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

6 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

16 hours ago

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ : ಕಾರ್ಯದರ್ಶಿ ಹೇಮಂತ್

  ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

16 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಕೇರ್ ಬೈ ಬಿಎಲ್‌ಆರ್’ ವೈಯಕ್ತಿಕ ಪ್ರಯಾಣಿಕ ಸೇವೆ ಆರಂಭ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…

19 hours ago