ಆಶ್ರಯ ಮನೆಗಳು ಬಲಾಢ್ಯರ ಪಾಲು ಆರೋಪ:

ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ ಮನೆಗಳನ್ನ ಕಬಳಿಸಲಾಗಿದೆ, ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ವಾಸವಾಗಿರುವರನ್ನ ತೆರವು ಮಾಡುವಂತೆ ಆಗ್ರಹಿಸಿ ದೊಡ್ಡಬಳ್ಳಾಪುರದ ನಗರಸಭೆಯ ಮುಂದೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಪ್ರತಿಭಟನೆ ನಡೆಸಿತು.

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ 2002ರಲ್ಲಿ ಅಶ್ರಯ ಯೋಜನೆಯಡಿ ಬಡವರು, ನಿರ್ಗತಿಕರು ಮತ್ತು ದಲಿತರಿಗೆ ನಿವೇಶಗಳ ಹಂಚಿಕೆ ಮಾಡಲಾಗಿದೆ, ಸುಮಾರು 50ಕ್ಕೂ ಹೆಚ್ಚು ಮನೆಗಳು ಇಲ್ಲಿನ ಸ್ಥಳೀಯ ಮುಖಂಡರೆಂದು ಕರೆಸಿಕೊಳ್ಳುವರ ವಶದಲ್ಲಿವೆ, ಅಕ್ರಮವಾಗಿ ವಾಸವಾಗಿರುವ ನಿವಾಸಿಗಳ ಮನೆಗಳನ್ನ ಖಾಲಿ ಮಾಡಿಸಿ, ಅಸಲಿ ಹಕ್ಕುಪತ್ರ ವಾರಸುದಾರರಿಗೆ ಆಶ್ರಯ ಮನೆಗಳನ್ನ ನೀಡುವಂತೆ ಪ್ರಬುದ್ಧ ಭೀಮ ಸೇನೆ ಒತ್ತಾಯಿಸಿದೆ.

ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಾಧ್ಯಕ್ಷರಾದ ಯು.ಮುನಿರಾಜು, ರಾಜೀವ್ ಗಾಂಧಿ ಬಡಾವಣೆಯಲ್ಲಿನ ಸ್ಥಳೀಯ ಕೆಲವು ಮುಖಂಡರು ಅಕ್ರಮವಾಗಿ ಮನೆಗಳ ಬೀಗ ಹೊಡೆದು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ, ಅಕ್ರಮವಾಗಿ ದಾಖಲೆಗಳನ್ನ ಸೃಷ್ಠಿಸಿ ಅಸಲಿ ಹಕ್ಕುದಾರರಿಗೆ ವಂಚನೆ ಮಾಡಿದ್ದಾರೆ, ಹಕ್ಕುಪತ್ರದ ವಾರಸುದಾರರು ಮನೆಗಳ ಬಳಿ ಬಂದರೆ ದಬ್ಬಾಳಿಕೆ ದೌರ್ಜನ್ಯ ನಡೆಸಿ ಅಲ್ಲಿಂದ ಓಡಿಸುತ್ತಾರೆ, ಪೌರಾಯುಕ್ತರು ಪ್ರತಿ ಮನೆಗೂ ಭೇಟಿ ನೀಡಿ ದಾಖಲೆಗಳನ್ನ ಪರಿಶೀಲನೆ ಮಾಡಬೇಕು, ನಕಲಿ ವಾಸಿಗಳನ್ನ ಪತ್ತೆ ಮಾಡಿ ಅಸಲಿ ಹಕ್ಕುಪತ್ರ ಇರುವ ಜನರಿಗೆ ಮನೆಗಳನ್ನ ನೀಡುವಂತೆ ಒತ್ತಾಯಿಸಿದರು.

ನಗರಸಭೆಯ ಎಸ್ ಡಿಎ ನೌಕರ ನಕಲಿ ದಾಖಲೆ ಸೃಷ್ಠಿಸಿ ಅಂಜಾದ್ ಖಾನ್ ರವರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸ ಬೇಕು, ಅವರು ನೀಡಿರುವ ಅಂಕಪಟ್ಟಿ ನಕಲಿಯಾಗಿದ್ದು, ಅದನ್ನು ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಗೌರವ ಅಧ್ಯಕ್ಷ ವಿ.ನಾಗರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚನ್ನಿಗರಾಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎ.ಮಂಜುನಾಥ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಕಾರ್ಯಾಧ್ಯಕ್ಷ ರಘುಕುಮಾರ್, ದೇವನಹಳ್ಳಿ ತಾಲೂಕು ಅಧ್ಯಕ್ಷ ಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಶಶಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾಲಿಗೆ ವೆಂಕಟೇಶ್, ರಾಜ್ಯ ಕಾರ್ಯದರ್ಶಿ ಮಹೇಶ್.ಎಂಡಿ, ಅಲ್ಪ ಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಮೊಕದ್ದರ್, ದೇವನಹಳ್ಳಿ ಮಹಿಳಾ ಘಟಕ ಅಧ್ಯಕ್ಷ ಸುಜಾತ, ಸೇರಿದಂತೆ ಮುಖಂಡರಾದ ಮಹಮ್ಮದ್ ಪೈಜುಲ್ಲಾ, ಜಬೀವುಲ್ಲಾ, ಅಂಜಾದ್ ಪಾಷಾ, ರವಿಕುಮಾರ್ ಇದ್ದರು

Ramesh Babu

Journalist

Recent Posts

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

3 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

4 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

5 hours ago

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

15 hours ago

Accident Update: ನೆಲಮಂಗಲದ ಜಿಂದಾಲ್‌ ಸಮೀಪ ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು ಕೇಸ್: ಮೃತರಲ್ಲಿ ಮೂವರ ಕಣ್ಣುಗಳ ದಾನ

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…

16 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಫಾರ್ಮ್ ಪಾರ್ಟಿ: ಸಂತಸದಿಂದ ಪ್ರಾಣಿಗಳ ಜೊತೆಯಲ್ಲಿ ಸಮಯ ಕಳೆದ ವಿದ್ಯಾರ್ಥಿಗಳು ಮತ್ತು ಪೋಷಕರು

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಶನಿವಾರದಂದು ನಡೆದ ಸೈನ್ಸ್ ಫೆಸ್ಟ್ ನಂತರ ಮಕ್ಕಳಿಗೆ ಮತ್ತು ಪೋಷಕರಿಗೆ ಮನರಂಜನೆ ಉಣಬಡಿಸುವ ಪ್ರಯುಕ್ತ ಮಧ್ಯಾಹ್ನ…

16 hours ago