ಆಶ್ರಯ ಮನೆಗಳು ಬಲಾಢ್ಯರ ಪಾಲು ಆರೋಪ:

ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ ಮನೆಗಳನ್ನ ಕಬಳಿಸಲಾಗಿದೆ, ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ವಾಸವಾಗಿರುವರನ್ನ ತೆರವು ಮಾಡುವಂತೆ ಆಗ್ರಹಿಸಿ ದೊಡ್ಡಬಳ್ಳಾಪುರದ ನಗರಸಭೆಯ ಮುಂದೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಪ್ರತಿಭಟನೆ ನಡೆಸಿತು.

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ 2002ರಲ್ಲಿ ಅಶ್ರಯ ಯೋಜನೆಯಡಿ ಬಡವರು, ನಿರ್ಗತಿಕರು ಮತ್ತು ದಲಿತರಿಗೆ ನಿವೇಶಗಳ ಹಂಚಿಕೆ ಮಾಡಲಾಗಿದೆ, ಸುಮಾರು 50ಕ್ಕೂ ಹೆಚ್ಚು ಮನೆಗಳು ಇಲ್ಲಿನ ಸ್ಥಳೀಯ ಮುಖಂಡರೆಂದು ಕರೆಸಿಕೊಳ್ಳುವರ ವಶದಲ್ಲಿವೆ, ಅಕ್ರಮವಾಗಿ ವಾಸವಾಗಿರುವ ನಿವಾಸಿಗಳ ಮನೆಗಳನ್ನ ಖಾಲಿ ಮಾಡಿಸಿ, ಅಸಲಿ ಹಕ್ಕುಪತ್ರ ವಾರಸುದಾರರಿಗೆ ಆಶ್ರಯ ಮನೆಗಳನ್ನ ನೀಡುವಂತೆ ಪ್ರಬುದ್ಧ ಭೀಮ ಸೇನೆ ಒತ್ತಾಯಿಸಿದೆ.

ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಾಧ್ಯಕ್ಷರಾದ ಯು.ಮುನಿರಾಜು, ರಾಜೀವ್ ಗಾಂಧಿ ಬಡಾವಣೆಯಲ್ಲಿನ ಸ್ಥಳೀಯ ಕೆಲವು ಮುಖಂಡರು ಅಕ್ರಮವಾಗಿ ಮನೆಗಳ ಬೀಗ ಹೊಡೆದು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ, ಅಕ್ರಮವಾಗಿ ದಾಖಲೆಗಳನ್ನ ಸೃಷ್ಠಿಸಿ ಅಸಲಿ ಹಕ್ಕುದಾರರಿಗೆ ವಂಚನೆ ಮಾಡಿದ್ದಾರೆ, ಹಕ್ಕುಪತ್ರದ ವಾರಸುದಾರರು ಮನೆಗಳ ಬಳಿ ಬಂದರೆ ದಬ್ಬಾಳಿಕೆ ದೌರ್ಜನ್ಯ ನಡೆಸಿ ಅಲ್ಲಿಂದ ಓಡಿಸುತ್ತಾರೆ, ಪೌರಾಯುಕ್ತರು ಪ್ರತಿ ಮನೆಗೂ ಭೇಟಿ ನೀಡಿ ದಾಖಲೆಗಳನ್ನ ಪರಿಶೀಲನೆ ಮಾಡಬೇಕು, ನಕಲಿ ವಾಸಿಗಳನ್ನ ಪತ್ತೆ ಮಾಡಿ ಅಸಲಿ ಹಕ್ಕುಪತ್ರ ಇರುವ ಜನರಿಗೆ ಮನೆಗಳನ್ನ ನೀಡುವಂತೆ ಒತ್ತಾಯಿಸಿದರು.

ನಗರಸಭೆಯ ಎಸ್ ಡಿಎ ನೌಕರ ನಕಲಿ ದಾಖಲೆ ಸೃಷ್ಠಿಸಿ ಅಂಜಾದ್ ಖಾನ್ ರವರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸ ಬೇಕು, ಅವರು ನೀಡಿರುವ ಅಂಕಪಟ್ಟಿ ನಕಲಿಯಾಗಿದ್ದು, ಅದನ್ನು ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಗೌರವ ಅಧ್ಯಕ್ಷ ವಿ.ನಾಗರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚನ್ನಿಗರಾಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎ.ಮಂಜುನಾಥ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಕಾರ್ಯಾಧ್ಯಕ್ಷ ರಘುಕುಮಾರ್, ದೇವನಹಳ್ಳಿ ತಾಲೂಕು ಅಧ್ಯಕ್ಷ ಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಶಶಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾಲಿಗೆ ವೆಂಕಟೇಶ್, ರಾಜ್ಯ ಕಾರ್ಯದರ್ಶಿ ಮಹೇಶ್.ಎಂಡಿ, ಅಲ್ಪ ಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಮೊಕದ್ದರ್, ದೇವನಹಳ್ಳಿ ಮಹಿಳಾ ಘಟಕ ಅಧ್ಯಕ್ಷ ಸುಜಾತ, ಸೇರಿದಂತೆ ಮುಖಂಡರಾದ ಮಹಮ್ಮದ್ ಪೈಜುಲ್ಲಾ, ಜಬೀವುಲ್ಲಾ, ಅಂಜಾದ್ ಪಾಷಾ, ರವಿಕುಮಾರ್ ಇದ್ದರು

Ramesh Babu

Journalist

Recent Posts

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

38 minutes ago

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

1 hour ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

14 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

16 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

16 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

1 day ago