ಆಶ್ರಯ ಮನೆಗಳು ಬಲಾಢ್ಯರ ಪಾಲು ಆರೋಪ:

ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ ಮನೆಗಳನ್ನ ಕಬಳಿಸಲಾಗಿದೆ, ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ವಾಸವಾಗಿರುವರನ್ನ ತೆರವು ಮಾಡುವಂತೆ ಆಗ್ರಹಿಸಿ ದೊಡ್ಡಬಳ್ಳಾಪುರದ ನಗರಸಭೆಯ ಮುಂದೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಪ್ರತಿಭಟನೆ ನಡೆಸಿತು.

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ 2002ರಲ್ಲಿ ಅಶ್ರಯ ಯೋಜನೆಯಡಿ ಬಡವರು, ನಿರ್ಗತಿಕರು ಮತ್ತು ದಲಿತರಿಗೆ ನಿವೇಶಗಳ ಹಂಚಿಕೆ ಮಾಡಲಾಗಿದೆ, ಸುಮಾರು 50ಕ್ಕೂ ಹೆಚ್ಚು ಮನೆಗಳು ಇಲ್ಲಿನ ಸ್ಥಳೀಯ ಮುಖಂಡರೆಂದು ಕರೆಸಿಕೊಳ್ಳುವರ ವಶದಲ್ಲಿವೆ, ಅಕ್ರಮವಾಗಿ ವಾಸವಾಗಿರುವ ನಿವಾಸಿಗಳ ಮನೆಗಳನ್ನ ಖಾಲಿ ಮಾಡಿಸಿ, ಅಸಲಿ ಹಕ್ಕುಪತ್ರ ವಾರಸುದಾರರಿಗೆ ಆಶ್ರಯ ಮನೆಗಳನ್ನ ನೀಡುವಂತೆ ಪ್ರಬುದ್ಧ ಭೀಮ ಸೇನೆ ಒತ್ತಾಯಿಸಿದೆ.

ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಾಧ್ಯಕ್ಷರಾದ ಯು.ಮುನಿರಾಜು, ರಾಜೀವ್ ಗಾಂಧಿ ಬಡಾವಣೆಯಲ್ಲಿನ ಸ್ಥಳೀಯ ಕೆಲವು ಮುಖಂಡರು ಅಕ್ರಮವಾಗಿ ಮನೆಗಳ ಬೀಗ ಹೊಡೆದು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ, ಅಕ್ರಮವಾಗಿ ದಾಖಲೆಗಳನ್ನ ಸೃಷ್ಠಿಸಿ ಅಸಲಿ ಹಕ್ಕುದಾರರಿಗೆ ವಂಚನೆ ಮಾಡಿದ್ದಾರೆ, ಹಕ್ಕುಪತ್ರದ ವಾರಸುದಾರರು ಮನೆಗಳ ಬಳಿ ಬಂದರೆ ದಬ್ಬಾಳಿಕೆ ದೌರ್ಜನ್ಯ ನಡೆಸಿ ಅಲ್ಲಿಂದ ಓಡಿಸುತ್ತಾರೆ, ಪೌರಾಯುಕ್ತರು ಪ್ರತಿ ಮನೆಗೂ ಭೇಟಿ ನೀಡಿ ದಾಖಲೆಗಳನ್ನ ಪರಿಶೀಲನೆ ಮಾಡಬೇಕು, ನಕಲಿ ವಾಸಿಗಳನ್ನ ಪತ್ತೆ ಮಾಡಿ ಅಸಲಿ ಹಕ್ಕುಪತ್ರ ಇರುವ ಜನರಿಗೆ ಮನೆಗಳನ್ನ ನೀಡುವಂತೆ ಒತ್ತಾಯಿಸಿದರು.

ನಗರಸಭೆಯ ಎಸ್ ಡಿಎ ನೌಕರ ನಕಲಿ ದಾಖಲೆ ಸೃಷ್ಠಿಸಿ ಅಂಜಾದ್ ಖಾನ್ ರವರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸ ಬೇಕು, ಅವರು ನೀಡಿರುವ ಅಂಕಪಟ್ಟಿ ನಕಲಿಯಾಗಿದ್ದು, ಅದನ್ನು ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಗೌರವ ಅಧ್ಯಕ್ಷ ವಿ.ನಾಗರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚನ್ನಿಗರಾಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎ.ಮಂಜುನಾಥ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಕಾರ್ಯಾಧ್ಯಕ್ಷ ರಘುಕುಮಾರ್, ದೇವನಹಳ್ಳಿ ತಾಲೂಕು ಅಧ್ಯಕ್ಷ ಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಶಶಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾಲಿಗೆ ವೆಂಕಟೇಶ್, ರಾಜ್ಯ ಕಾರ್ಯದರ್ಶಿ ಮಹೇಶ್.ಎಂಡಿ, ಅಲ್ಪ ಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಮೊಕದ್ದರ್, ದೇವನಹಳ್ಳಿ ಮಹಿಳಾ ಘಟಕ ಅಧ್ಯಕ್ಷ ಸುಜಾತ, ಸೇರಿದಂತೆ ಮುಖಂಡರಾದ ಮಹಮ್ಮದ್ ಪೈಜುಲ್ಲಾ, ಜಬೀವುಲ್ಲಾ, ಅಂಜಾದ್ ಪಾಷಾ, ರವಿಕುಮಾರ್ ಇದ್ದರು

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…

10 minutes ago

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…

16 hours ago

ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…

17 hours ago

ಸ್ನೇಹಿತರ ದಿನದ ಅಂಗವಾಗಿ ನಂದಿಬೆಟ್ಟಕ್ಕೆ ತೆರಳಿದ್ದ ಸ್ನೇಹಿತರು: ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತ: ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ

ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…

1 day ago

ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…

2 days ago

ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಪ್ರಕರಣ: ಸಿಎಂ ಸಿದ್ದರಾಮಯ್ಯ ಏನಂದ್ರು…?

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…

2 days ago