ಆಶ್ರಯ ಮನೆಗಳು ಬಲಾಢ್ಯರ ಪಾಲು ಆರೋಪ:

ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ ಮನೆಗಳನ್ನ ಕಬಳಿಸಲಾಗಿದೆ, ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ವಾಸವಾಗಿರುವರನ್ನ ತೆರವು ಮಾಡುವಂತೆ ಆಗ್ರಹಿಸಿ ದೊಡ್ಡಬಳ್ಳಾಪುರದ ನಗರಸಭೆಯ ಮುಂದೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಪ್ರತಿಭಟನೆ ನಡೆಸಿತು.

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ 2002ರಲ್ಲಿ ಅಶ್ರಯ ಯೋಜನೆಯಡಿ ಬಡವರು, ನಿರ್ಗತಿಕರು ಮತ್ತು ದಲಿತರಿಗೆ ನಿವೇಶಗಳ ಹಂಚಿಕೆ ಮಾಡಲಾಗಿದೆ, ಸುಮಾರು 50ಕ್ಕೂ ಹೆಚ್ಚು ಮನೆಗಳು ಇಲ್ಲಿನ ಸ್ಥಳೀಯ ಮುಖಂಡರೆಂದು ಕರೆಸಿಕೊಳ್ಳುವರ ವಶದಲ್ಲಿವೆ, ಅಕ್ರಮವಾಗಿ ವಾಸವಾಗಿರುವ ನಿವಾಸಿಗಳ ಮನೆಗಳನ್ನ ಖಾಲಿ ಮಾಡಿಸಿ, ಅಸಲಿ ಹಕ್ಕುಪತ್ರ ವಾರಸುದಾರರಿಗೆ ಆಶ್ರಯ ಮನೆಗಳನ್ನ ನೀಡುವಂತೆ ಪ್ರಬುದ್ಧ ಭೀಮ ಸೇನೆ ಒತ್ತಾಯಿಸಿದೆ.

ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಾಧ್ಯಕ್ಷರಾದ ಯು.ಮುನಿರಾಜು, ರಾಜೀವ್ ಗಾಂಧಿ ಬಡಾವಣೆಯಲ್ಲಿನ ಸ್ಥಳೀಯ ಕೆಲವು ಮುಖಂಡರು ಅಕ್ರಮವಾಗಿ ಮನೆಗಳ ಬೀಗ ಹೊಡೆದು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ, ಅಕ್ರಮವಾಗಿ ದಾಖಲೆಗಳನ್ನ ಸೃಷ್ಠಿಸಿ ಅಸಲಿ ಹಕ್ಕುದಾರರಿಗೆ ವಂಚನೆ ಮಾಡಿದ್ದಾರೆ, ಹಕ್ಕುಪತ್ರದ ವಾರಸುದಾರರು ಮನೆಗಳ ಬಳಿ ಬಂದರೆ ದಬ್ಬಾಳಿಕೆ ದೌರ್ಜನ್ಯ ನಡೆಸಿ ಅಲ್ಲಿಂದ ಓಡಿಸುತ್ತಾರೆ, ಪೌರಾಯುಕ್ತರು ಪ್ರತಿ ಮನೆಗೂ ಭೇಟಿ ನೀಡಿ ದಾಖಲೆಗಳನ್ನ ಪರಿಶೀಲನೆ ಮಾಡಬೇಕು, ನಕಲಿ ವಾಸಿಗಳನ್ನ ಪತ್ತೆ ಮಾಡಿ ಅಸಲಿ ಹಕ್ಕುಪತ್ರ ಇರುವ ಜನರಿಗೆ ಮನೆಗಳನ್ನ ನೀಡುವಂತೆ ಒತ್ತಾಯಿಸಿದರು.

ನಗರಸಭೆಯ ಎಸ್ ಡಿಎ ನೌಕರ ನಕಲಿ ದಾಖಲೆ ಸೃಷ್ಠಿಸಿ ಅಂಜಾದ್ ಖಾನ್ ರವರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸ ಬೇಕು, ಅವರು ನೀಡಿರುವ ಅಂಕಪಟ್ಟಿ ನಕಲಿಯಾಗಿದ್ದು, ಅದನ್ನು ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಗೌರವ ಅಧ್ಯಕ್ಷ ವಿ.ನಾಗರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚನ್ನಿಗರಾಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎ.ಮಂಜುನಾಥ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಕಾರ್ಯಾಧ್ಯಕ್ಷ ರಘುಕುಮಾರ್, ದೇವನಹಳ್ಳಿ ತಾಲೂಕು ಅಧ್ಯಕ್ಷ ಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಶಶಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾಲಿಗೆ ವೆಂಕಟೇಶ್, ರಾಜ್ಯ ಕಾರ್ಯದರ್ಶಿ ಮಹೇಶ್.ಎಂಡಿ, ಅಲ್ಪ ಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಮೊಕದ್ದರ್, ದೇವನಹಳ್ಳಿ ಮಹಿಳಾ ಘಟಕ ಅಧ್ಯಕ್ಷ ಸುಜಾತ, ಸೇರಿದಂತೆ ಮುಖಂಡರಾದ ಮಹಮ್ಮದ್ ಪೈಜುಲ್ಲಾ, ಜಬೀವುಲ್ಲಾ, ಅಂಜಾದ್ ಪಾಷಾ, ರವಿಕುಮಾರ್ ಇದ್ದರು

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

15 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

18 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

18 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago