ಆಶ್ರಯ ಮನೆಗಳು ಬಲಾಢ್ಯರ ಪಾಲು ಆರೋಪ:

ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ ಮನೆಗಳನ್ನ ಕಬಳಿಸಲಾಗಿದೆ, ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ವಾಸವಾಗಿರುವರನ್ನ ತೆರವು ಮಾಡುವಂತೆ ಆಗ್ರಹಿಸಿ ದೊಡ್ಡಬಳ್ಳಾಪುರದ ನಗರಸಭೆಯ ಮುಂದೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಪ್ರತಿಭಟನೆ ನಡೆಸಿತು.

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ 2002ರಲ್ಲಿ ಅಶ್ರಯ ಯೋಜನೆಯಡಿ ಬಡವರು, ನಿರ್ಗತಿಕರು ಮತ್ತು ದಲಿತರಿಗೆ ನಿವೇಶಗಳ ಹಂಚಿಕೆ ಮಾಡಲಾಗಿದೆ, ಸುಮಾರು 50ಕ್ಕೂ ಹೆಚ್ಚು ಮನೆಗಳು ಇಲ್ಲಿನ ಸ್ಥಳೀಯ ಮುಖಂಡರೆಂದು ಕರೆಸಿಕೊಳ್ಳುವರ ವಶದಲ್ಲಿವೆ, ಅಕ್ರಮವಾಗಿ ವಾಸವಾಗಿರುವ ನಿವಾಸಿಗಳ ಮನೆಗಳನ್ನ ಖಾಲಿ ಮಾಡಿಸಿ, ಅಸಲಿ ಹಕ್ಕುಪತ್ರ ವಾರಸುದಾರರಿಗೆ ಆಶ್ರಯ ಮನೆಗಳನ್ನ ನೀಡುವಂತೆ ಪ್ರಬುದ್ಧ ಭೀಮ ಸೇನೆ ಒತ್ತಾಯಿಸಿದೆ.

ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಾಧ್ಯಕ್ಷರಾದ ಯು.ಮುನಿರಾಜು, ರಾಜೀವ್ ಗಾಂಧಿ ಬಡಾವಣೆಯಲ್ಲಿನ ಸ್ಥಳೀಯ ಕೆಲವು ಮುಖಂಡರು ಅಕ್ರಮವಾಗಿ ಮನೆಗಳ ಬೀಗ ಹೊಡೆದು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ, ಅಕ್ರಮವಾಗಿ ದಾಖಲೆಗಳನ್ನ ಸೃಷ್ಠಿಸಿ ಅಸಲಿ ಹಕ್ಕುದಾರರಿಗೆ ವಂಚನೆ ಮಾಡಿದ್ದಾರೆ, ಹಕ್ಕುಪತ್ರದ ವಾರಸುದಾರರು ಮನೆಗಳ ಬಳಿ ಬಂದರೆ ದಬ್ಬಾಳಿಕೆ ದೌರ್ಜನ್ಯ ನಡೆಸಿ ಅಲ್ಲಿಂದ ಓಡಿಸುತ್ತಾರೆ, ಪೌರಾಯುಕ್ತರು ಪ್ರತಿ ಮನೆಗೂ ಭೇಟಿ ನೀಡಿ ದಾಖಲೆಗಳನ್ನ ಪರಿಶೀಲನೆ ಮಾಡಬೇಕು, ನಕಲಿ ವಾಸಿಗಳನ್ನ ಪತ್ತೆ ಮಾಡಿ ಅಸಲಿ ಹಕ್ಕುಪತ್ರ ಇರುವ ಜನರಿಗೆ ಮನೆಗಳನ್ನ ನೀಡುವಂತೆ ಒತ್ತಾಯಿಸಿದರು.

ನಗರಸಭೆಯ ಎಸ್ ಡಿಎ ನೌಕರ ನಕಲಿ ದಾಖಲೆ ಸೃಷ್ಠಿಸಿ ಅಂಜಾದ್ ಖಾನ್ ರವರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸ ಬೇಕು, ಅವರು ನೀಡಿರುವ ಅಂಕಪಟ್ಟಿ ನಕಲಿಯಾಗಿದ್ದು, ಅದನ್ನು ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಗೌರವ ಅಧ್ಯಕ್ಷ ವಿ.ನಾಗರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚನ್ನಿಗರಾಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎ.ಮಂಜುನಾಥ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಕಾರ್ಯಾಧ್ಯಕ್ಷ ರಘುಕುಮಾರ್, ದೇವನಹಳ್ಳಿ ತಾಲೂಕು ಅಧ್ಯಕ್ಷ ಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಶಶಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾಲಿಗೆ ವೆಂಕಟೇಶ್, ರಾಜ್ಯ ಕಾರ್ಯದರ್ಶಿ ಮಹೇಶ್.ಎಂಡಿ, ಅಲ್ಪ ಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಮೊಕದ್ದರ್, ದೇವನಹಳ್ಳಿ ಮಹಿಳಾ ಘಟಕ ಅಧ್ಯಕ್ಷ ಸುಜಾತ, ಸೇರಿದಂತೆ ಮುಖಂಡರಾದ ಮಹಮ್ಮದ್ ಪೈಜುಲ್ಲಾ, ಜಬೀವುಲ್ಲಾ, ಅಂಜಾದ್ ಪಾಷಾ, ರವಿಕುಮಾರ್ ಇದ್ದರು

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

8 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

9 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

21 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

2 days ago