ಆಶ್ರಯ ಮನೆಗಳು ಬಲಾಢ್ಯರ ಪಾಲು ಆರೋಪ:

ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ ಮನೆಗಳನ್ನ ಕಬಳಿಸಲಾಗಿದೆ, ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ವಾಸವಾಗಿರುವರನ್ನ ತೆರವು ಮಾಡುವಂತೆ ಆಗ್ರಹಿಸಿ ದೊಡ್ಡಬಳ್ಳಾಪುರದ ನಗರಸಭೆಯ ಮುಂದೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಪ್ರತಿಭಟನೆ ನಡೆಸಿತು.

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ 2002ರಲ್ಲಿ ಅಶ್ರಯ ಯೋಜನೆಯಡಿ ಬಡವರು, ನಿರ್ಗತಿಕರು ಮತ್ತು ದಲಿತರಿಗೆ ನಿವೇಶಗಳ ಹಂಚಿಕೆ ಮಾಡಲಾಗಿದೆ, ಸುಮಾರು 50ಕ್ಕೂ ಹೆಚ್ಚು ಮನೆಗಳು ಇಲ್ಲಿನ ಸ್ಥಳೀಯ ಮುಖಂಡರೆಂದು ಕರೆಸಿಕೊಳ್ಳುವರ ವಶದಲ್ಲಿವೆ, ಅಕ್ರಮವಾಗಿ ವಾಸವಾಗಿರುವ ನಿವಾಸಿಗಳ ಮನೆಗಳನ್ನ ಖಾಲಿ ಮಾಡಿಸಿ, ಅಸಲಿ ಹಕ್ಕುಪತ್ರ ವಾರಸುದಾರರಿಗೆ ಆಶ್ರಯ ಮನೆಗಳನ್ನ ನೀಡುವಂತೆ ಪ್ರಬುದ್ಧ ಭೀಮ ಸೇನೆ ಒತ್ತಾಯಿಸಿದೆ.

ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಾಧ್ಯಕ್ಷರಾದ ಯು.ಮುನಿರಾಜು, ರಾಜೀವ್ ಗಾಂಧಿ ಬಡಾವಣೆಯಲ್ಲಿನ ಸ್ಥಳೀಯ ಕೆಲವು ಮುಖಂಡರು ಅಕ್ರಮವಾಗಿ ಮನೆಗಳ ಬೀಗ ಹೊಡೆದು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ, ಅಕ್ರಮವಾಗಿ ದಾಖಲೆಗಳನ್ನ ಸೃಷ್ಠಿಸಿ ಅಸಲಿ ಹಕ್ಕುದಾರರಿಗೆ ವಂಚನೆ ಮಾಡಿದ್ದಾರೆ, ಹಕ್ಕುಪತ್ರದ ವಾರಸುದಾರರು ಮನೆಗಳ ಬಳಿ ಬಂದರೆ ದಬ್ಬಾಳಿಕೆ ದೌರ್ಜನ್ಯ ನಡೆಸಿ ಅಲ್ಲಿಂದ ಓಡಿಸುತ್ತಾರೆ, ಪೌರಾಯುಕ್ತರು ಪ್ರತಿ ಮನೆಗೂ ಭೇಟಿ ನೀಡಿ ದಾಖಲೆಗಳನ್ನ ಪರಿಶೀಲನೆ ಮಾಡಬೇಕು, ನಕಲಿ ವಾಸಿಗಳನ್ನ ಪತ್ತೆ ಮಾಡಿ ಅಸಲಿ ಹಕ್ಕುಪತ್ರ ಇರುವ ಜನರಿಗೆ ಮನೆಗಳನ್ನ ನೀಡುವಂತೆ ಒತ್ತಾಯಿಸಿದರು.

ನಗರಸಭೆಯ ಎಸ್ ಡಿಎ ನೌಕರ ನಕಲಿ ದಾಖಲೆ ಸೃಷ್ಠಿಸಿ ಅಂಜಾದ್ ಖಾನ್ ರವರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸ ಬೇಕು, ಅವರು ನೀಡಿರುವ ಅಂಕಪಟ್ಟಿ ನಕಲಿಯಾಗಿದ್ದು, ಅದನ್ನು ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಗೌರವ ಅಧ್ಯಕ್ಷ ವಿ.ನಾಗರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚನ್ನಿಗರಾಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎ.ಮಂಜುನಾಥ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಕಾರ್ಯಾಧ್ಯಕ್ಷ ರಘುಕುಮಾರ್, ದೇವನಹಳ್ಳಿ ತಾಲೂಕು ಅಧ್ಯಕ್ಷ ಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಶಶಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾಲಿಗೆ ವೆಂಕಟೇಶ್, ರಾಜ್ಯ ಕಾರ್ಯದರ್ಶಿ ಮಹೇಶ್.ಎಂಡಿ, ಅಲ್ಪ ಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಮೊಕದ್ದರ್, ದೇವನಹಳ್ಳಿ ಮಹಿಳಾ ಘಟಕ ಅಧ್ಯಕ್ಷ ಸುಜಾತ, ಸೇರಿದಂತೆ ಮುಖಂಡರಾದ ಮಹಮ್ಮದ್ ಪೈಜುಲ್ಲಾ, ಜಬೀವುಲ್ಲಾ, ಅಂಜಾದ್ ಪಾಷಾ, ರವಿಕುಮಾರ್ ಇದ್ದರು

Ramesh Babu

Journalist

Recent Posts

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 hour ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 hour ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

9 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago