ಆಶ್ರಯ ಮನೆಗಳು ಬಲಾಢ್ಯರ ಪಾಲು ಆರೋಪ:

ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ ಮನೆಗಳನ್ನ ಕಬಳಿಸಲಾಗಿದೆ, ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ವಾಸವಾಗಿರುವರನ್ನ ತೆರವು ಮಾಡುವಂತೆ ಆಗ್ರಹಿಸಿ ದೊಡ್ಡಬಳ್ಳಾಪುರದ ನಗರಸಭೆಯ ಮುಂದೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಪ್ರತಿಭಟನೆ ನಡೆಸಿತು.

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ 2002ರಲ್ಲಿ ಅಶ್ರಯ ಯೋಜನೆಯಡಿ ಬಡವರು, ನಿರ್ಗತಿಕರು ಮತ್ತು ದಲಿತರಿಗೆ ನಿವೇಶಗಳ ಹಂಚಿಕೆ ಮಾಡಲಾಗಿದೆ, ಸುಮಾರು 50ಕ್ಕೂ ಹೆಚ್ಚು ಮನೆಗಳು ಇಲ್ಲಿನ ಸ್ಥಳೀಯ ಮುಖಂಡರೆಂದು ಕರೆಸಿಕೊಳ್ಳುವರ ವಶದಲ್ಲಿವೆ, ಅಕ್ರಮವಾಗಿ ವಾಸವಾಗಿರುವ ನಿವಾಸಿಗಳ ಮನೆಗಳನ್ನ ಖಾಲಿ ಮಾಡಿಸಿ, ಅಸಲಿ ಹಕ್ಕುಪತ್ರ ವಾರಸುದಾರರಿಗೆ ಆಶ್ರಯ ಮನೆಗಳನ್ನ ನೀಡುವಂತೆ ಪ್ರಬುದ್ಧ ಭೀಮ ಸೇನೆ ಒತ್ತಾಯಿಸಿದೆ.

ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಾಧ್ಯಕ್ಷರಾದ ಯು.ಮುನಿರಾಜು, ರಾಜೀವ್ ಗಾಂಧಿ ಬಡಾವಣೆಯಲ್ಲಿನ ಸ್ಥಳೀಯ ಕೆಲವು ಮುಖಂಡರು ಅಕ್ರಮವಾಗಿ ಮನೆಗಳ ಬೀಗ ಹೊಡೆದು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ, ಅಕ್ರಮವಾಗಿ ದಾಖಲೆಗಳನ್ನ ಸೃಷ್ಠಿಸಿ ಅಸಲಿ ಹಕ್ಕುದಾರರಿಗೆ ವಂಚನೆ ಮಾಡಿದ್ದಾರೆ, ಹಕ್ಕುಪತ್ರದ ವಾರಸುದಾರರು ಮನೆಗಳ ಬಳಿ ಬಂದರೆ ದಬ್ಬಾಳಿಕೆ ದೌರ್ಜನ್ಯ ನಡೆಸಿ ಅಲ್ಲಿಂದ ಓಡಿಸುತ್ತಾರೆ, ಪೌರಾಯುಕ್ತರು ಪ್ರತಿ ಮನೆಗೂ ಭೇಟಿ ನೀಡಿ ದಾಖಲೆಗಳನ್ನ ಪರಿಶೀಲನೆ ಮಾಡಬೇಕು, ನಕಲಿ ವಾಸಿಗಳನ್ನ ಪತ್ತೆ ಮಾಡಿ ಅಸಲಿ ಹಕ್ಕುಪತ್ರ ಇರುವ ಜನರಿಗೆ ಮನೆಗಳನ್ನ ನೀಡುವಂತೆ ಒತ್ತಾಯಿಸಿದರು.

ನಗರಸಭೆಯ ಎಸ್ ಡಿಎ ನೌಕರ ನಕಲಿ ದಾಖಲೆ ಸೃಷ್ಠಿಸಿ ಅಂಜಾದ್ ಖಾನ್ ರವರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸ ಬೇಕು, ಅವರು ನೀಡಿರುವ ಅಂಕಪಟ್ಟಿ ನಕಲಿಯಾಗಿದ್ದು, ಅದನ್ನು ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಗೌರವ ಅಧ್ಯಕ್ಷ ವಿ.ನಾಗರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚನ್ನಿಗರಾಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎ.ಮಂಜುನಾಥ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಕಾರ್ಯಾಧ್ಯಕ್ಷ ರಘುಕುಮಾರ್, ದೇವನಹಳ್ಳಿ ತಾಲೂಕು ಅಧ್ಯಕ್ಷ ಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಶಶಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾಲಿಗೆ ವೆಂಕಟೇಶ್, ರಾಜ್ಯ ಕಾರ್ಯದರ್ಶಿ ಮಹೇಶ್.ಎಂಡಿ, ಅಲ್ಪ ಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಮೊಕದ್ದರ್, ದೇವನಹಳ್ಳಿ ಮಹಿಳಾ ಘಟಕ ಅಧ್ಯಕ್ಷ ಸುಜಾತ, ಸೇರಿದಂತೆ ಮುಖಂಡರಾದ ಮಹಮ್ಮದ್ ಪೈಜುಲ್ಲಾ, ಜಬೀವುಲ್ಲಾ, ಅಂಜಾದ್ ಪಾಷಾ, ರವಿಕುಮಾರ್ ಇದ್ದರು

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

8 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

8 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

9 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

14 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

20 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago