ಆಷಾಡ ಮಾಸ ಹಾಗೂ ದ್ವಾದಶಿ ಪ್ರಯುಕ್ತ ಗಂಗಮ್ಮ, ಚೌಡೇಶ್ವರಿ, ಮುತ್ಯಾಲಮ್ಮ, ಲಕ್ಷ್ಮಿದೇವಿ, ಕಾಳಮ್ಮ ದೇವತೆಗಳ ಉತ್ಸವ

ಪ್ರತಿವರ್ಷದಂತೆ ಈ ವರ್ಷವೂ ಸಹ ಆಷಾಡ ಮಾಸದ ಏಕಾದಶಿಯಾದ ಮಾರನೇ ದಿನವಾದ ದ್ವಾದಶಿ ಪ್ರಯುಕ್ತ ನಗರದ ಹೇಮಾವತಿ ಪೇಟೆಯಲ್ಲಿ ಹೇಮಾವತಿಪೇಟೆ ಯುವಕರ ಸಂಘದ ವತಿಯಿಂದ ಗಂಗಮ್ಮ, ಚೌಡೇಶ್ವರಿ, ಮುತ್ಯಾಲಮ್ಮ, ಲಕ್ಷ್ಮಿದೇವಿ, ಕಾಳಮ್ಮ ದೇವತೆಗಳ ಉತ್ಸವ ಅದ್ಧೂರಿಯಾಗಿ ನಡೆಸಲಾಗುತ್ತಿದೆ.

ಈ ಉತ್ಸವ ಐದು ದಿನಗಳು ನಡೆಯಲಿದ್ದು, ಪ್ರತಿದಿನ ವಿಶೇಷ ಆರತಿ, ಲಲಿತ ಪಾರಾಯಣ, ಮಕ್ಕಳಿಂದ ಭರತನಾಟ್ಯ ಸೇರಿದಂತೆ ಸ್ಥಳೀಯ ಕಲಾವಿದರಿಂದ ವಿಶೇಷ‌ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಸುಮಾರು 70ರಿಂದ 80‌ ವರ್ಷಗಳ ಇತಿಹಾಸ ಇರುವ ನಾಗರ ಕಲ್ಲುಗಳು ಇರುವ ಜಾಗದಲ್ಲಿ ಐದು ದೇವತೆಗಳನ್ನು ಪ್ರತಿಷ್ಠಾಪಿಸಿ ವಿಶೇಷ ಆರತಿ, ಪೂಜಾ ಪುನಸ್ಕಾರ, ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿರುವುದು ಎಲ್ಲರ ಕಣ್ಮನ ಸೆಳೆಯಿತು. ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ನಡೆಸಲಾಗುತ್ತಿದೆ.

ಹೇಮಾವತಿಪೇಟೆ ಯುವಕರ ಸಂಘದಿಂದ ಕಳೆದ 30 ವರ್ಷಗಳಿಂದ ದೇವತೆಗಳ ಉತ್ಸವ ನಡೆಸಲಾಗುತ್ತಿದೆ. ಆಷಾಡ ಮಾಸದ ಪ್ರಯುಕ್ತ ಐದು ದೇವತೆಗಳಿಗೆ ಅದ್ಧೂರಿಯಾಗಿ ಪೂಜಾ ಕಾರ್ಯಕ್ರಮಗಳನ್ನ ನಡೆಸಲಾಗುತ್ತದೆ, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಸಂಘದ ಉಪಾಧ್ಯಕ್ಷರಾದ ಮಹೇಶ್ ತಿಳಿಸಿದರು.

ಈ ವೇಳೆ ಕಿರಣ್ ಖಜಾಂಚಿ, ಮಾರ್ಗದರ್ಶಕಾರಾದ ಎಂಪಿಸಿ ರಾಮಮೂರ್ತಿ, ಶೇಖರ್ ಮತ್ತು ಹರೀಶ್ ಇದ್ದರು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

7 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

18 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago