‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

‘ಆಸರೆ’ ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್ ಸಿಬ್ಬಂದಿ ಗಣಪತಿ ಅವಟಿ ಭೇಟಿ ನೀಡಿ ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ವಿಚಾರಿಸಿದರು.

ಜೊತೆಗೆ ವೃದ್ಧರ ದೌರ್ಜನ್ಯ ತಡೆ, ಆರೋಗ್ಯ ನೆರವು ಮತ್ತು ಆತ್ಮವಿಶ್ವಾಸ, ಆಸರೆ ಯೋಜನೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು.

ಏನಿದು ‘ಆಸರೆ’ ಯೋಜನೆ…?

ಕರ್ನಾಟಕ ಪೊಲೀಸ್ ಇಲಾಖೆಯ ‘ಆಸರೆ’ ಯೋಜನೆಯು ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಒಂದು ಪ್ರಮುಖ ಸಮುದಾಯ ಪೊಲೀಸ್ ಉಪಕ್ರಮವಾಗಿದೆ.

ಇದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧರ ಮನೆಗಳಿಗೆ ನಿಯಮಿತ ಭೇಟಿ ನೀಡುವುದು, ದೌರ್ಜನ್ಯ ತಡೆ, ಆರೋಗ್ಯ ನೆರವು ಮತ್ತು ಆತ್ಮವಿಶ್ವಾಸ ಮೂಡಿಸಲಾಗತ್ತದೆ.

ಆಸರೆ ಯೋಜನೆಯ ಪ್ರಮುಖ ಕಾರ್ಯಗಳು:

ನಿಯಮಿತ ಭೇಟಿ ಮತ್ತು ಪರಿಶೀಲನೆ: ಬೀಟ್ ಪೊಲೀಸರು ಒಂಟಿ ಹಿರಿಯ ನಾಗರಿಕರ ಮನೆಗಳಿಗೆ ನಿಯಮಿತವಾಗಿ ಭೇಟಿ ನೀಡಿ (ಸಾಪ್ತಾಹಿಕ), ಅವರ ಯೋಗಕ್ಷೇಮ ವಿಚಾರಿಸುತ್ತಾರೆ ಮತ್ತು ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುತ್ತಾರೆ.

ದೌರ್ಜನ್ಯ ತಡೆ (Protection from Harassment): ಮಕ್ಕಳು ಅಥವಾ ಸಂಬಂಧಿಕರಿಂದ ಕಿರುಕುಳಕ್ಕೊಳಗಾದ ಹಿರಿಯ ನಾಗರಿಕರಿಗೆ, ಒಂಟಿ ಮಹಿಳೆಯರಿಗೆ ನೆರವು ನೀಡುವುದು ಮತ್ತು ಅವರಿಗೆ ರಕ್ಷಣೆ ಒದಗಿಸುವುದು.

ವೈದ್ಯಕೀಯ ನೆರವು: ತುರ್ತು ಆರೋಗ್ಯ ಸಮಸ್ಯೆಗಳು ಎದುರಾದಾಗ ಎನ್‌ಜಿಒ (NGO) ಗಳ ಸಹಯೋಗದೊಂದಿಗೆ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ವ್ಯವಸ್ಥೆ ಮಾಡುವುದು.

ಮಾಹಿತಿ ಸಂಗ್ರಹಣೆ: ಠಾಣಾ ವ್ಯಾಪ್ತಿಯಲ್ಲಿರುವ ಒಂಟಿ ಹಿರಿಯ ನಾಗರಿಕರ ಮಾಹಿತಿಯನ್ನು (ಡೇಟಾಬೇಸ್) ಸಂಗ್ರಹಿಸಿ, ಅವರೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

ಜಾಗೃತಿ ಮತ್ತು ಭರವಸೆ: ಹಿರಿಯರಿಗೆ ತಾವು ಒಂಟಿಯಲ್ಲ, ನಮ್ಮೊಂದಿಗೆ ಪೊಲೀಸ್ ಇಲಾಖೆ ಇದೆ ಎಂಬ ಭರವಸೆ ಮತ್ತು ಆತ್ಮವಿಶ್ವಾಸ ಮೂಡಿಸುವುದು.

ಸಮಸ್ಯೆಗಳ ಪರಿಹಾರ: ಕೌಟುಂಬಿಕ ಕಲಹ ಅಥವಾ ಆಸ್ತಿ ವಿವಾದಗಳಿಂದಾಗಿ ಮನೆಯಿಂದ ಹೊರಹಾಕಲ್ಪಟ್ಟವರಿಗೆ ಕಾನೂನು ನೆರವು ಒದಗಿಸುವುದು.

ಈ ಯೋಜನೆಯು ಸಮಾಜದಲ್ಲಿ ಒಂಟಿಯಾಗಿ ವಾಸಿಸುವವರ ಸಂಕಷ್ಟಗಳಿಗೆ ತಕ್ಷಣದ ಸ್ಪಂದನೆ ನೀಡುವ ಮೂಲಕ, ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ನಡುವಿನ ನಂಬಿಕೆಯನ್ನು ಗಟ್ಟಿಗೊಳಿಸುತ್ತದೆ…

Ramesh Babu

Journalist

Recent Posts

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

4 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

7 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

8 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

10 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

10 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

10 hours ago