‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

‘ಆಸರೆ’ ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್ ಸಿಬ್ಬಂದಿ ಗಣಪತಿ ಅವಟಿ ಭೇಟಿ ನೀಡಿ ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ವಿಚಾರಿಸಿದರು.

ಜೊತೆಗೆ ವೃದ್ಧರ ದೌರ್ಜನ್ಯ ತಡೆ, ಆರೋಗ್ಯ ನೆರವು ಮತ್ತು ಆತ್ಮವಿಶ್ವಾಸ, ಆಸರೆ ಯೋಜನೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು.

ಏನಿದು ‘ಆಸರೆ’ ಯೋಜನೆ…?

ಕರ್ನಾಟಕ ಪೊಲೀಸ್ ಇಲಾಖೆಯ ‘ಆಸರೆ’ ಯೋಜನೆಯು ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಒಂದು ಪ್ರಮುಖ ಸಮುದಾಯ ಪೊಲೀಸ್ ಉಪಕ್ರಮವಾಗಿದೆ.

ಇದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧರ ಮನೆಗಳಿಗೆ ನಿಯಮಿತ ಭೇಟಿ ನೀಡುವುದು, ದೌರ್ಜನ್ಯ ತಡೆ, ಆರೋಗ್ಯ ನೆರವು ಮತ್ತು ಆತ್ಮವಿಶ್ವಾಸ ಮೂಡಿಸಲಾಗತ್ತದೆ.

ಆಸರೆ ಯೋಜನೆಯ ಪ್ರಮುಖ ಕಾರ್ಯಗಳು:

ನಿಯಮಿತ ಭೇಟಿ ಮತ್ತು ಪರಿಶೀಲನೆ: ಬೀಟ್ ಪೊಲೀಸರು ಒಂಟಿ ಹಿರಿಯ ನಾಗರಿಕರ ಮನೆಗಳಿಗೆ ನಿಯಮಿತವಾಗಿ ಭೇಟಿ ನೀಡಿ (ಸಾಪ್ತಾಹಿಕ), ಅವರ ಯೋಗಕ್ಷೇಮ ವಿಚಾರಿಸುತ್ತಾರೆ ಮತ್ತು ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುತ್ತಾರೆ.

ದೌರ್ಜನ್ಯ ತಡೆ (Protection from Harassment): ಮಕ್ಕಳು ಅಥವಾ ಸಂಬಂಧಿಕರಿಂದ ಕಿರುಕುಳಕ್ಕೊಳಗಾದ ಹಿರಿಯ ನಾಗರಿಕರಿಗೆ, ಒಂಟಿ ಮಹಿಳೆಯರಿಗೆ ನೆರವು ನೀಡುವುದು ಮತ್ತು ಅವರಿಗೆ ರಕ್ಷಣೆ ಒದಗಿಸುವುದು.

ವೈದ್ಯಕೀಯ ನೆರವು: ತುರ್ತು ಆರೋಗ್ಯ ಸಮಸ್ಯೆಗಳು ಎದುರಾದಾಗ ಎನ್‌ಜಿಒ (NGO) ಗಳ ಸಹಯೋಗದೊಂದಿಗೆ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ವ್ಯವಸ್ಥೆ ಮಾಡುವುದು.

ಮಾಹಿತಿ ಸಂಗ್ರಹಣೆ: ಠಾಣಾ ವ್ಯಾಪ್ತಿಯಲ್ಲಿರುವ ಒಂಟಿ ಹಿರಿಯ ನಾಗರಿಕರ ಮಾಹಿತಿಯನ್ನು (ಡೇಟಾಬೇಸ್) ಸಂಗ್ರಹಿಸಿ, ಅವರೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

ಜಾಗೃತಿ ಮತ್ತು ಭರವಸೆ: ಹಿರಿಯರಿಗೆ ತಾವು ಒಂಟಿಯಲ್ಲ, ನಮ್ಮೊಂದಿಗೆ ಪೊಲೀಸ್ ಇಲಾಖೆ ಇದೆ ಎಂಬ ಭರವಸೆ ಮತ್ತು ಆತ್ಮವಿಶ್ವಾಸ ಮೂಡಿಸುವುದು.

ಸಮಸ್ಯೆಗಳ ಪರಿಹಾರ: ಕೌಟುಂಬಿಕ ಕಲಹ ಅಥವಾ ಆಸ್ತಿ ವಿವಾದಗಳಿಂದಾಗಿ ಮನೆಯಿಂದ ಹೊರಹಾಕಲ್ಪಟ್ಟವರಿಗೆ ಕಾನೂನು ನೆರವು ಒದಗಿಸುವುದು.

ಈ ಯೋಜನೆಯು ಸಮಾಜದಲ್ಲಿ ಒಂಟಿಯಾಗಿ ವಾಸಿಸುವವರ ಸಂಕಷ್ಟಗಳಿಗೆ ತಕ್ಷಣದ ಸ್ಪಂದನೆ ನೀಡುವ ಮೂಲಕ, ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ನಡುವಿನ ನಂಬಿಕೆಯನ್ನು ಗಟ್ಟಿಗೊಳಿಸುತ್ತದೆ…

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago