‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

‘ಆಸರೆ’ ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್ ಸಿಬ್ಬಂದಿ ಗಣಪತಿ ಅವಟಿ ಭೇಟಿ ನೀಡಿ ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ವಿಚಾರಿಸಿದರು.

ಜೊತೆಗೆ ವೃದ್ಧರ ದೌರ್ಜನ್ಯ ತಡೆ, ಆರೋಗ್ಯ ನೆರವು ಮತ್ತು ಆತ್ಮವಿಶ್ವಾಸ, ಆಸರೆ ಯೋಜನೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು.

ಏನಿದು ‘ಆಸರೆ’ ಯೋಜನೆ…?

ಕರ್ನಾಟಕ ಪೊಲೀಸ್ ಇಲಾಖೆಯ ‘ಆಸರೆ’ ಯೋಜನೆಯು ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಒಂದು ಪ್ರಮುಖ ಸಮುದಾಯ ಪೊಲೀಸ್ ಉಪಕ್ರಮವಾಗಿದೆ.

ಇದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧರ ಮನೆಗಳಿಗೆ ನಿಯಮಿತ ಭೇಟಿ ನೀಡುವುದು, ದೌರ್ಜನ್ಯ ತಡೆ, ಆರೋಗ್ಯ ನೆರವು ಮತ್ತು ಆತ್ಮವಿಶ್ವಾಸ ಮೂಡಿಸಲಾಗತ್ತದೆ.

ಆಸರೆ ಯೋಜನೆಯ ಪ್ರಮುಖ ಕಾರ್ಯಗಳು:

ನಿಯಮಿತ ಭೇಟಿ ಮತ್ತು ಪರಿಶೀಲನೆ: ಬೀಟ್ ಪೊಲೀಸರು ಒಂಟಿ ಹಿರಿಯ ನಾಗರಿಕರ ಮನೆಗಳಿಗೆ ನಿಯಮಿತವಾಗಿ ಭೇಟಿ ನೀಡಿ (ಸಾಪ್ತಾಹಿಕ), ಅವರ ಯೋಗಕ್ಷೇಮ ವಿಚಾರಿಸುತ್ತಾರೆ ಮತ್ತು ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುತ್ತಾರೆ.

ದೌರ್ಜನ್ಯ ತಡೆ (Protection from Harassment): ಮಕ್ಕಳು ಅಥವಾ ಸಂಬಂಧಿಕರಿಂದ ಕಿರುಕುಳಕ್ಕೊಳಗಾದ ಹಿರಿಯ ನಾಗರಿಕರಿಗೆ, ಒಂಟಿ ಮಹಿಳೆಯರಿಗೆ ನೆರವು ನೀಡುವುದು ಮತ್ತು ಅವರಿಗೆ ರಕ್ಷಣೆ ಒದಗಿಸುವುದು.

ವೈದ್ಯಕೀಯ ನೆರವು: ತುರ್ತು ಆರೋಗ್ಯ ಸಮಸ್ಯೆಗಳು ಎದುರಾದಾಗ ಎನ್‌ಜಿಒ (NGO) ಗಳ ಸಹಯೋಗದೊಂದಿಗೆ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ವ್ಯವಸ್ಥೆ ಮಾಡುವುದು.

ಮಾಹಿತಿ ಸಂಗ್ರಹಣೆ: ಠಾಣಾ ವ್ಯಾಪ್ತಿಯಲ್ಲಿರುವ ಒಂಟಿ ಹಿರಿಯ ನಾಗರಿಕರ ಮಾಹಿತಿಯನ್ನು (ಡೇಟಾಬೇಸ್) ಸಂಗ್ರಹಿಸಿ, ಅವರೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

ಜಾಗೃತಿ ಮತ್ತು ಭರವಸೆ: ಹಿರಿಯರಿಗೆ ತಾವು ಒಂಟಿಯಲ್ಲ, ನಮ್ಮೊಂದಿಗೆ ಪೊಲೀಸ್ ಇಲಾಖೆ ಇದೆ ಎಂಬ ಭರವಸೆ ಮತ್ತು ಆತ್ಮವಿಶ್ವಾಸ ಮೂಡಿಸುವುದು.

ಸಮಸ್ಯೆಗಳ ಪರಿಹಾರ: ಕೌಟುಂಬಿಕ ಕಲಹ ಅಥವಾ ಆಸ್ತಿ ವಿವಾದಗಳಿಂದಾಗಿ ಮನೆಯಿಂದ ಹೊರಹಾಕಲ್ಪಟ್ಟವರಿಗೆ ಕಾನೂನು ನೆರವು ಒದಗಿಸುವುದು.

ಈ ಯೋಜನೆಯು ಸಮಾಜದಲ್ಲಿ ಒಂಟಿಯಾಗಿ ವಾಸಿಸುವವರ ಸಂಕಷ್ಟಗಳಿಗೆ ತಕ್ಷಣದ ಸ್ಪಂದನೆ ನೀಡುವ ಮೂಲಕ, ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ನಡುವಿನ ನಂಬಿಕೆಯನ್ನು ಗಟ್ಟಿಗೊಳಿಸುತ್ತದೆ…

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

3 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

7 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

9 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

11 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago