‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

‘ಆಸರೆ’ ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್ ಸಿಬ್ಬಂದಿ ಗಣಪತಿ ಅವಟಿ ಭೇಟಿ ನೀಡಿ ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ವಿಚಾರಿಸಿದರು.

ಜೊತೆಗೆ ವೃದ್ಧರ ದೌರ್ಜನ್ಯ ತಡೆ, ಆರೋಗ್ಯ ನೆರವು ಮತ್ತು ಆತ್ಮವಿಶ್ವಾಸ, ಆಸರೆ ಯೋಜನೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು.

ಏನಿದು ‘ಆಸರೆ’ ಯೋಜನೆ…?

ಕರ್ನಾಟಕ ಪೊಲೀಸ್ ಇಲಾಖೆಯ ‘ಆಸರೆ’ ಯೋಜನೆಯು ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಒಂದು ಪ್ರಮುಖ ಸಮುದಾಯ ಪೊಲೀಸ್ ಉಪಕ್ರಮವಾಗಿದೆ.

ಇದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧರ ಮನೆಗಳಿಗೆ ನಿಯಮಿತ ಭೇಟಿ ನೀಡುವುದು, ದೌರ್ಜನ್ಯ ತಡೆ, ಆರೋಗ್ಯ ನೆರವು ಮತ್ತು ಆತ್ಮವಿಶ್ವಾಸ ಮೂಡಿಸಲಾಗತ್ತದೆ.

ಆಸರೆ ಯೋಜನೆಯ ಪ್ರಮುಖ ಕಾರ್ಯಗಳು:

ನಿಯಮಿತ ಭೇಟಿ ಮತ್ತು ಪರಿಶೀಲನೆ: ಬೀಟ್ ಪೊಲೀಸರು ಒಂಟಿ ಹಿರಿಯ ನಾಗರಿಕರ ಮನೆಗಳಿಗೆ ನಿಯಮಿತವಾಗಿ ಭೇಟಿ ನೀಡಿ (ಸಾಪ್ತಾಹಿಕ), ಅವರ ಯೋಗಕ್ಷೇಮ ವಿಚಾರಿಸುತ್ತಾರೆ ಮತ್ತು ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುತ್ತಾರೆ.

ದೌರ್ಜನ್ಯ ತಡೆ (Protection from Harassment): ಮಕ್ಕಳು ಅಥವಾ ಸಂಬಂಧಿಕರಿಂದ ಕಿರುಕುಳಕ್ಕೊಳಗಾದ ಹಿರಿಯ ನಾಗರಿಕರಿಗೆ, ಒಂಟಿ ಮಹಿಳೆಯರಿಗೆ ನೆರವು ನೀಡುವುದು ಮತ್ತು ಅವರಿಗೆ ರಕ್ಷಣೆ ಒದಗಿಸುವುದು.

ವೈದ್ಯಕೀಯ ನೆರವು: ತುರ್ತು ಆರೋಗ್ಯ ಸಮಸ್ಯೆಗಳು ಎದುರಾದಾಗ ಎನ್‌ಜಿಒ (NGO) ಗಳ ಸಹಯೋಗದೊಂದಿಗೆ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ವ್ಯವಸ್ಥೆ ಮಾಡುವುದು.

ಮಾಹಿತಿ ಸಂಗ್ರಹಣೆ: ಠಾಣಾ ವ್ಯಾಪ್ತಿಯಲ್ಲಿರುವ ಒಂಟಿ ಹಿರಿಯ ನಾಗರಿಕರ ಮಾಹಿತಿಯನ್ನು (ಡೇಟಾಬೇಸ್) ಸಂಗ್ರಹಿಸಿ, ಅವರೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

ಜಾಗೃತಿ ಮತ್ತು ಭರವಸೆ: ಹಿರಿಯರಿಗೆ ತಾವು ಒಂಟಿಯಲ್ಲ, ನಮ್ಮೊಂದಿಗೆ ಪೊಲೀಸ್ ಇಲಾಖೆ ಇದೆ ಎಂಬ ಭರವಸೆ ಮತ್ತು ಆತ್ಮವಿಶ್ವಾಸ ಮೂಡಿಸುವುದು.

ಸಮಸ್ಯೆಗಳ ಪರಿಹಾರ: ಕೌಟುಂಬಿಕ ಕಲಹ ಅಥವಾ ಆಸ್ತಿ ವಿವಾದಗಳಿಂದಾಗಿ ಮನೆಯಿಂದ ಹೊರಹಾಕಲ್ಪಟ್ಟವರಿಗೆ ಕಾನೂನು ನೆರವು ಒದಗಿಸುವುದು.

ಈ ಯೋಜನೆಯು ಸಮಾಜದಲ್ಲಿ ಒಂಟಿಯಾಗಿ ವಾಸಿಸುವವರ ಸಂಕಷ್ಟಗಳಿಗೆ ತಕ್ಷಣದ ಸ್ಪಂದನೆ ನೀಡುವ ಮೂಲಕ, ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ನಡುವಿನ ನಂಬಿಕೆಯನ್ನು ಗಟ್ಟಿಗೊಳಿಸುತ್ತದೆ…

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

10 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

10 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

11 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

14 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago