‘ಆಸರೆ’ ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್ ಸಿಬ್ಬಂದಿ ಗಣಪತಿ ಅವಟಿ ಭೇಟಿ ನೀಡಿ ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ವಿಚಾರಿಸಿದರು.
ಜೊತೆಗೆ ವೃದ್ಧರ ದೌರ್ಜನ್ಯ ತಡೆ, ಆರೋಗ್ಯ ನೆರವು ಮತ್ತು ಆತ್ಮವಿಶ್ವಾಸ, ಆಸರೆ ಯೋಜನೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು.
ಏನಿದು ‘ಆಸರೆ’ ಯೋಜನೆ…?
ಕರ್ನಾಟಕ ಪೊಲೀಸ್ ಇಲಾಖೆಯ ‘ಆಸರೆ’ ಯೋಜನೆಯು ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಒಂದು ಪ್ರಮುಖ ಸಮುದಾಯ ಪೊಲೀಸ್ ಉಪಕ್ರಮವಾಗಿದೆ.
ಇದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧರ ಮನೆಗಳಿಗೆ ನಿಯಮಿತ ಭೇಟಿ ನೀಡುವುದು, ದೌರ್ಜನ್ಯ ತಡೆ, ಆರೋಗ್ಯ ನೆರವು ಮತ್ತು ಆತ್ಮವಿಶ್ವಾಸ ಮೂಡಿಸಲಾಗತ್ತದೆ.
ಆಸರೆ ಯೋಜನೆಯ ಪ್ರಮುಖ ಕಾರ್ಯಗಳು:
ನಿಯಮಿತ ಭೇಟಿ ಮತ್ತು ಪರಿಶೀಲನೆ: ಬೀಟ್ ಪೊಲೀಸರು ಒಂಟಿ ಹಿರಿಯ ನಾಗರಿಕರ ಮನೆಗಳಿಗೆ ನಿಯಮಿತವಾಗಿ ಭೇಟಿ ನೀಡಿ (ಸಾಪ್ತಾಹಿಕ), ಅವರ ಯೋಗಕ್ಷೇಮ ವಿಚಾರಿಸುತ್ತಾರೆ ಮತ್ತು ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುತ್ತಾರೆ.
ದೌರ್ಜನ್ಯ ತಡೆ (Protection from Harassment): ಮಕ್ಕಳು ಅಥವಾ ಸಂಬಂಧಿಕರಿಂದ ಕಿರುಕುಳಕ್ಕೊಳಗಾದ ಹಿರಿಯ ನಾಗರಿಕರಿಗೆ, ಒಂಟಿ ಮಹಿಳೆಯರಿಗೆ ನೆರವು ನೀಡುವುದು ಮತ್ತು ಅವರಿಗೆ ರಕ್ಷಣೆ ಒದಗಿಸುವುದು.
ವೈದ್ಯಕೀಯ ನೆರವು: ತುರ್ತು ಆರೋಗ್ಯ ಸಮಸ್ಯೆಗಳು ಎದುರಾದಾಗ ಎನ್ಜಿಒ (NGO) ಗಳ ಸಹಯೋಗದೊಂದಿಗೆ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ವ್ಯವಸ್ಥೆ ಮಾಡುವುದು.
ಮಾಹಿತಿ ಸಂಗ್ರಹಣೆ: ಠಾಣಾ ವ್ಯಾಪ್ತಿಯಲ್ಲಿರುವ ಒಂಟಿ ಹಿರಿಯ ನಾಗರಿಕರ ಮಾಹಿತಿಯನ್ನು (ಡೇಟಾಬೇಸ್) ಸಂಗ್ರಹಿಸಿ, ಅವರೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
ಜಾಗೃತಿ ಮತ್ತು ಭರವಸೆ: ಹಿರಿಯರಿಗೆ ತಾವು ಒಂಟಿಯಲ್ಲ, ನಮ್ಮೊಂದಿಗೆ ಪೊಲೀಸ್ ಇಲಾಖೆ ಇದೆ ಎಂಬ ಭರವಸೆ ಮತ್ತು ಆತ್ಮವಿಶ್ವಾಸ ಮೂಡಿಸುವುದು.
ಸಮಸ್ಯೆಗಳ ಪರಿಹಾರ: ಕೌಟುಂಬಿಕ ಕಲಹ ಅಥವಾ ಆಸ್ತಿ ವಿವಾದಗಳಿಂದಾಗಿ ಮನೆಯಿಂದ ಹೊರಹಾಕಲ್ಪಟ್ಟವರಿಗೆ ಕಾನೂನು ನೆರವು ಒದಗಿಸುವುದು.
ಈ ಯೋಜನೆಯು ಸಮಾಜದಲ್ಲಿ ಒಂಟಿಯಾಗಿ ವಾಸಿಸುವವರ ಸಂಕಷ್ಟಗಳಿಗೆ ತಕ್ಷಣದ ಸ್ಪಂದನೆ ನೀಡುವ ಮೂಲಕ, ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ನಡುವಿನ ನಂಬಿಕೆಯನ್ನು ಗಟ್ಟಿಗೊಳಿಸುತ್ತದೆ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…