ಆಸೀಸ್ ಬೌಲಿಂಗ್ ಪಡೆಗೆ ಬೆವರಿಳಿಸಿದ ಭಾರತ, 44 ರನ್ ಗಳ ಜಯ !

ಆಸ್ಟ್ರೇಲಿಯಾದ ವಿರುದ್ಧ ಆರಂಭವಾಗಿರುವ ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿಯ ಎರಡನೇ ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ ನೇತೃತ್ವದ ಭಾರತದ ತಂಡದ ಬ್ಯಾಟಿಂಗ್ ಬಲದಿಂದ ಆಸ್ಟ್ರೇಲಿಯಾದ ಬೌಲಿಂಗ್ ಪಡೆಗೆ ಬೆವರಿಳಿಸಿ ಬೃಹತ್ ಮೊತ್ತ ಕಲೆಹಾಕಿದರು.

ಟಾಸ್ ಸೋತರೂ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (53) ಹಾಗೂ ಉಪನಾಯಕ ಋತುರಾಜ್ ಗಾಯಕ್ವಾಡ್ (58) ಉತ್ತಮ ಆರಂಭವನ್ನು ನೀಡಿದರು.

ನಂತರ ಬಂದ ಇಶಾನ್ ಕಿಶನ್ ಇನ್ನಿಂಗ್ಸ್ ಗೆ ವೇಗ ತುಂಬಿದರು, ಕೇವಲ 32 ಬಾಲ್ ಗೆ ನಾಲ್ಕು ಸಿಕ್ಸರ್ ಹಾಗೂ ಮೂರು ಬೌಂಡರಿ ಸಹಿತ (52) ರನ್ ಗಳಿಸಿದರು.

ನಾಯಕ ಸೂರ್ಯ ಕುಮಾರ್ ಯಾದವ್ (19) ಹಾಗೂ ಕೊನೆಗೆ ಬಂದ ಮಧ್ಯಮ ಕ್ರಮಾಂಕದ ಆಟಗಾರ ರಿಂಕು ಸಿಂಗ್ ಕೇವಲ 9 ಎಸೆತಗಳಲ್ಲಿ 31ರನ್ ಸಿಡಿಸಿ ತಂಡದ ಮೊತ್ತವನ್ನು 235 ರನ್ ಏರಿಸಿದರು.

ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಅನುಭವಿಸಿತು, ಭಾರತದ ಕರಾರುವಾಕ್ ದಾಳಿಗೆ ಬೆದರಿದ ಆಸೀಸ್ 191 ರನ್ ಗೆ ಆಲೌಟ್ ಆಯಿತು.

ಸ್ಟೀವನ್ ಸ್ಮಿತ್ (19), ಮ್ಯಾಥ್ಯೂ ಶಾಟ್೯ (19), ಜೋಶ್ ಇಂಗ್ಲಿಷ್ (2), ಮ್ಯಾಕ್ಸ್ ವೆಲ್ (12) ನಿರಾಸೆ ಮೂಡಿಸಿದರು, ಆದರೆ ಅಲ್ ರೌಂಡರ್ ಮಾಕ್೯ ಸ್ಟೋನಿಸ್ (45), ಟೀಮ್ ಡೇವಿಡ್ (37) ಹಾಗೂ ಮ್ಯಾಥ್ಯೂ ವೆಡ್ (42) ರನ್ ಗಳಿಸಿ 191 ರನ್ ಗಳಿಸಿದರು.

ಭಾರತದ ಪರವಾಗಿ ವೇಗಿ ಪ್ರಸಿದ್ಧ ಕೃಷ್ಣ ಹಾಗೂ ರವಿ ಬಿಷ್ಣೋಯಿ ತಲಾ 3 ವಿಕೆಟ್ ಪಡೆದರೆ ಅಕ್ಷರ್ ಪಟೇಲ್, ಮುಖೇಶ್ ಕುಮಾರ್ ಹಾಗೂ ಅಶ೯ದೀಪ್ ಸಿಂಗ್ ತಲಾ ಒಂದು ವಿಕೆಟ್ ಪಡೆದರು.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

14 seconds ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

21 minutes ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

3 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

3 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

12 hours ago