ಆಸೀಸ್ ಬೌಲಿಂಗ್ ಪಡೆಗೆ ಬೆವರಿಳಿಸಿದ ಭಾರತ, 44 ರನ್ ಗಳ ಜಯ !

ಆಸ್ಟ್ರೇಲಿಯಾದ ವಿರುದ್ಧ ಆರಂಭವಾಗಿರುವ ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿಯ ಎರಡನೇ ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ ನೇತೃತ್ವದ ಭಾರತದ ತಂಡದ ಬ್ಯಾಟಿಂಗ್ ಬಲದಿಂದ ಆಸ್ಟ್ರೇಲಿಯಾದ ಬೌಲಿಂಗ್ ಪಡೆಗೆ ಬೆವರಿಳಿಸಿ ಬೃಹತ್ ಮೊತ್ತ ಕಲೆಹಾಕಿದರು.

ಟಾಸ್ ಸೋತರೂ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (53) ಹಾಗೂ ಉಪನಾಯಕ ಋತುರಾಜ್ ಗಾಯಕ್ವಾಡ್ (58) ಉತ್ತಮ ಆರಂಭವನ್ನು ನೀಡಿದರು.

ನಂತರ ಬಂದ ಇಶಾನ್ ಕಿಶನ್ ಇನ್ನಿಂಗ್ಸ್ ಗೆ ವೇಗ ತುಂಬಿದರು, ಕೇವಲ 32 ಬಾಲ್ ಗೆ ನಾಲ್ಕು ಸಿಕ್ಸರ್ ಹಾಗೂ ಮೂರು ಬೌಂಡರಿ ಸಹಿತ (52) ರನ್ ಗಳಿಸಿದರು.

ನಾಯಕ ಸೂರ್ಯ ಕುಮಾರ್ ಯಾದವ್ (19) ಹಾಗೂ ಕೊನೆಗೆ ಬಂದ ಮಧ್ಯಮ ಕ್ರಮಾಂಕದ ಆಟಗಾರ ರಿಂಕು ಸಿಂಗ್ ಕೇವಲ 9 ಎಸೆತಗಳಲ್ಲಿ 31ರನ್ ಸಿಡಿಸಿ ತಂಡದ ಮೊತ್ತವನ್ನು 235 ರನ್ ಏರಿಸಿದರು.

ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಅನುಭವಿಸಿತು, ಭಾರತದ ಕರಾರುವಾಕ್ ದಾಳಿಗೆ ಬೆದರಿದ ಆಸೀಸ್ 191 ರನ್ ಗೆ ಆಲೌಟ್ ಆಯಿತು.

ಸ್ಟೀವನ್ ಸ್ಮಿತ್ (19), ಮ್ಯಾಥ್ಯೂ ಶಾಟ್೯ (19), ಜೋಶ್ ಇಂಗ್ಲಿಷ್ (2), ಮ್ಯಾಕ್ಸ್ ವೆಲ್ (12) ನಿರಾಸೆ ಮೂಡಿಸಿದರು, ಆದರೆ ಅಲ್ ರೌಂಡರ್ ಮಾಕ್೯ ಸ್ಟೋನಿಸ್ (45), ಟೀಮ್ ಡೇವಿಡ್ (37) ಹಾಗೂ ಮ್ಯಾಥ್ಯೂ ವೆಡ್ (42) ರನ್ ಗಳಿಸಿ 191 ರನ್ ಗಳಿಸಿದರು.

ಭಾರತದ ಪರವಾಗಿ ವೇಗಿ ಪ್ರಸಿದ್ಧ ಕೃಷ್ಣ ಹಾಗೂ ರವಿ ಬಿಷ್ಣೋಯಿ ತಲಾ 3 ವಿಕೆಟ್ ಪಡೆದರೆ ಅಕ್ಷರ್ ಪಟೇಲ್, ಮುಖೇಶ್ ಕುಮಾರ್ ಹಾಗೂ ಅಶ೯ದೀಪ್ ಸಿಂಗ್ ತಲಾ ಒಂದು ವಿಕೆಟ್ ಪಡೆದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 hour ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

2 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

9 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

9 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

15 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago