ಆಸೀಸ್ ಬೌಲಿಂಗ್ ಪಡೆಗೆ ಬೆವರಿಳಿಸಿದ ಭಾರತ, 44 ರನ್ ಗಳ ಜಯ !

ಆಸ್ಟ್ರೇಲಿಯಾದ ವಿರುದ್ಧ ಆರಂಭವಾಗಿರುವ ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿಯ ಎರಡನೇ ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ ನೇತೃತ್ವದ ಭಾರತದ ತಂಡದ ಬ್ಯಾಟಿಂಗ್ ಬಲದಿಂದ ಆಸ್ಟ್ರೇಲಿಯಾದ ಬೌಲಿಂಗ್ ಪಡೆಗೆ ಬೆವರಿಳಿಸಿ ಬೃಹತ್ ಮೊತ್ತ ಕಲೆಹಾಕಿದರು.

ಟಾಸ್ ಸೋತರೂ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (53) ಹಾಗೂ ಉಪನಾಯಕ ಋತುರಾಜ್ ಗಾಯಕ್ವಾಡ್ (58) ಉತ್ತಮ ಆರಂಭವನ್ನು ನೀಡಿದರು.

ನಂತರ ಬಂದ ಇಶಾನ್ ಕಿಶನ್ ಇನ್ನಿಂಗ್ಸ್ ಗೆ ವೇಗ ತುಂಬಿದರು, ಕೇವಲ 32 ಬಾಲ್ ಗೆ ನಾಲ್ಕು ಸಿಕ್ಸರ್ ಹಾಗೂ ಮೂರು ಬೌಂಡರಿ ಸಹಿತ (52) ರನ್ ಗಳಿಸಿದರು.

ನಾಯಕ ಸೂರ್ಯ ಕುಮಾರ್ ಯಾದವ್ (19) ಹಾಗೂ ಕೊನೆಗೆ ಬಂದ ಮಧ್ಯಮ ಕ್ರಮಾಂಕದ ಆಟಗಾರ ರಿಂಕು ಸಿಂಗ್ ಕೇವಲ 9 ಎಸೆತಗಳಲ್ಲಿ 31ರನ್ ಸಿಡಿಸಿ ತಂಡದ ಮೊತ್ತವನ್ನು 235 ರನ್ ಏರಿಸಿದರು.

ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಅನುಭವಿಸಿತು, ಭಾರತದ ಕರಾರುವಾಕ್ ದಾಳಿಗೆ ಬೆದರಿದ ಆಸೀಸ್ 191 ರನ್ ಗೆ ಆಲೌಟ್ ಆಯಿತು.

ಸ್ಟೀವನ್ ಸ್ಮಿತ್ (19), ಮ್ಯಾಥ್ಯೂ ಶಾಟ್೯ (19), ಜೋಶ್ ಇಂಗ್ಲಿಷ್ (2), ಮ್ಯಾಕ್ಸ್ ವೆಲ್ (12) ನಿರಾಸೆ ಮೂಡಿಸಿದರು, ಆದರೆ ಅಲ್ ರೌಂಡರ್ ಮಾಕ್೯ ಸ್ಟೋನಿಸ್ (45), ಟೀಮ್ ಡೇವಿಡ್ (37) ಹಾಗೂ ಮ್ಯಾಥ್ಯೂ ವೆಡ್ (42) ರನ್ ಗಳಿಸಿ 191 ರನ್ ಗಳಿಸಿದರು.

ಭಾರತದ ಪರವಾಗಿ ವೇಗಿ ಪ್ರಸಿದ್ಧ ಕೃಷ್ಣ ಹಾಗೂ ರವಿ ಬಿಷ್ಣೋಯಿ ತಲಾ 3 ವಿಕೆಟ್ ಪಡೆದರೆ ಅಕ್ಷರ್ ಪಟೇಲ್, ಮುಖೇಶ್ ಕುಮಾರ್ ಹಾಗೂ ಅಶ೯ದೀಪ್ ಸಿಂಗ್ ತಲಾ ಒಂದು ವಿಕೆಟ್ ಪಡೆದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

24 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago