ಆಸೀಸ್ ಬೌಲಿಂಗ್ ಪಡೆಗೆ ಬೆವರಿಳಿಸಿದ ಭಾರತ, 44 ರನ್ ಗಳ ಜಯ !

ಆಸ್ಟ್ರೇಲಿಯಾದ ವಿರುದ್ಧ ಆರಂಭವಾಗಿರುವ ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿಯ ಎರಡನೇ ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ ನೇತೃತ್ವದ ಭಾರತದ ತಂಡದ ಬ್ಯಾಟಿಂಗ್ ಬಲದಿಂದ ಆಸ್ಟ್ರೇಲಿಯಾದ ಬೌಲಿಂಗ್ ಪಡೆಗೆ ಬೆವರಿಳಿಸಿ ಬೃಹತ್ ಮೊತ್ತ ಕಲೆಹಾಕಿದರು.

ಟಾಸ್ ಸೋತರೂ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (53) ಹಾಗೂ ಉಪನಾಯಕ ಋತುರಾಜ್ ಗಾಯಕ್ವಾಡ್ (58) ಉತ್ತಮ ಆರಂಭವನ್ನು ನೀಡಿದರು.

ನಂತರ ಬಂದ ಇಶಾನ್ ಕಿಶನ್ ಇನ್ನಿಂಗ್ಸ್ ಗೆ ವೇಗ ತುಂಬಿದರು, ಕೇವಲ 32 ಬಾಲ್ ಗೆ ನಾಲ್ಕು ಸಿಕ್ಸರ್ ಹಾಗೂ ಮೂರು ಬೌಂಡರಿ ಸಹಿತ (52) ರನ್ ಗಳಿಸಿದರು.

ನಾಯಕ ಸೂರ್ಯ ಕುಮಾರ್ ಯಾದವ್ (19) ಹಾಗೂ ಕೊನೆಗೆ ಬಂದ ಮಧ್ಯಮ ಕ್ರಮಾಂಕದ ಆಟಗಾರ ರಿಂಕು ಸಿಂಗ್ ಕೇವಲ 9 ಎಸೆತಗಳಲ್ಲಿ 31ರನ್ ಸಿಡಿಸಿ ತಂಡದ ಮೊತ್ತವನ್ನು 235 ರನ್ ಏರಿಸಿದರು.

ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಅನುಭವಿಸಿತು, ಭಾರತದ ಕರಾರುವಾಕ್ ದಾಳಿಗೆ ಬೆದರಿದ ಆಸೀಸ್ 191 ರನ್ ಗೆ ಆಲೌಟ್ ಆಯಿತು.

ಸ್ಟೀವನ್ ಸ್ಮಿತ್ (19), ಮ್ಯಾಥ್ಯೂ ಶಾಟ್೯ (19), ಜೋಶ್ ಇಂಗ್ಲಿಷ್ (2), ಮ್ಯಾಕ್ಸ್ ವೆಲ್ (12) ನಿರಾಸೆ ಮೂಡಿಸಿದರು, ಆದರೆ ಅಲ್ ರೌಂಡರ್ ಮಾಕ್೯ ಸ್ಟೋನಿಸ್ (45), ಟೀಮ್ ಡೇವಿಡ್ (37) ಹಾಗೂ ಮ್ಯಾಥ್ಯೂ ವೆಡ್ (42) ರನ್ ಗಳಿಸಿ 191 ರನ್ ಗಳಿಸಿದರು.

ಭಾರತದ ಪರವಾಗಿ ವೇಗಿ ಪ್ರಸಿದ್ಧ ಕೃಷ್ಣ ಹಾಗೂ ರವಿ ಬಿಷ್ಣೋಯಿ ತಲಾ 3 ವಿಕೆಟ್ ಪಡೆದರೆ ಅಕ್ಷರ್ ಪಟೇಲ್, ಮುಖೇಶ್ ಕುಮಾರ್ ಹಾಗೂ ಅಶ೯ದೀಪ್ ಸಿಂಗ್ ತಲಾ ಒಂದು ವಿಕೆಟ್ ಪಡೆದರು.

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

28 minutes ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

5 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

6 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

7 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

8 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

9 hours ago