ಆಸೀಸ್ ಬೌಲಿಂಗ್ ಪಡೆಗೆ ಬೆವರಿಳಿಸಿದ ಭಾರತ, 44 ರನ್ ಗಳ ಜಯ !

ಆಸ್ಟ್ರೇಲಿಯಾದ ವಿರುದ್ಧ ಆರಂಭವಾಗಿರುವ ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿಯ ಎರಡನೇ ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ ನೇತೃತ್ವದ ಭಾರತದ ತಂಡದ ಬ್ಯಾಟಿಂಗ್ ಬಲದಿಂದ ಆಸ್ಟ್ರೇಲಿಯಾದ ಬೌಲಿಂಗ್ ಪಡೆಗೆ ಬೆವರಿಳಿಸಿ ಬೃಹತ್ ಮೊತ್ತ ಕಲೆಹಾಕಿದರು.

ಟಾಸ್ ಸೋತರೂ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (53) ಹಾಗೂ ಉಪನಾಯಕ ಋತುರಾಜ್ ಗಾಯಕ್ವಾಡ್ (58) ಉತ್ತಮ ಆರಂಭವನ್ನು ನೀಡಿದರು.

ನಂತರ ಬಂದ ಇಶಾನ್ ಕಿಶನ್ ಇನ್ನಿಂಗ್ಸ್ ಗೆ ವೇಗ ತುಂಬಿದರು, ಕೇವಲ 32 ಬಾಲ್ ಗೆ ನಾಲ್ಕು ಸಿಕ್ಸರ್ ಹಾಗೂ ಮೂರು ಬೌಂಡರಿ ಸಹಿತ (52) ರನ್ ಗಳಿಸಿದರು.

ನಾಯಕ ಸೂರ್ಯ ಕುಮಾರ್ ಯಾದವ್ (19) ಹಾಗೂ ಕೊನೆಗೆ ಬಂದ ಮಧ್ಯಮ ಕ್ರಮಾಂಕದ ಆಟಗಾರ ರಿಂಕು ಸಿಂಗ್ ಕೇವಲ 9 ಎಸೆತಗಳಲ್ಲಿ 31ರನ್ ಸಿಡಿಸಿ ತಂಡದ ಮೊತ್ತವನ್ನು 235 ರನ್ ಏರಿಸಿದರು.

ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಅನುಭವಿಸಿತು, ಭಾರತದ ಕರಾರುವಾಕ್ ದಾಳಿಗೆ ಬೆದರಿದ ಆಸೀಸ್ 191 ರನ್ ಗೆ ಆಲೌಟ್ ಆಯಿತು.

ಸ್ಟೀವನ್ ಸ್ಮಿತ್ (19), ಮ್ಯಾಥ್ಯೂ ಶಾಟ್೯ (19), ಜೋಶ್ ಇಂಗ್ಲಿಷ್ (2), ಮ್ಯಾಕ್ಸ್ ವೆಲ್ (12) ನಿರಾಸೆ ಮೂಡಿಸಿದರು, ಆದರೆ ಅಲ್ ರೌಂಡರ್ ಮಾಕ್೯ ಸ್ಟೋನಿಸ್ (45), ಟೀಮ್ ಡೇವಿಡ್ (37) ಹಾಗೂ ಮ್ಯಾಥ್ಯೂ ವೆಡ್ (42) ರನ್ ಗಳಿಸಿ 191 ರನ್ ಗಳಿಸಿದರು.

ಭಾರತದ ಪರವಾಗಿ ವೇಗಿ ಪ್ರಸಿದ್ಧ ಕೃಷ್ಣ ಹಾಗೂ ರವಿ ಬಿಷ್ಣೋಯಿ ತಲಾ 3 ವಿಕೆಟ್ ಪಡೆದರೆ ಅಕ್ಷರ್ ಪಟೇಲ್, ಮುಖೇಶ್ ಕುಮಾರ್ ಹಾಗೂ ಅಶ೯ದೀಪ್ ಸಿಂಗ್ ತಲಾ ಒಂದು ವಿಕೆಟ್ ಪಡೆದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

2 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

3 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

3 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

4 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

7 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

7 hours ago