ಹನ್ನೆರೆಡು ವರ್ಷಗಳ ನಂತರ ಮತ್ತೊಮ್ಮೆ ಏಕದಿನ ವಿಶ್ವಕಪ್ ಗೆಲ್ಲಲು, ಹತ್ತು ವರ್ಷಗಳ ನಂತರ ಐಸಿಸಿ ಟ್ರೋಫಿ ಗೆಲ್ಲುವ ಅದ್ಭುತ ಅವಕಾಶ ಟೀಂ ಇಂಡಿಯಾದ ಮುಂದಿದ್ದು ಆಸೀಸ್ ವಿರುದ್ಧ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಅವಕಾಶ ಒದಗಿ ಬಂದಿದೆ.
2003 ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಅಂದಿನ ಭಾರತ ತಂಡದ ನಾಯಕರಾದ ಸೌರವ್ ಗಂಗೂಲಿ ತಂಡದ ವಿರುದ್ಧ ನಾಯಕ ರಿಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು ಆಗ ಭಾರತ ತಂಡ ರನ್ನರ್ ಆಫ್ ಗೆ ತೃಪ್ತಿಪಟ್ಟುಕೊಂಡಿತ್ತು.
ಭಾರತದ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಅದ್ಭುತ ಆರಂಭವನ್ನು ನೀಡುತ್ತಿದ್ದು ನಂತರ ಬರುವ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಹಾಗೂ ಕನ್ನಡಿಗ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ ಅದ್ಭುತ ಫಾರ್ಮ್ ನಲ್ಲಿದ್ದಾರೆ.
ಆಸ್ಟ್ರೇಲಿಯಾದ ಪರವಾಗಿ ಡೇವಿಡ್ ವಾರ್ನರ್, ಮಿಚೆಲ್ ಮಾಷ್೯, ಗ್ಲೇನ್ ಮ್ಯಾಕ್ಸ್ವಲ್, ಸ್ಮಿತ್ ಹಾಗೂ ಲಬುಶನಗೆ ಉತ್ತಮವಾಗಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದು ವೇಗಿಗಳಾದ ಹೆಜಲ್ವುಡ್, ಸ್ಟಾಕ್೯ ಹಾಗೂ ಪ್ಯಾಟ್ ಕಮ್ಮಿನ್ಸ್ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ.
ಮಧ್ಯಾಹ್ನ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ಭಾರತೀಯ ವಾಯುಪಡೆ ಯುದ್ಧ ವಿಮಾನಗಳು ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಲಿದೆ, ವಿಶ್ವಕಪ್ ಚಾಂಪಿಯನ್ ಆದ ಕಪಿಲ್ ದೇವ್, ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಎಲ್ಲಾ ನಾಯಕರು ಹಾಜರಿ ಇರಲಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…