ಆಸೀಸ್ ಮಣಿಸಿ ವಿಶ್ವಕಪ್ ಜಯಿಸುವ ತವಕದಲ್ಲಿ ಟೀಂ ಇಂಡಿಯಾ

ಹನ್ನೆರೆಡು ವರ್ಷಗಳ ನಂತರ ಮತ್ತೊಮ್ಮೆ ಏಕದಿನ ವಿಶ್ವಕಪ್ ಗೆಲ್ಲಲು, ಹತ್ತು ವರ್ಷಗಳ ನಂತರ ಐಸಿಸಿ ಟ್ರೋಫಿ ಗೆಲ್ಲುವ ಅದ್ಭುತ ಅವಕಾಶ ಟೀಂ ಇಂಡಿಯಾದ ಮುಂದಿದ್ದು ಆಸೀಸ್ ವಿರುದ್ಧ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಅವಕಾಶ ಒದಗಿ ಬಂದಿದೆ.

ಕೋಟ್ಯಂತರ ಅಭಿಮಾನಿಗಳ ಕನಸನ್ನು ನನಸು ಮಾಡಲು ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡಕ್ಕೆ ಇನ್ನೊಂದು ಹೆಜ್ಜೆ ಮಾತ್ರ ಬಾಕಿ ಇದೆ, ನ್ಯೂಜಿಲ್ಯಾಂಡ್ ವಿರುದ್ಧ 2019 ರ ಸೆಮಿಫೈನಲ್ ಪಂದ್ಯದಲ್ಲಿ ನಿರಾಸೆ ಅನುಭವಿಸಿದ್ದನ್ನು ಈ ಬಾರಿಯ ವಿಶ್ವಕಪ್ ನ ಸೆಮಿಫೈನಲ್ ನಲ್ಲಿ ಕೀವೀಸ್ ವಿರುದ್ಧ ಗೆದ್ದು ಸೇಡು ತೀರಿಸಿಕೊಂಡು ಫೈನಲ್ ತಲುಪಿದೆ.

2023 ರ ವಿಶ್ವಕಪ್ ನಲ್ಲಿ ಒಂದೂ ಪಂದ್ಯವನ್ನು ಸೋಲದೆ ಫೈನಲ್ ತಲುಪಿರುವ ಭಾರತ ತಂಡ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಗೆಲುವು ಸಾಧಿಸಿ 2003ರ ಏಕದಿನ ಫೈನಲ್ ಪಂದ್ಯದಲ್ಲಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ .

2003 ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಅಂದಿನ ಭಾರತ ತಂಡದ ನಾಯಕರಾದ ಸೌರವ್ ಗಂಗೂಲಿ ತಂಡದ ವಿರುದ್ಧ ನಾಯಕ ರಿಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು ಆಗ ಭಾರತ ತಂಡ ರನ್ನರ್ ಆಫ್ ಗೆ ತೃಪ್ತಿಪಟ್ಟುಕೊಂಡಿತ್ತು.

ಇದೀಗ ಅಂತಹುದೇ ಸಮಯ ಒದಗಿಬಂದಿದ್ದು ನಾಯಕ ರೋಹಿತ್ ಶರ್ಮಾ ಆಸೀಸ್ ವಿರುದ್ಧ ಗೆಲುವು ಸಾಧಿಸುವ ತವಕದಲ್ಲಿದ್ದಾರೆ, ಮೊದಲೆರಡು ಪಂದ್ಯದಲ್ಲಿ ಸೋತರು ಸಹ ಉಳಿದ ಪಂದ್ಯಗಳಲ್ಲಿ ಗೆದ್ದು ಫೈನಲ್ ಪ್ರವೇಶಿಸಿರುವ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಭಾರತದ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿದೆ.

ಭಾರತದ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಅದ್ಭುತ ಆರಂಭವನ್ನು ನೀಡುತ್ತಿದ್ದು ನಂತರ ಬರುವ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಹಾಗೂ ಕನ್ನಡಿಗ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ ಅದ್ಭುತ ಫಾರ್ಮ್ ನಲ್ಲಿದ್ದಾರೆ.

ಭಾರತದ ಬೌಲಿಂಗ್ ವಿಭಾಗ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು ಮೊಹಮ್ಮದ್ ಶಮಿ ಅತ್ಯಧಿಕ ವಿಕೆಟ್ ಪಡೆದು ಮಿಂಚಿದರೆ ಸಿರಾಜ್, ಬುಮ್ರಾ, ರವೀಂದ್ರ ಜಡೇಜಾ ಹಾಗೂ ಕುಲದೀಪ್ ಯಾದವ್ ಅದ್ಭುತ ಪ್ರದರ್ಶನ ನೀಡುತ್ತಿದ್ದು ಆಸೀಸ್ ಬ್ಯಾಟಿಂಗ್ ಪಡೆಯನ್ನು ಕಾಡಲಿದ್ದಾರೆ.

ಆಸ್ಟ್ರೇಲಿಯಾದ ಪರವಾಗಿ ಡೇವಿಡ್ ವಾರ್ನರ್, ಮಿಚೆಲ್ ಮಾಷ್೯, ಗ್ಲೇನ್ ಮ್ಯಾಕ್ಸ್ವಲ್, ಸ್ಮಿತ್ ಹಾಗೂ ಲಬುಶನಗೆ ಉತ್ತಮವಾಗಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದು ವೇಗಿಗಳಾದ ಹೆಜಲ್ವುಡ್, ಸ್ಟಾಕ್೯ ಹಾಗೂ ಪ್ಯಾಟ್ ಕಮ್ಮಿನ್ಸ್ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ.

ನವೆಂಬರ್ 19 ರಂದು ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಉಪ ಪ್ರಧಾನಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ಭಾರತೀಯ ವಾಯುಪಡೆ ಯುದ್ಧ ವಿಮಾನಗಳು ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಲಿದೆ, ವಿಶ್ವಕಪ್ ಚಾಂಪಿಯನ್ ಆದ ಕಪಿಲ್ ದೇವ್, ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಎಲ್ಲಾ ನಾಯಕರು ಹಾಜರಿ ಇರಲಿದ್ದಾರೆ.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

8 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

9 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

14 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

16 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

18 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

20 hours ago