ಆಸೀಸ್ ಮಣಿಸಿ ವಿಶ್ವಕಪ್ ಜಯಿಸುವ ತವಕದಲ್ಲಿ ಟೀಂ ಇಂಡಿಯಾ

ಹನ್ನೆರೆಡು ವರ್ಷಗಳ ನಂತರ ಮತ್ತೊಮ್ಮೆ ಏಕದಿನ ವಿಶ್ವಕಪ್ ಗೆಲ್ಲಲು, ಹತ್ತು ವರ್ಷಗಳ ನಂತರ ಐಸಿಸಿ ಟ್ರೋಫಿ ಗೆಲ್ಲುವ ಅದ್ಭುತ ಅವಕಾಶ ಟೀಂ ಇಂಡಿಯಾದ ಮುಂದಿದ್ದು ಆಸೀಸ್ ವಿರುದ್ಧ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಅವಕಾಶ ಒದಗಿ ಬಂದಿದೆ.

ಕೋಟ್ಯಂತರ ಅಭಿಮಾನಿಗಳ ಕನಸನ್ನು ನನಸು ಮಾಡಲು ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡಕ್ಕೆ ಇನ್ನೊಂದು ಹೆಜ್ಜೆ ಮಾತ್ರ ಬಾಕಿ ಇದೆ, ನ್ಯೂಜಿಲ್ಯಾಂಡ್ ವಿರುದ್ಧ 2019 ರ ಸೆಮಿಫೈನಲ್ ಪಂದ್ಯದಲ್ಲಿ ನಿರಾಸೆ ಅನುಭವಿಸಿದ್ದನ್ನು ಈ ಬಾರಿಯ ವಿಶ್ವಕಪ್ ನ ಸೆಮಿಫೈನಲ್ ನಲ್ಲಿ ಕೀವೀಸ್ ವಿರುದ್ಧ ಗೆದ್ದು ಸೇಡು ತೀರಿಸಿಕೊಂಡು ಫೈನಲ್ ತಲುಪಿದೆ.

2023 ರ ವಿಶ್ವಕಪ್ ನಲ್ಲಿ ಒಂದೂ ಪಂದ್ಯವನ್ನು ಸೋಲದೆ ಫೈನಲ್ ತಲುಪಿರುವ ಭಾರತ ತಂಡ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಗೆಲುವು ಸಾಧಿಸಿ 2003ರ ಏಕದಿನ ಫೈನಲ್ ಪಂದ್ಯದಲ್ಲಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ .

2003 ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಅಂದಿನ ಭಾರತ ತಂಡದ ನಾಯಕರಾದ ಸೌರವ್ ಗಂಗೂಲಿ ತಂಡದ ವಿರುದ್ಧ ನಾಯಕ ರಿಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು ಆಗ ಭಾರತ ತಂಡ ರನ್ನರ್ ಆಫ್ ಗೆ ತೃಪ್ತಿಪಟ್ಟುಕೊಂಡಿತ್ತು.

ಇದೀಗ ಅಂತಹುದೇ ಸಮಯ ಒದಗಿಬಂದಿದ್ದು ನಾಯಕ ರೋಹಿತ್ ಶರ್ಮಾ ಆಸೀಸ್ ವಿರುದ್ಧ ಗೆಲುವು ಸಾಧಿಸುವ ತವಕದಲ್ಲಿದ್ದಾರೆ, ಮೊದಲೆರಡು ಪಂದ್ಯದಲ್ಲಿ ಸೋತರು ಸಹ ಉಳಿದ ಪಂದ್ಯಗಳಲ್ಲಿ ಗೆದ್ದು ಫೈನಲ್ ಪ್ರವೇಶಿಸಿರುವ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಭಾರತದ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿದೆ.

ಭಾರತದ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಅದ್ಭುತ ಆರಂಭವನ್ನು ನೀಡುತ್ತಿದ್ದು ನಂತರ ಬರುವ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಹಾಗೂ ಕನ್ನಡಿಗ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ ಅದ್ಭುತ ಫಾರ್ಮ್ ನಲ್ಲಿದ್ದಾರೆ.

ಭಾರತದ ಬೌಲಿಂಗ್ ವಿಭಾಗ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು ಮೊಹಮ್ಮದ್ ಶಮಿ ಅತ್ಯಧಿಕ ವಿಕೆಟ್ ಪಡೆದು ಮಿಂಚಿದರೆ ಸಿರಾಜ್, ಬುಮ್ರಾ, ರವೀಂದ್ರ ಜಡೇಜಾ ಹಾಗೂ ಕುಲದೀಪ್ ಯಾದವ್ ಅದ್ಭುತ ಪ್ರದರ್ಶನ ನೀಡುತ್ತಿದ್ದು ಆಸೀಸ್ ಬ್ಯಾಟಿಂಗ್ ಪಡೆಯನ್ನು ಕಾಡಲಿದ್ದಾರೆ.

ಆಸ್ಟ್ರೇಲಿಯಾದ ಪರವಾಗಿ ಡೇವಿಡ್ ವಾರ್ನರ್, ಮಿಚೆಲ್ ಮಾಷ್೯, ಗ್ಲೇನ್ ಮ್ಯಾಕ್ಸ್ವಲ್, ಸ್ಮಿತ್ ಹಾಗೂ ಲಬುಶನಗೆ ಉತ್ತಮವಾಗಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದು ವೇಗಿಗಳಾದ ಹೆಜಲ್ವುಡ್, ಸ್ಟಾಕ್೯ ಹಾಗೂ ಪ್ಯಾಟ್ ಕಮ್ಮಿನ್ಸ್ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ.

ನವೆಂಬರ್ 19 ರಂದು ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಉಪ ಪ್ರಧಾನಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ಭಾರತೀಯ ವಾಯುಪಡೆ ಯುದ್ಧ ವಿಮಾನಗಳು ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಲಿದೆ, ವಿಶ್ವಕಪ್ ಚಾಂಪಿಯನ್ ಆದ ಕಪಿಲ್ ದೇವ್, ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಎಲ್ಲಾ ನಾಯಕರು ಹಾಜರಿ ಇರಲಿದ್ದಾರೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

7 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

7 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

16 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago