ಆಸೆ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತ ಚಲಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಏಪ್ರಿಲ್ 26 ರಂದು ನಡೆಯುವ ಮತದಾನದ ದಿನದಂದು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಹೇಳಿದರು.

ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಅಂಗವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಜಿಲ್ಲಾಡಳಿತ ಕಛೇರಿ ಮೇಲೆ ಮತದಾನ ಜಾಗೃತಿಗಾಗಿ ಹಾಟ್ ಏರ್ ಬಲೂನ್ ಅನಾವರಣ ಹಾಗೂ ಮತದಾನ ಜಾಗೃತಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಹಲವು ಮತದಾನ ಜಾಗೃತಿ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿದೆ. ಲೋಕಸಭಾ ಚುನಾವಣೆಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಸಧೃಡ ದೇಶ ನಿರ್ಮಾಣ ಮಾಡಲು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ತಪ್ಪದೇ ಪ್ರತಿಯೊಬ್ಬರು ಮತ ಚಲಾಯಿಸಿ ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಮಾತನಾಡಿ ಈ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಬೇಕೆಂಬ ಆಶಯದೊಂದಿಗೆ ಜಿಲ್ಲೆಯಾದ್ಯಂತ ಸ್ವೀಪ್ ಸಮಿತಿ ವತಿಯಿಂದ ವಿಭಿನ್ನವಾಗಿ ಸಾಕಷ್ಟು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ತಪ್ಪದೇ ನಿರ್ಭೀತಿಯಿಂದ ಮತ ಚಲಾಯಿಸಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಿಲ್ಲಾ ಐಕಾನ್ ಆಗಿ ಕಾಮಿಡಿ ಕಿಲಾಡಿ ನಟ ರಘು, ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಿಂದ ಅದ್ಯ ಮತ್ತು ವಿಕಲಚೇತನರ ಕ್ಷೇತ್ರದಿಂದ ಪ್ಯಾರ ಕ್ರೀಡಾ ಪಟು ಪ್ರಕಾಶ್ ಅವರು ಭಾಗವಹಿಸಿ ಎಲ್ಲರು ತಪ್ಪದೇ ಮತದಾನದ ಹಕ್ಕು ಚಲಾಯಿಸಿ ಎಂದು ಮತದಾನ ಜಾಗೃತಿ ಮೂಡಿಸಿದರು.

ಮತದಾನ ಜಾಗೃತಿಗಾಗಿ ಜಿಲ್ಲಾಧಿಕಾರಿ ಹಾಟ್ ಏರ್ ಬಲೂನ್ ಹಾರಿಸುವ ಮೂಲಕ ಚಾಲನೆ ನೀಡಿದರು. ಮತದಾನ ಜಾಗೃತಿ ಸಹಿ ಸಂಗ್ರಹ ಅಭಿಯಾನದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸುವ ಮೂಲಕ ಎಲ್ಲರೂ ಸಹಿ ಹಾಕಿ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ ಸೇರಿದಂತೆ ಜಿಲ್ಲಾಡಳಿತದ ಸಿಬ್ಬಂದಿ‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago