Categories: ಟೆನಿಸ್

ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಕನ್ನಡಿಗ ರೋಹನ್​ ಬೋಪಣ್ಣ

ಭಾರತದ ಹಿರಿಯ ಟೆನಿಸ್ ಆಟಗಾರ ಕನ್ನಡಿಗ ರೋಹನ್​ ಬೋಪಣ್ಣ ಆಸ್ಟ್ರೇಲಿಯಾ ಓಪನ್​ ಟೆನಿಸ್​ ಟೂರ್ನಿಯಲ್ಲಿ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಮಹತ್ತರ ಸಾಧನೆ ಮಾಡಿದ್ದಾರೆ.

ಇಂದು ನಡೆದ ಪುರುಷರ ಡಬಲ್ಸ್​ ಫೈನಲ್ ಪಂದ್ಯದಲ್ಲಿ ರೋಹನ್ ಬೋಪಣ್ಣ ಮತ್ತು ಅವರ ಜತೆಗಾರ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್‌ ಸೇರಿ ಇಟಲಿಯ ಸಿಮೋನ್​ ಬೊಲೆಲ್ಲಿ-ಆ್ಯಂಡ್ರಿಯಾ ವಸಸ್ಸೊರಿ ವಿರುದ್ಧ 7-6(7-0), 7-5 ನೇರ ಸೆಟ್​ಗಳಿಂದ ಗೆಲುವು ಸಾಧಿಸುವ ಮೂಲಕ ಐತಿಹಾಸಿಕ‌ ಸಾಧನೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಶ್ಲಾಘನೆ

ವಿಶ್ವ ಟೆನ್ನಿಸ್‌ನ ನಂ.1 ಡಬಲ್ಸ್‌ ಆಟಗಾರ, ಕನ್ನಡಿಗ ರೋಹನ್‌ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್‌ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಮೂಲಕ ನಾಡಿಗೆ ಹೆಮ್ಮೆ ಮೂಡಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘನೆ‌ ಮಾಡಿದ್ದಾರೆ.

ಈ ಪ್ರಶಸ್ತಿ ಗೆಲುವಿನೊಂದಿಗೆ ಅವರು ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದಿರುವುದು ವಿಶೇಷ ಎಂದಿದ್ದಾರೆ.

ವಯಸ್ಸು ಬರೀ ಅಂಕಿಗಳಿಗಷ್ಟೇ ಸೀಮಿತ, ಸಾಧನೆಯ ಹಂಬಲ ದೊಡ್ಡದೆಂಬ ಮಾತು ಇವರ ಆಟ ನೋಡಿದವರಿಗೆ ಅನ್ನಿಸದೆ ಇರಲಾರದು. ಇಂತಹ ಇನ್ನಷ್ಟು ದಾಖಲೆಗಳು ರೋಹನ್ ಬೋಪಣ್ಣನವರಿಂದ ಮೂಡಿಬರಲೆಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

5 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

6 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

6 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

7 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

19 hours ago