ಆಸ್ಟ್ರೇಲಿಯಾಗೆ ಆಘಾತ, ಭಾರತ ಸರಣಿ ವಶ !

ರಾಯಪುರದಲ್ಲಿ ನಡೆದ ಟಿ -ಟ್ವೆಂಟಿ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ನ ಸಂಘಟಿತ ಪ್ರಯತ್ನದಿಂದ ಐದು ಪಂದ್ಯಗಳ ಸರಣಿಯನ್ನು 3-1 ಅಂತರದಿಂದ ಜಯಿಸಿದ್ದು ಇನ್ನೂ ಒಂದು ಪಂದ್ಯ ಇರುವಾಗಲೇ ಸೂರ್ಯ ಕುಮಾರ್ ನೇತೃತ್ವದ ಭಾರತ ತಂಡ ಸರಣಿ ಗೆದ್ದು ಬೀಗಿದೆ.

ಟಾಸ್ ಸೋತರು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (37)ಹಾಗೂ ಋತುರಾಜ್ ಗಾಯಕ್ವಾಡ್(32) ಉತ್ತಮ ಆರಂಭವನ್ನು ನೀಡಿದರು , ಇಬ್ಬರೂ ವೇಗವಾಗಿ ರನ್ ಗಳಿಸಿ ಅಧ೯ಶತಕದ ಜೊತೆಯಾಟ ನಡೆಸಿದರು.

ನಂತರ ಬಂದ ಅನುಭವಿ ಆಟಗಾರ ಶ್ರೇಯಸ್ ಅಯ್ಯರ್ (8) ಹಾಗೂ ನಾಯಕ ಸೂರ್ಯ ಕುಮಾರ್ ಯಾದವ್ (1) ರನ್ ಗಳಿಸಿ ಔಟಾದರು, ನಂತರ ಬಂದ ಸ್ಪೋಟಕ ಬ್ಯಾಟ್ಸ್ಮನ್ ರಿಂಕು ಸಿಂಗ್ (46) ಹಾಗೂ ಜಿತೇಶ್ ಶರ್ಮಾ (35) ರನ್ ಗಳಿಸಿ ತಂಡವನ್ನು 175 ರನ್ ಗಡಿ ದಾಟಿಸಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಎದುರಿಸಿತು, ಫಿಲಿಪ್ಸ್ (8)ರನ್ ಗಳಿಸಿ ರವಿ ಬಿಷ್ಣೋಯಿ ಅವರಿಗೆ ವಿಕೆಟ್ ಒಪ್ಪಿಸಿದರು, ಟ್ರಾವಿಸ್ ಹೆಡ್ (31), ಹಾಗೂ ಬೆನ್ (19) , ಆರೋನ್ (8) ರನ್ ಗಳಿಸಿದರೆ ಮ್ಯಾಥ್ಯೂ ವೆಡ್ (36)ರನ್ ಗಳಿಸಿದರು ಯಾವುದೇ ಪ್ರಯೋಜನವಾಗದೆ 20 ರನ್ ಸೋಲನ್ನು ಅನುಭವಿಸಿದರು.

ಭಾರತದ ತಂಡದ ಪರವಾಗಿ ಅಕ್ಷರ್ ಪಟೇಲ್ 3 ವಿಕೆಟ್, ದೀಪಕ್ ಚಹರ್ 2 ವಿಕೆಟ್ ಪಡೆದರೆ ರವಿ ಬಿಷ್ಣೋಯಿ ಹಾಗೂ ಆವೇಶ್ ಖಾನ್ ತಲಾ ಎರಡು ವಿಕೆಟ್ ಕಬಳಿಸಿದರು , ಬಿಗಿ ಬೌಲಿಂಗ್ ದಾಳಿ ನಡೆಸಿದ ಅಕ್ಷರ್ ಪಟೇಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

3 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

7 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

15 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

17 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

20 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

21 hours ago