ಆಸ್ಟ್ರೇಲಿಯಾಗೆ ಆಘಾತ, ಭಾರತ ಸರಣಿ ವಶ !

ರಾಯಪುರದಲ್ಲಿ ನಡೆದ ಟಿ -ಟ್ವೆಂಟಿ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ನ ಸಂಘಟಿತ ಪ್ರಯತ್ನದಿಂದ ಐದು ಪಂದ್ಯಗಳ ಸರಣಿಯನ್ನು 3-1 ಅಂತರದಿಂದ ಜಯಿಸಿದ್ದು ಇನ್ನೂ ಒಂದು ಪಂದ್ಯ ಇರುವಾಗಲೇ ಸೂರ್ಯ ಕುಮಾರ್ ನೇತೃತ್ವದ ಭಾರತ ತಂಡ ಸರಣಿ ಗೆದ್ದು ಬೀಗಿದೆ.

ಟಾಸ್ ಸೋತರು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (37)ಹಾಗೂ ಋತುರಾಜ್ ಗಾಯಕ್ವಾಡ್(32) ಉತ್ತಮ ಆರಂಭವನ್ನು ನೀಡಿದರು , ಇಬ್ಬರೂ ವೇಗವಾಗಿ ರನ್ ಗಳಿಸಿ ಅಧ೯ಶತಕದ ಜೊತೆಯಾಟ ನಡೆಸಿದರು.

ನಂತರ ಬಂದ ಅನುಭವಿ ಆಟಗಾರ ಶ್ರೇಯಸ್ ಅಯ್ಯರ್ (8) ಹಾಗೂ ನಾಯಕ ಸೂರ್ಯ ಕುಮಾರ್ ಯಾದವ್ (1) ರನ್ ಗಳಿಸಿ ಔಟಾದರು, ನಂತರ ಬಂದ ಸ್ಪೋಟಕ ಬ್ಯಾಟ್ಸ್ಮನ್ ರಿಂಕು ಸಿಂಗ್ (46) ಹಾಗೂ ಜಿತೇಶ್ ಶರ್ಮಾ (35) ರನ್ ಗಳಿಸಿ ತಂಡವನ್ನು 175 ರನ್ ಗಡಿ ದಾಟಿಸಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಎದುರಿಸಿತು, ಫಿಲಿಪ್ಸ್ (8)ರನ್ ಗಳಿಸಿ ರವಿ ಬಿಷ್ಣೋಯಿ ಅವರಿಗೆ ವಿಕೆಟ್ ಒಪ್ಪಿಸಿದರು, ಟ್ರಾವಿಸ್ ಹೆಡ್ (31), ಹಾಗೂ ಬೆನ್ (19) , ಆರೋನ್ (8) ರನ್ ಗಳಿಸಿದರೆ ಮ್ಯಾಥ್ಯೂ ವೆಡ್ (36)ರನ್ ಗಳಿಸಿದರು ಯಾವುದೇ ಪ್ರಯೋಜನವಾಗದೆ 20 ರನ್ ಸೋಲನ್ನು ಅನುಭವಿಸಿದರು.

ಭಾರತದ ತಂಡದ ಪರವಾಗಿ ಅಕ್ಷರ್ ಪಟೇಲ್ 3 ವಿಕೆಟ್, ದೀಪಕ್ ಚಹರ್ 2 ವಿಕೆಟ್ ಪಡೆದರೆ ರವಿ ಬಿಷ್ಣೋಯಿ ಹಾಗೂ ಆವೇಶ್ ಖಾನ್ ತಲಾ ಎರಡು ವಿಕೆಟ್ ಕಬಳಿಸಿದರು , ಬಿಗಿ ಬೌಲಿಂಗ್ ದಾಳಿ ನಡೆಸಿದ ಅಕ್ಷರ್ ಪಟೇಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

11 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

11 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

16 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

18 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

21 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

22 hours ago