ಆಸ್ಟ್ರೇಲಿಯಾಗೆ ಆಘಾತ, ಭಾರತ ಸರಣಿ ವಶ !

ರಾಯಪುರದಲ್ಲಿ ನಡೆದ ಟಿ -ಟ್ವೆಂಟಿ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ನ ಸಂಘಟಿತ ಪ್ರಯತ್ನದಿಂದ ಐದು ಪಂದ್ಯಗಳ ಸರಣಿಯನ್ನು 3-1 ಅಂತರದಿಂದ ಜಯಿಸಿದ್ದು ಇನ್ನೂ ಒಂದು ಪಂದ್ಯ ಇರುವಾಗಲೇ ಸೂರ್ಯ ಕುಮಾರ್ ನೇತೃತ್ವದ ಭಾರತ ತಂಡ ಸರಣಿ ಗೆದ್ದು ಬೀಗಿದೆ.

ಟಾಸ್ ಸೋತರು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (37)ಹಾಗೂ ಋತುರಾಜ್ ಗಾಯಕ್ವಾಡ್(32) ಉತ್ತಮ ಆರಂಭವನ್ನು ನೀಡಿದರು , ಇಬ್ಬರೂ ವೇಗವಾಗಿ ರನ್ ಗಳಿಸಿ ಅಧ೯ಶತಕದ ಜೊತೆಯಾಟ ನಡೆಸಿದರು.

ನಂತರ ಬಂದ ಅನುಭವಿ ಆಟಗಾರ ಶ್ರೇಯಸ್ ಅಯ್ಯರ್ (8) ಹಾಗೂ ನಾಯಕ ಸೂರ್ಯ ಕುಮಾರ್ ಯಾದವ್ (1) ರನ್ ಗಳಿಸಿ ಔಟಾದರು, ನಂತರ ಬಂದ ಸ್ಪೋಟಕ ಬ್ಯಾಟ್ಸ್ಮನ್ ರಿಂಕು ಸಿಂಗ್ (46) ಹಾಗೂ ಜಿತೇಶ್ ಶರ್ಮಾ (35) ರನ್ ಗಳಿಸಿ ತಂಡವನ್ನು 175 ರನ್ ಗಡಿ ದಾಟಿಸಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಎದುರಿಸಿತು, ಫಿಲಿಪ್ಸ್ (8)ರನ್ ಗಳಿಸಿ ರವಿ ಬಿಷ್ಣೋಯಿ ಅವರಿಗೆ ವಿಕೆಟ್ ಒಪ್ಪಿಸಿದರು, ಟ್ರಾವಿಸ್ ಹೆಡ್ (31), ಹಾಗೂ ಬೆನ್ (19) , ಆರೋನ್ (8) ರನ್ ಗಳಿಸಿದರೆ ಮ್ಯಾಥ್ಯೂ ವೆಡ್ (36)ರನ್ ಗಳಿಸಿದರು ಯಾವುದೇ ಪ್ರಯೋಜನವಾಗದೆ 20 ರನ್ ಸೋಲನ್ನು ಅನುಭವಿಸಿದರು.

ಭಾರತದ ತಂಡದ ಪರವಾಗಿ ಅಕ್ಷರ್ ಪಟೇಲ್ 3 ವಿಕೆಟ್, ದೀಪಕ್ ಚಹರ್ 2 ವಿಕೆಟ್ ಪಡೆದರೆ ರವಿ ಬಿಷ್ಣೋಯಿ ಹಾಗೂ ಆವೇಶ್ ಖಾನ್ ತಲಾ ಎರಡು ವಿಕೆಟ್ ಕಬಳಿಸಿದರು , ಬಿಗಿ ಬೌಲಿಂಗ್ ದಾಳಿ ನಡೆಸಿದ ಅಕ್ಷರ್ ಪಟೇಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

5 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

13 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

14 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago