ಆಸ್ಟ್ರೇಲಿಯಾಗೆ ಆಘಾತ, ಭಾರತ ಸರಣಿ ವಶ !

ರಾಯಪುರದಲ್ಲಿ ನಡೆದ ಟಿ -ಟ್ವೆಂಟಿ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ನ ಸಂಘಟಿತ ಪ್ರಯತ್ನದಿಂದ ಐದು ಪಂದ್ಯಗಳ ಸರಣಿಯನ್ನು 3-1 ಅಂತರದಿಂದ ಜಯಿಸಿದ್ದು ಇನ್ನೂ ಒಂದು ಪಂದ್ಯ ಇರುವಾಗಲೇ ಸೂರ್ಯ ಕುಮಾರ್ ನೇತೃತ್ವದ ಭಾರತ ತಂಡ ಸರಣಿ ಗೆದ್ದು ಬೀಗಿದೆ.

ಟಾಸ್ ಸೋತರು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (37)ಹಾಗೂ ಋತುರಾಜ್ ಗಾಯಕ್ವಾಡ್(32) ಉತ್ತಮ ಆರಂಭವನ್ನು ನೀಡಿದರು , ಇಬ್ಬರೂ ವೇಗವಾಗಿ ರನ್ ಗಳಿಸಿ ಅಧ೯ಶತಕದ ಜೊತೆಯಾಟ ನಡೆಸಿದರು.

ನಂತರ ಬಂದ ಅನುಭವಿ ಆಟಗಾರ ಶ್ರೇಯಸ್ ಅಯ್ಯರ್ (8) ಹಾಗೂ ನಾಯಕ ಸೂರ್ಯ ಕುಮಾರ್ ಯಾದವ್ (1) ರನ್ ಗಳಿಸಿ ಔಟಾದರು, ನಂತರ ಬಂದ ಸ್ಪೋಟಕ ಬ್ಯಾಟ್ಸ್ಮನ್ ರಿಂಕು ಸಿಂಗ್ (46) ಹಾಗೂ ಜಿತೇಶ್ ಶರ್ಮಾ (35) ರನ್ ಗಳಿಸಿ ತಂಡವನ್ನು 175 ರನ್ ಗಡಿ ದಾಟಿಸಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಎದುರಿಸಿತು, ಫಿಲಿಪ್ಸ್ (8)ರನ್ ಗಳಿಸಿ ರವಿ ಬಿಷ್ಣೋಯಿ ಅವರಿಗೆ ವಿಕೆಟ್ ಒಪ್ಪಿಸಿದರು, ಟ್ರಾವಿಸ್ ಹೆಡ್ (31), ಹಾಗೂ ಬೆನ್ (19) , ಆರೋನ್ (8) ರನ್ ಗಳಿಸಿದರೆ ಮ್ಯಾಥ್ಯೂ ವೆಡ್ (36)ರನ್ ಗಳಿಸಿದರು ಯಾವುದೇ ಪ್ರಯೋಜನವಾಗದೆ 20 ರನ್ ಸೋಲನ್ನು ಅನುಭವಿಸಿದರು.

ಭಾರತದ ತಂಡದ ಪರವಾಗಿ ಅಕ್ಷರ್ ಪಟೇಲ್ 3 ವಿಕೆಟ್, ದೀಪಕ್ ಚಹರ್ 2 ವಿಕೆಟ್ ಪಡೆದರೆ ರವಿ ಬಿಷ್ಣೋಯಿ ಹಾಗೂ ಆವೇಶ್ ಖಾನ್ ತಲಾ ಎರಡು ವಿಕೆಟ್ ಕಬಳಿಸಿದರು , ಬಿಗಿ ಬೌಲಿಂಗ್ ದಾಳಿ ನಡೆಸಿದ ಅಕ್ಷರ್ ಪಟೇಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

1 hour ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

11 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

12 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

21 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 days ago