ಆಸ್ಟ್ರೇಲಿಯಾ ವಿರುದ್ದ ಭಾರತ ತಂಡ ಪ್ರಕಟ, ಕನ್ನಡಿಗನಿಗೆ ಒಲಿದ ಕ್ಯಾಪ್ಟನ್ ಪಟ್ಟ

ತವರಿನಲ್ಲಿ ನಡೆಯುವ ಏಕದಿನ ವಿಶ್ವಕಪ್ ಗೂ ಮುನ್ನ ಆಸ್ಟ್ರೇಲಿಯಾ ವಿರುದ್ದ ನಡೆಯುವ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು ಕನ್ನಡಿಗ ಕೆ.ಎಲ್. ರಾಹುಲ್ ಅವರಿಗೆ ನಾಯಕನ ಪಟ್ಟವನ್ನು ನೀಡಲಾಗಿದೆ.

ಇತ್ತೀಚೆಗಷ್ಟೇ ಗಾಯದಿಂದ ಗುಣಮುಖರಾಗಿ ಏಷ್ಯಾ ಕಪ್ ನಲ್ಲಿ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್ ನಲ್ಲಿ ಮಿಂಚಿದ್ದ ಕೆ.ಎಲ್. ರಾಹುಲ್ ಗೆ ಮತ್ತೊಮ್ಮೆ ನಾಯಕತ್ವ ನೀಡಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.

ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಉಪನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದ್ದು ಅನುಭವಿ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಅವರು ವಾಪಸ್ ಆಗಿದ್ದಾರೆ.

ಮೊದಲೆರಡು ಪಂದ್ಯಕ್ಕೆ ಟೀಂ ಇಂಡಿಯಾ:
ಕೆಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜಾ (ಉಪ ನಾಯಕ) ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ವಾಶಿಂಗ್ಟನ್ ಸುಂದರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

ಅಂತಿಮ ಪಂದ್ಯಕ್ಕೆ ಟೀಂ ಇಂಡಿಯಾ: ರೋಹಿತ್ ಶರ್ಮಾ(ನಾಯಕ), ಹಾರ್ದಿಕ್ ಪಾಂಡ್ಯ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಲ್ ರಾಹುಲ್, ಇಶಾನ್ ಕಿಶನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ವಾಶಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ಸೆಪ್ಟೆಂಬರ್ 22 ರಂದು ಮೊಹಾಲಿಯಲ್ಲಿ ಮೊದಲ ಪಂದ್ಯ, ಸೆಪ್ಟೆಂಬರ್ 24 ರಂದು ಇಂಧೋರ್ ಹಾಗೂ ತೃತೀಯ ಏಕದಿನ ಪಂದ್ಯವು ಸೆಪ್ಟೆಂಬರ್ 27 ರಂದು ರಾಜ್ಯ ಕೋಟ್ ನಲ್ಲಿ ನಡೆಯಲಿದೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

6 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

13 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

16 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

17 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago