ಆಸ್ಟ್ರೇಲಿಯಾ ವಿರುದ್ದ ಮೊದಲ ಪಂದ್ಯ ಗೆದ್ದು ಬೀಗಿದ ಭಾರತ, ಮೂರು ಮಾದರಿಯಲ್ಲೂ ನಾವೇ ನಂ 1 !

ಮೊಹಮದ್ ಶಮಿ ಅವರ ಅತ್ಯುತ್ತಮ ಬೌಲಿಂಗ್ ಹಾಗೂ ಬ್ಯಾಟ್ಸ್ಮನಗಳ ಸಂಘಟಿತ ಪ್ರಯತ್ನದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಕೆ.ಎಲ್. ರಾಹುಲ್ ನಾಯಕತ್ವದ ಭಾರತ ತಂಡ ಐದು ವಿಕೆಟ್ಗಳಿಂದ ಗೆದ್ದು ಬೀಗಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡದ ನಾಯಕ ಕೆ.ಎಲ್. ರಾಹುಲ್ ಅವರ ನಂಬಿಕೆಯನ್ನು ಬೌಲಿಂಗ್ ಪಡೆ ಉಳಿಸಿಕೊಂಡರು. ತಂಡದ ಮೊತ್ತ ಐದು ರನ್ ಗಳಿಸುವ ಸಂದರ್ಭದಲ್ಲಿ ಶಮಿ ಅವರ ಬೌಲಿಂಗ್ ನಲ್ಲಿ ಆರಂಭಿಕ ಆಟಗಾರ ಮಿಚೆಲ್ ಮಾಷ್೯ ವಿಕೆಟ್ ಒಪ್ಪಿಸಿದರು.

ನಂತರ ಒಂದಾದ ಡೇವಿಡ್ ವಾರ್ನರ್ (52) ಹಾಗೂ ಸ್ಟೀವನ್ ಸ್ಮಿತ್ (41) ರನ್ ಗಳಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.

ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವಿಭಾಗದಲ್ಲಿ ಲಬುಶನಗೆ (39), ಗ್ರೀನ್ (31), ಜೋಶ್ ಇಂಗ್ಲಿಷ್ (45), ಸ್ಪಾನಿಶ್(29) ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್(21) ಅವರ ಬ್ಯಾಟಿಂಗ್ ಬಲದಿಂದ 276 ರನ್ ಕಲೆಹಾಕಿತು.

ಭಾರತದ ಪರವಾಗಿ ವೇಗದ ಬೌಲರ್ ಮೊಹಮ್ಮದ್ ಶಮಿ ಐದು ವಿಕೆಟ್, ಬುಮ್ರಾ, ಜಡೇಜಾ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಪಡೆದು ಆಸ್ಟ್ರೇಲಿಯಾ ತಂಡವನ್ನು ಆಲೌಟ್ ಮಾಡಿದರು.

277 ರನ್ ಗಳ ಗುರಿ ಬೆನ್ನತ್ತಿದ್ದ ಭಾರತ ತಂಡ ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ (74) ಹಾಗೂ ರುತುರಾಜ್ ಗಾಯಕ್ವಾಡ್ (71) ರನ್ ಗಳಿಸುವ ಮೂಲಕ 142 ರನ್ ಗಳ ಜೊತೆಯಾಟ ನಡೆಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಮಧ್ಯಮ ಕ್ರಮಾಂಕದ ಆಟಗಾರರಾದ ಸೂರ್ಯ ಕುಮಾರ್ ಯಾದವ್ (50) ಹಾಗೂ ನಾಯಕ ಕೆ.ಎಲ್. ರಾಹುಲ್ ಅಜೇಯ (58) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿದರು.

ಭಾರತದ ಪರವಾಗಿ ಮಿಂಚಿದ ವೇಗಿ ಮೊಹಮ್ಮದ್ ಶಮಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು, ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿತು ಹಾಗೂ ಮೂರು ಮಾದರಿಯಲ್ಲೂ ನಂ 1 ತಂಡವಾಗಿ ವಿರಾಜಮಾನರಾಗಿದೆ.

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 hour ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 hour ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

2 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

5 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

11 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

12 hours ago