ಮೊಹಮದ್ ಶಮಿ ಅವರ ಅತ್ಯುತ್ತಮ ಬೌಲಿಂಗ್ ಹಾಗೂ ಬ್ಯಾಟ್ಸ್ಮನಗಳ ಸಂಘಟಿತ ಪ್ರಯತ್ನದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಕೆ.ಎಲ್. ರಾಹುಲ್ ನಾಯಕತ್ವದ ಭಾರತ ತಂಡ ಐದು ವಿಕೆಟ್ಗಳಿಂದ ಗೆದ್ದು ಬೀಗಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡದ ನಾಯಕ ಕೆ.ಎಲ್. ರಾಹುಲ್ ಅವರ ನಂಬಿಕೆಯನ್ನು ಬೌಲಿಂಗ್ ಪಡೆ ಉಳಿಸಿಕೊಂಡರು. ತಂಡದ ಮೊತ್ತ ಐದು ರನ್ ಗಳಿಸುವ ಸಂದರ್ಭದಲ್ಲಿ ಶಮಿ ಅವರ ಬೌಲಿಂಗ್ ನಲ್ಲಿ ಆರಂಭಿಕ ಆಟಗಾರ ಮಿಚೆಲ್ ಮಾಷ್೯ ವಿಕೆಟ್ ಒಪ್ಪಿಸಿದರು.
ನಂತರ ಒಂದಾದ ಡೇವಿಡ್ ವಾರ್ನರ್ (52) ಹಾಗೂ ಸ್ಟೀವನ್ ಸ್ಮಿತ್ (41) ರನ್ ಗಳಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.
ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವಿಭಾಗದಲ್ಲಿ ಲಬುಶನಗೆ (39), ಗ್ರೀನ್ (31), ಜೋಶ್ ಇಂಗ್ಲಿಷ್ (45), ಸ್ಪಾನಿಶ್(29) ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್(21) ಅವರ ಬ್ಯಾಟಿಂಗ್ ಬಲದಿಂದ 276 ರನ್ ಕಲೆಹಾಕಿತು.
ಭಾರತದ ಪರವಾಗಿ ವೇಗದ ಬೌಲರ್ ಮೊಹಮ್ಮದ್ ಶಮಿ ಐದು ವಿಕೆಟ್, ಬುಮ್ರಾ, ಜಡೇಜಾ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಪಡೆದು ಆಸ್ಟ್ರೇಲಿಯಾ ತಂಡವನ್ನು ಆಲೌಟ್ ಮಾಡಿದರು.
ಮಧ್ಯಮ ಕ್ರಮಾಂಕದ ಆಟಗಾರರಾದ ಸೂರ್ಯ ಕುಮಾರ್ ಯಾದವ್ (50) ಹಾಗೂ ನಾಯಕ ಕೆ.ಎಲ್. ರಾಹುಲ್ ಅಜೇಯ (58) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿದರು.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…